Breaking: ಸಿಡ್ನಿ ಟೆಸ್ಟ್‌ನಿಂದ ಹೊರಗುಳಿಯುವ ನಿರ್ಧಾರ ಮಾಡಿದ ರೋಹಿತ್‌ ಶರ್ಮ

Published : Jan 02, 2025, 06:15 PM ISTUpdated : Jan 02, 2025, 06:24 PM IST
Breaking: ಸಿಡ್ನಿ ಟೆಸ್ಟ್‌ನಿಂದ ಹೊರಗುಳಿಯುವ ನಿರ್ಧಾರ ಮಾಡಿದ ರೋಹಿತ್‌ ಶರ್ಮ

ಸಾರಾಂಶ

ಭಾರತ ಟೆಸ್ಟ್‌ ತಂಡ ನಾಯಕ ರೋಹಿತ್‌ ಶರ್ಮ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ 5ನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದಾರೆ.  

ಸಿಡ್ನಿ (ಜ.2): ಭಾರತ ಟೆಸ್ಟ್‌ ತಂಡ ನಾಯಕ ರೋಹಿತ್‌ ಶರ್ಮ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ 5ನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ. ಸಿಡ್ನಿಯಲ್ಲಿ ಶುಕ್ರವಾರದಿಂದ ಟೆಸ್ಟ್‌ ಆರಂಭವಾಗಬೇಕಿತ್ತು. ಟೆಸ್ಟ್‌ ಪಂದ್ಯಕ್ಕೆ ಒಂದು ದಿನ ಮುನ್ನವೇ ರೋಹಿತ್‌ ಶರ್ಮ ಪಂದ್ಯದಿಂದ ಹೊರಗುಳಿಯುವ ನಿರ್ಧಾರ ಪ್ರಕಟ ಮಾಡಿದ್ದಾರೆ. ಅದರೊಂದಿಗೆ ಅವರು ಸಿಡ್ನಿ ಟೆಸ್ಟ್‌ ಪಂದ್ಯದೊಂದಿಗೆ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳುವ ಆಸೆ ಕೂಡ ಭಗ್ನಗೊಂಡಿದೆ. ಅಂತಿಮ ಟೆಸ್ಟ್‌ನಲ್ಲಿ ಜಸ್‌ಪ್ರೀತ್‌ ಬುಮ್ರಾ ಟೀಮ್‌ ಇಂಡಿಯಾದ ನೇತೃತ್ವದ ವಹಿಸಿಕೊಳ್ಳುವುದು ಖಚಿತವಾಗಿದೆ. ಇಂದು ಸಿಡ್ನಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಟೀಮ್‌ ಇಂಡಿಯಾ ಕೋಚ್‌ ಗೌತಮ್‌ ಗಂಭೀರ್‌ ಕೂಡ ರೋಹಿತ್‌ ಶರ್ಮ ಪಂದ್ಯದಲ್ಲಿ ಆಡುವ ಬಗ್ಗೆ ಖಚಿತವಾಗಿ ತಿಳಿಸಿರಲಿಲ್ಲ. ಇದರ ನಡುವೆ ತಂಡದಿಂದ ಕೈಬಿಡುವ ಮುನ್ನವೇ ಸ್ವತಃ ರೋಹಿತ್‌ ಶರ್ಮ ತಾವು ಸಿಡ್ನಿ ಪಂದ್ಯದಿಂದ ಹೊರಗುಳಿಯುವುದಾಗಿ ಟೀಮ್‌ ಮ್ಯಾನೆಜ್‌ಮೆಂಟ್‌ಗೆ ತಿಳಿಸಿದ್ದಾರೆ. ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ರೋಹಿತ್‌ ಶರ್ಮ ಆಡಿದ ಐದು ಇನ್ನಿಂಗ್ಸ್‌ಗಳಿಂದ ಕೇವಲ 31 ರನ್‌ ಬಾರಿಸಿದ್ದಾರೆ.

ಶುಭ್‌ಮನ್‌ ಗಿಲ್‌ ಪ್ಲೇಯಿಂಗ್‌ ಇಲೆವೆನ್‌ಗೆ ವಾಪಾಸಾಗಲಿದ್ದು, ಕೆಎಲ್‌ ರಾಹುಲ್‌ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ.  ಗಾಯಗೊಂಡಿರುವ ಅಕ್ಷದೀಪ್‌ ಸಿಂಗ್‌ ಬದಲು ಕನ್ನಡಿಗ ಪ್ರಸಿದ್ಧ ಕೃಷ್ಣ ಸ್ಥಾನ ಪಡೆಯಲಿದ್ದಾರೆ.

ಸಿಡ್ನಿ ಟೆಸ್ಟ್‌ನಲ್ಲಿ ಆಡದೇ ಇರುವ ತಮ್ಮ ನಿರ್ಧಾರವನ್ನು ಕೋಚ್‌ ಗೌತಮ್‌ ಗಂಭೀರ್‌ ಹಾಗೂ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್‌ ಅಗರ್ಕರ್‌ಗೆ ರೋಹಿತ್‌ ಶರ್ಮ ತಿಳಿಸಿದ್ದು, ಇಬ್ಬರೂ ಕೂಡ ಇದಕ್ಕೆ ಒಪ್ಪಿಕೊಂಡಿದ್ದಾರೆ. ಭಾರತ ತಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ಗೆ ಅರ್ಹತೆ ಪಡೆಯುವುದು ಅನುಮಾನವಾಗಿದೆ. ಇನ್ನೊಂದೆಡೆ, ಮುಂದಿನ ಇಂಗ್ಲೆಂಡ್‌ ವಿರುದ್ಧದ ಸರಣಿಯೊಂದಿಗೆ 4ನೇ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ನ 2 ವರ್ಷದ ಸೈಕಲ್‌ ಆರಂಭವಾಗಲಿದೆ. ಆದರೆ, ರೋಹಿತ್‌ ಇದರ ಭಾಗವಾಗಿಲ್ಲ. ಈ ಎಲ್ಲದರಿಂದಾಗಿ 2024ರ ಕೊನೆಯಲ್ಲಿ ಆಡಿದ ಬಾಕ್ಸಿಂಗ್‌ ಡೇ ಟೆಸ್ಟ್‌ ರೋಹಿತ್‌ ಶರ್ಮ ಅವರ ವಿದಾಯದ ಟೆಸ್ಟ್‌ ಆಗಿರುವ ಸಾಧ್ಯತೆಯೇ ಹೆಚ್ಚಿದೆ.

ಸಿಡ್ನಿ ಮ್ಯಾಚ್‌ ಬಳಿಕ ಟೆಸ್ಟ್‌ ಕ್ರಿಕೆಟ್‌ಗೆ ರೋಹಿತ್‌ ಶರ್ಮ ವಿದಾಯ?

ಮೆಲ್ಬೋರ್ನ್‌ ಟೆಸ್ಟ್‌ನಿಂದ ಡ್ರಾಪ್‌ ಆಗಿದ್ದ ಶುಭಮನ್‌ ಗಿಲ್‌ ತಂಡಕ್ಕೆ ವಾಪಸಾಗಿದ್ದು, ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಮಾಡಲಿದ್ದಾರೆ. ಕೆಎಲ್‌ ರಾಹುಲ್‌ ಹಾಗೂ ಯಶಸ್ವಿ ಜೈಸ್ವಾಲ್‌ ಇನ್ನಿಂಗ್ಸ್ ಆರಂಭಿಸಲಿದ್ದರೆ, ರಿಷಬ್‌ ಪಂತ್‌ ಸ್ಥಾನ ಸದ್ಯಕ್ಕೆ ಸೇಫ್‌ ಆಗಿದೆ.

2025ರಲ್ಲಿ ಟೀಮ್‌ ಇಂಡಿಯಾದ ಆಡಲಿರುವ ಕ್ರಿಕೆಟ್‌ ಸರಣಿಗಳ ವೇಳಾಪಟ್ಟಿ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಬದಲಾಗುತ್ತಾ? 16,700 ಕೋಟಿ ಡೀಲ್ ನಂತರ ಮಹತ್ವದ ಅಪ್‌ಡೇಟ್ಸ್ ಕೊಟ್ಟ ಅನನ್ಯಾ ಬಿರ್ಲಾ!
ಸದನದಲ್ಲೂ IPL Ticket ಹವಾ; ಕ್ರಿಕೆಟ್ ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರವನ್ನು ಬೇಡಿದ ಶಾಸಕರು!