
ಮುಂಬೈ(ಜು.09): ಲಾಕ್ಡೌನ್ನಿಂದಾಗಿ ಮನೆಯಲ್ಲೇ ಬಂಧಿಯಾಗಿದ್ದ ಭಾರತೀಯ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್, 3 ತಿಂಗಳ ಬಳಿಕ ಮೊದಲ ಬಾರಿಗೆ ಭೇಟಿಯಾಗಿದ್ದಾರೆ. ಅದು ಊಟದ ವಿಚಾರಕ್ಕಾಗಿ.
ತಮ್ಮ ನಿವಾಸದಿಂದ ಕೇವಲ ಅರ್ಧ ಕಿ.ಮೀ. ದೂರದಲ್ಲಿರುವ ವಿರಾಟ್ಗೆ ಶ್ರೇಯಸ್ ತಮ್ಮ ತಾಯಿ ಮಾಡಿದ ನೀರ್ ದೋಸೆಯನ್ನು ಕೊಟ್ಟಿದ್ದಾರೆ. ನೀರ್ ದೋಸೆ ಸವಿದ ವಿರಾಟ್, ‘ಇತ್ತೀಚಿನ ದಿನಗಳಲ್ಲಿ ಇಷ್ಟು ರುಚಿಯಾದ ದೋಸೆಯನ್ನು ತಿಂದೇ ಇರಲಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ. ಕೊಹ್ಲಿ ತಮ್ಮ ಮನೆಯಲ್ಲಿ ಮಾಡಿದ ಮಶ್ರೂಮ್ ಬಿರ್ಯಾನಿಯನ್ನು ಶ್ರೇಯಸ್ ಕುಟುಂಬಕ್ಕೆ ನೀಡಿದ್ದಾರೆ.
ಈ ಟ್ವೀಟ್ ನೋಡುತ್ತಿದ್ದಂತೆ ಟೀಂ ಇಂಡಿಯಾ ಮಣಿಕಟ್ಟು ಸ್ಪಿನ್ನರ್ ಯುಜುವೇಂದ್ರ ಚಹಲ್ ನಾಯಕ ಕೊಹ್ಲಿಗೆ ವಿಶೇಷ ಮನವಿಯನ್ನು ಮಾಡಿಕೊಂಡಿದ್ದಾರೆ. ಅಣ್ಣಾ ನಂಗೂ ಬಿರಿಯಾನಿ ಕಳಿಸಿ, ನಾನು ನಿಮ್ಮ ಮನೆಯಿಂದ ಕೇವಲ 1400 ಕಿಲೋ ಮೀಟರ್ ದೂರದಲ್ಲಿದ್ದೇನೆ ಅಷ್ಟೇ ಎಂದು ಕಮೆಂಟ್ ಮಾಡಿದ್ದಾರೆ.
ಇಂಗ್ಲೆಂಡ್-ವಿಂಡೀಸ್ ಮೊದಲ ಟೆಸ್ಟ್ಗೆ ಮಳೆ ಕಾಟ!
ಶ್ರೀಲಂಕಾ ವಿರುದ್ಧ 2008ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿರುವ ವಿರಾಟ್ ಕೊಹ್ಲಿ ಅತ್ಯಂತ ಸದೃಢ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ 59.33ರ ಸರಾಸರಿಯಲ್ಲಿ 11,867 ರನ್ ಬಾರಿಸಿದ್ದಾರೆ. ಇನ್ನು 86 ಟೆಸ್ಟ್ ಪಂದ್ಯಗಳನ್ನಾಡಿ 27 ಶತಕ ಸಹಿತ 7240 ರನ್ ಚಚ್ಚಿದ್ದಾರೆ. ಇನ್ನು ಟಿ20 ಕ್ರಿಕೆಟ್ನಲ್ಲೂ 50.80 ಸರಾಸರಿಯಲ್ಲಿ 2794 ರನ್ ಸಿಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.