T20 World Cup ಸೂರ್ಯಕುಮಾರ್ ಯಾದವ್ ನಿಜವಾದ ಹೀರೋ, ಕೊಹ್ಲಿಯಲ್ಲ: ಗೌತಮ್ ಗಂಭೀರ್

Published : Oct 29, 2022, 12:06 PM IST
T20 World Cup ಸೂರ್ಯಕುಮಾರ್ ಯಾದವ್ ನಿಜವಾದ ಹೀರೋ, ಕೊಹ್ಲಿಯಲ್ಲ: ಗೌತಮ್ ಗಂಭೀರ್

ಸಾರಾಂಶ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮುಂದುವರೆದ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ಪ್ರದರ್ಶನ ವಿರಾಟ್ ಕೊಹ್ಲಿ ಆಟಕ್ಕಿಂತ ಸೂರ್ಯಕುಮಾರ್ ಯಾದವ್ ಆಟ ಗ್ರೇಟ್ ಎಂದ ಗಂಭೀರ್ ಮತ್ತೊಮ್ಮೆ ವಿರಾಟ್ ಕೊಹ್ಲಿ ಕಾಲೆದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್

ನವದೆಹಲಿ(ಅ.29): ಆಸ್ಟ್ರೇಲಿಯಾದಲ್ಲಿ ಆರಂಭವಾಗಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಮೊದಲೆರಡು ಪಂದ್ಯಗಳಲ್ಲೂ ಕೊಹ್ಲಿ ಅಜೇಯ ಅರ್ಧಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಗುರುವಾರ ನಡೆದ ನೆದರ್‌ಲೆಂಡ್ಸ್ ಎದುರಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡಾ ಅರ್ಧಶತಕ ಸಿಡಿಸುವ ಮೂಲಕ ಫಾರ್ಮ್‌ಗೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕೊನೆಯಲ್ಲಿ ಸೂರ್ಯಕುಮಾರ್ ಯಾದವ್ ಕೂಡಾ ಕೇವಲ 25 ಎಸೆತಗಳಲ್ಲಿ ಚುರುಕಿನ ಅರ್ಧಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದರು. ಇನ್ನು ಇದೆಲ್ಲದರ ನಡುವೆ ಸಮಯ ಸಿಕ್ಕಾಗಲೆಲ್ಲಾ ವಿರಾಟ್ ಕೊಹ್ಲಿ ಕಾಲೆಳೆಯುವ ಗೌತಮ್ ಗಂಭೀರ್, ಇದೀಗ ಮತ್ತೊಮ್ಮೆ ಅಚ್ಚರಿಯ ಹೇಳಿಕೆ ನೀಡಿ ಚರ್ಚೆಗೆ ಆಹಾರವಾಗಿದ್ದಾರೆ.

ಪಾಕಿಸ್ತಾನ ವಿರುದ್ದ ಸಮಯೋಚಿತ ಬ್ಯಾಟಿಂಗ್ ನಡೆಸಿದ್ದ ವಿರಾಟ್ ಕೊಹ್ಲಿ 82 ರನ್ ಬಾರಿಸುವ ಮೂಲಕ ಟೀಂ ಇಂಡಿಯಾ ಗೆಲುವಿಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನು ಸೂರ್ಯಕುಮಾರ್ ಯಾದವ್, ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ 10 ಎಸೆತಗಳನ್ನು ಎದುರಿಸಿ ಕೇವಲ 15 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಆದರೆ ನೆದರ್‌ಲೆಂಡ್ಸ್ ವಿರುದ್ದದ ಪಂದ್ಯದಲ್ಲಿ ಸೂರ್ಯ ಕೇವಲ 25 ಎಸೆತಗಳಲ್ಲಿ ಅಜೇಯ 51 ರನ್ ಬಾರಿಸುವ ಮೂಲಕ ಟೀಂ ಇಂಡಿಯಾ 179 ರನ್ ಕಲೆಹಾಕುವಲ್ಲಿ ನೆರವಾಗಿದ್ದರು. ಇದಕ್ಕುತ್ತರವಾಗಿ ನೆದರ್‌ಲೆಂಡ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 123 ರನ್ ಗಳಿಸಲಷ್ಟೇ ಶಕ್ತವಾಯಿತು. 

ಇನ್ನು ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಪ್ರದರ್ಶನವನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಗುಣಗಾನ ಮಾಡಿದ್ದಾರೆ. ಸೂರ್ಯಕುಮಾರ್ ಯಾದವ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿ ಕೇವಲ ಒಂದು ವರ್ಷ ಏಳು ತಿಂಗಳಷ್ಟೇ ಕಳೆದಿವೆ. ಈಗಾಗಲೇ ಸೂರ್ಯಕುಮಾರ್ ಯಾದವ್ ಹಲವಾರು ಪಂದ್ಯಗಳಲ್ಲಿ ಭಾರತಕ್ಕೆ ಏಕಾಂಗಿಯಾಗಿ ಗೆಲುವು ತಂದುಕೊಟ್ಟಿದ್ದಾರೆ. ಅದರಲ್ಲೂ ನೆದರ್‌ಲೆಂಡ್ಸ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಜತೆಗೂಡಿ ಆಡಿದ ಬ್ಯಾಟಿಂಗ್ ಅತ್ಯದ್ಭುತವಾಗಿತ್ತು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

T20 World Cup ಆತನನ್ನು ಕಿತ್ತೊಗೆಯಿರಿ: ಮತ್ತೆ ಫೇಲ್ ಆದ ಕೆ ಎಲ್ ರಾಹುಲ್ ವಿರುದ್ದ ಮುಗಿಬಿದ್ದ ಕ್ರಿಕೆಟ್ ಫ್ಯಾನ್ಸ್‌..!

ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿಯುವುದರಿಂದ ಮೊದಲ ಆರು ಓವರ್‌ನ ಬ್ಯಾಟಿಂಗ್ ಪವರ್‌ ಪ್ಲೇ ನಲ್ಲಿ ಅವಕಾಶ ಸಿಗುವುದು ಕಡಿಮೆ. ಹೀಗಿದ್ದೂ ಅದ್ಭುತ ಸ್ಟ್ರೈಕ್‌ರೇಟ್‌ನಲ್ಲಿ ಇಷ್ಟು ಬೇಗ 1000ದ ಸಮೀಪದ ರನ್ ಗಳಿಸುವುದು ಸುಲಭವೇನಲ್ಲ. ಸೂರ್ಯಕುಮಾರ್ ಯಾದವ್ ಸ್ಪೋಟಕ ಬ್ಯಾಟಿಂಗ್ ಮಾಡಿದ್ದರಿಂದ ವಿರಾಟ್ ಕೊಹ್ಲಿ ಮೇಲಿದ್ದ ಭಾರ ಕಡಿಮೆಯಾಯಿತು. ರೋಹಿತ್ ಶರ್ಮಾ, ಕೆ ಎಲ್ ರಾಹುಲ್ ಅವರಿಗಿಂತ ಸೂರ್ಯಕುಮಾರ್ ಯಾದವ್ ನಿಜವಾದ ಆಕ್ರಮಣಕಾರಿ ಆಟಗಾರ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ನೆದರ್‌ಲೆಂಡ್ಸ್ ವಿರುದ್ದದ ಪಂದ್ಯದಲ್ಲಿ ಟೀಂ ಇಂಡಿಯಾದ ಮೂವರು ಬ್ಯಾಟರ್‌ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕ ಸಿಡಿಸಿದ್ದರು. ರೋಹಿತ್ ಶರ್ಮಾ 39 ಎಸೆತಗಳಲ್ಲಿ 53 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ ಅಜೇಯ 62 ರನ್ ಬಾರಿಸಿದ್ದರು. ಇನ್ನು ಸ್ಪೋಟಕ ಅರ್ಧಶತಕ ಚಚ್ಚಿದ ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?