ಶ್ರೀಲಂಕಾ ಟೆಸ್ಟ್ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ; KL ರಾಹುಲ್‌ಗೆ ವಿಶೇಷ ಜವಾಬ್ದಾರಿ

Published : Jul 28, 2026, 10:21 AM IST
kl rahl and shubman gill

ಸಾರಾಂಶ

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದ್ದು, ಯುವ ಆಟಗಾರ ಶುಭಮನ್ ಗಿಲ್ ಅವರಿಗೆ ನಾಯಕತ್ವ ನೀಡಲಾಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ಉಪನಾಯಕರಾಗಿದ್ದು, ತಂಡದಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಈ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ದೃಷ್ಟಿಯಿಂದ ಭಾರತಕ್ಕೆ ನಿರ್ಣಾಯಕವಾಗಿದೆ.

ಮುಂಬೈ: ಶ್ರೀಲಂಕಾ ವಿರುದ್ಧ ನಡೆಯಲಿರುವ ಎರಡು ಪಂದ್ಯಗಳ ಮಹತ್ವದ ಟೆಸ್ಟ್ ಸರಣಿಗೆ ಬಿಸಿಸಿಐ (BCCI) ಬುಧವಾರ ಭಾರತ ತಂಡವನ್ನು ಘೋಷಿಸಿದೆ. ಯುವ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ತಂಡದ ಸಾರಥ್ಯ ವಹಿಸಲಾಗಿದ್ದು, ಕನ್ನಡಿಗ ಕೆ.ಎಲ್. ರಾಹುಲ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ಗಿಲ್ ಸಾರಥ್ಯದಲ್ಲಿ ಯುವ ಪಡೆ

ತಂಡದಲ್ಲಿ ರಿಷಭ್ ಪಂತ್ ಮತ್ತು ಧ್ರುವ್ ಜುರೆಲ್ ವಿಕೆಟ್ ಕೀಪರ್‌ಗಳಾಗಿ ಸ್ಥಾನ ಪಡೆದಿದ್ದಾರೆ. ದೇವದತ್ ಪಡಿಕ್ಕಲ್ ಮತ್ತು ಪ್ರಸಿದ್ಧ ಕೃಷ್ಣ ಅವರನ್ನೊಳಗೊಂಡ ಕನ್ನಡಿಗರ ದಂಡು ತಂಡದಲ್ಲಿದೆ. ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಯುವ ಆಟಗಾರ ಸಾಯಿ ಸುದರ್ಶನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆಯಾದರೂ, ಇವರ ಆಟವು ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (COE) ನೀಡುವ ಫಿಟ್‌ನೆಸ್ ಕ್ಲಿಯರೆನ್ಸ್ ಮೇಲೆ ಅವಲಂಬಿತವಾಗಿದೆ. ಇನ್ನು ಆಲ್-ರೌಂಡರ್ ವಾಷಿಂಗ್ಟನ್ ಸುಂದರ್ ವೈಯಕ್ತಿಕ ಕಾರಣಗಳಿಂದಾಗಿ ಮೊದಲ ಟೆಸ್ಟ್ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ.

ಭಾರತ ಟೆಸ್ಟ್ ತಂಡ ಹೀಗಿದೆ

ಶುಭಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮಾನವ್ ಸುತಾರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ ಪಡಿಕ್ಕಲ್, ಸಾರಂಶ್ ಜೈನ್.

ಸರಣಿಯ ವೇಳಾಪಟ್ಟಿ

ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಗಸ್ಟ್ 7 ರಿಂದ ಕೊಲಂಬೊದಲ್ಲಿ ನಾಲ್ಕು ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದೆ. ಮೊದಲ ಟೆಸ್ಟ್ ಆಗಸ್ಟ್ 15 ರಿಂದ 19 (ಗಾಲೆ ಇಂಟರ್ನ್ಯಾಷನಲ್ ಸ್ಟೇಡಿಯಂ) ನಡೆದ್ರೆ, ಎರಡನೇ ಟೆಸ್ಟ್ ಆಗಸ್ಟ್ 23 ರಿಂದ 27 (ಎಸ್.ಎಸ್.ಸಿ ಮೈದಾನ, ಕೊಲಂಬೊ) ರಿಂದ ಆರಂಭವಾಗಲಿದೆ. ಈ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ದೃಷ್ಟಿಯಿಂದ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಯುವ ನಾಯಕ ಗಿಲ್ ತಂಡವನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Team india: ಗೌತಮ್ ಗಂಭೀರ್‌ ಇನ್‌ಸ್ಟಾಗ್ರಾಮ್ ಪೋಸ್ಟ್‌ ವಿವಾದ; ಸಂಕಷ್ಟದಲ್ಲಿ ಗೌತಿ ಹುದ್ದೆ!
​"ರಜತ್ ಪಾಟಿದಾರ್ ಮುಂದೆ ಇವನೇನೂ ಅಲ್ಲ!": 23 ವರ್ಷದ ಯುವ ಆಟಗಾರನಿಗೆ ಗೇಟ್‌ಪಾಸ್ ನೀಡಲು ಮಾಜಿ ಆಯ್ಕೆಗಾರ ಆಗ್ರಹ