ಮಹಿ ಬರ್ತ್‌ ಡೇಗೆ ಹೃದಯಸ್ಪರ್ಷಿಯಾಗಿ ಶುಭಕೋರಿದ ಕೊಹ್ಲಿ..!

Suvarna News   | Asianet News
Published : Jul 07, 2020, 04:20 PM IST
ಮಹಿ ಬರ್ತ್‌ ಡೇಗೆ ಹೃದಯಸ್ಪರ್ಷಿಯಾಗಿ ಶುಭಕೋರಿದ ಕೊಹ್ಲಿ..!

ಸಾರಾಂಶ

ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್ ಮೂಲಕ ಧೋನಿಗೆ ಉತ್ತಮ ಆರೋಗ್ಯ ಹಾಗೂ ಸದಾಕಾಲ ಸಂತೋಷದಿಂದಿರಿ ಎಂದು ಕಿಂಗ್ ಕೊಹ್ಲಿ ಶುಭ ಕೊರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ(ಜು.07): ಭಾರತ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು(ಜು.07) 39ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದ ಮೂಲಕ ಮಹಿಗೆ ಹೃದಯಸ್ಪರ್ಷಿಯಾದ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್ ಮೂಲಕ ಧೋನಿಗೆ ಉತ್ತಮ ಆರೋಗ್ಯ ಹಾಗೂ ಸದಾಕಾಲ ಸಂತೋಷದಿಂದಿರಿ ಎಂದು ಕಿಂಗ್ ಕೊಹ್ಲಿ ಶುಭ ಕೊರಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಮಹಿ ಭಾಯಿ. ಸದಾಕಾಲ ಉತ್ತಮ ಆರೋಗ್ಯ ಹಾಗೂ ಸಂತೋಷದಿಂದಿರಿ. ದೇವರು ಒಳ್ಳೆಯದು ಮಾಡಲಿ ಎಂದು ಶುಭ ಹಾರೈಸಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗನಿಗೆ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ.

ವಿರಾಟ್ ಕೊಹ್ಲಿಗೂ ಮುನ್ನ ಹಲವು ಮಂದಿಗೆ CSK ನಾಯಕನಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ರೋಹಿತ್ ಶರ್ಮಾ, ವಿರೇಂದ್ರ ಸೆಹ್ವಾಗ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಕ್ರಿಕೆಟಿಗರು ಮಹಿ ಹುಟ್ಟುಹಬ್ಬಕ್ಕೆ ವಿನೂತನವಾಗಿ ಶುಭ ಕೋರಿದ್ದಾರೆ.

#Happy Birthday MSD - ಕ್ಯಾಪ್ಟನ್‌ ಕೂಲ್‌ ಬಗ್ಗೆ ಗೊತ್ತಿರದ ಸಂಗತಿಗಳಿವು

ಮೂರು ಐಸಿಸಿ ಟ್ರೋಫಿ ಗೆದ್ದುಕೊಟ್ಟ ಏಕೈಕ ನಾಯಕ ಎನಿಸಿಕೊಂಡಿರುವ ಧೋನಿ, ವಿಕೆಟ್‌ ಕೀಪಿಂಗ್‌ನಲ್ಲೂ ತಮಗ್ಯಾರು ಸಾಟಿಯಿಲ್ಲ ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಏಕಾಂಗಿಯಾಗಿ ಪಂದ್ಯದ ದಿಕ್ಕನ್ನೇ ಬದಲಿಸುವ ಸಾಮರ್ಥ್ಯ ಧೋನಿಗಿದೆ. 2019ರ ಐಸಿಸಿ ವಿಶ್ವಕಪ್ ಸೆಮಿಫೈನಲ್ ಬಳಿಕ ಧೋನಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. ಧೋನಿ ಕ್ರಿಕೆಟ್ ಭವಿಷ್ಯ ಸದ್ಯಕ್ಕಂತೂ ಚಿದಂಬರ ರಹಸ್ಯವಾಗಿಯೇ ಉಳಿದಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಲೆಗೆ 20 ಹೊಲಿಗೆ, ಭುಜಕ್ಕೆ ಬಲವಾದ ಪೆಟ್ಟು! ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡದ್ದಕ್ಕೆ ಕೋಚ್‌ ಮೇಲೆ ಆಟಗಾರರ ಮಾರಣಾಂತಿಕ ಹಲ್ಲೆ!
ಆ ಒಂದು ಫೋಟೋ: ಪಾಪರಾಜಿಗಳ ಮೇಲೆ ಹಾರ್ದಿಕ್ ಪಾಂಡ್ಯ ಕೆಂಡಾಮಂಡಲ!