
ನವದೆಹಲಿ[ಡಿ.15]: ಎಂ.ಎಸ್.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಗುಟ್ಟು ಮುಂದುವರಿದಿದ್ದು, ರಿಷಭ್ ಪಂತ್ ಎಷ್ಟೇ ಅವಕಾಶ ನೀಡಿದರೂ ನಿರೀಕ್ಷೆ ಉಳಿಸಿಕೊಳ್ಳುತ್ತಿಲ್ಲ. ಹೀಗಾಗಿ, 2020ರ ಟಿ20 ವಿಶ್ವಕಪ್ಗೆ ಕೆ.ಎಲ್.ರಾಹುಲ್ರನ್ನು ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸ್ಥಾನಕ್ಕೆ ಪರಿಗಣಿಸುವ ಸಾಧ್ಯತೆ ಎಂದು ಭಾರತ ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
ಶಾಸ್ತ್ರಿ ಹೇಳಿಕೆ ಭಾರತೀಯ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಧೋನಿ ಭವಿಷ್ಯದ ಬಗ್ಗೆ ಮಾತನಾಡಿರುವ ಶಾಸ್ತ್ರಿ, ‘ಮಾನಸಿಕವಾಗಿ ಅವರು ದಣಿದಿದ್ದಾರೆ. ಸಹಜವಾಗಿಯೇ ಅವರಿಗೆ ವಿಶ್ರಾಂತಿಯ ಅಗತ್ಯವಿತ್ತು. ಇನ್ಮುಂದೆ ಏಕದಿನ ಕ್ರಿಕೆಟ್ನಲ್ಲಿ ಅವರು ಆಡುವುದು ಅನುಮಾನ. ಟಿ20 ತಂಡಕ್ಕೆ ಮರಳಬಹುದು. ಐಪಿಎಲ್ನಲ್ಲಿ ಆಡಲಿದ್ದಾರೆ’ ಎಂದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.