ಬಡ ಮಕ್ಕಳಿಗೆ ನೆರವಾಗಲು ಬ್ಯಾಟ್‌ ಹರಾಜಿಗೆ ಮುಂದಾದ ಕೆ ಎಲ್ ರಾಹುಲ್‌

Published : Apr 21, 2020, 08:04 AM IST
ಬಡ ಮಕ್ಕಳಿಗೆ ನೆರವಾಗಲು ಬ್ಯಾಟ್‌ ಹರಾಜಿಗೆ ಮುಂದಾದ ಕೆ ಎಲ್ ರಾಹುಲ್‌

ಸಾರಾಂಶ

ಟೀಂ ಇಂಡಿಯಾ ಕ್ರಿಕೆಟಿಗ ಕೆ.ಎಲ್. ರಾಹುಲ್ ತಮ್ಮ ಜನ್ಮದಿನದಂದೇ ಬಡ ಮಕ್ಕಳ ಕಲ್ಯಾಣ ನಿಧಿಗೆ ಧನ ಸಹಾಯ ಮಾಡಲು ಮುಂದಾಗಿದ್ದು, ತಮ್ಮಲ್ಲಿರುವ ಅಮೂಲ್ಯ ಕ್ರೀಡಾ ಪರಿಕರಗಳ ಹರಾಜಿಗೆ ಮುಂದಾಗಿದ್ದಾರೆ. ಈ ಕುರಿತಾಧ ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಏ.21): ಭಾರತ ಕ್ರಿಕೆಟ್‌ ತಂಡದ ಬ್ಯಾಟ್ಸ್‌ಮನ್‌, ಕರ್ನಾಟಕದ ಕೆ.ಎಲ್‌.ರಾಹುಲ್‌ ಬಡ ಮಕ್ಕಳ ಕಲ್ಯಾಣ ನಿಧಿಗೆ ಹಣ ಸಹಾಯ ಮಾಡಲು ಮುಂದಾಗಿದ್ದು, ಕಳೆದ ವರ್ಷ ವಿಶ್ವಕಪ್‌ನಲ್ಲಿ ತಾವು ಬಳಸಿದ ಬ್ಯಾಟ್‌ ಹರಾಜು ಮಾಡಲು ನಿರ್ಧರಿಸಿದ್ದಾರೆ. 

ಭಾರತ್‌ ಆರ್ಮಿ ಎನ್ನುವ ಸಂಸ್ಥೆ ಜತೆ ಕೈಜೋಡಿಸಿರುವ ರಾಹುಲ್‌, ಬ್ಯಾಟ್‌, ಏಕದಿನ, ಟೆಸ್ಟ್‌, ಟಿ20 ಜೆರ್ಸಿಗಳು, ಹೆಲ್ಮೆಟ್‌ ಹಾಗೂ ಗ್ಲೌಸ್‌ಗಳನ್ನು ಆನ್‌ಲೈನ್‌ನಲ್ಲಿ ಹರಾಜು ಮಾಡಿ ಅದರಿಂದ ಬರುವ ಹಣವನ್ನು ಬಡ ಮಕ್ಕಳ ಕ್ಷೇಮಾಭಿವೃದ್ಧಿಗೆ ನೀಡುವುದಾಗಿ ಟ್ವೀಟರ್‌ನಲ್ಲಿ ತಿಳಿಸಿದ್ದಾರೆ.

ಕೆ.ಎಲ್ ರಾಹುಲ್ ತಮ್ಮ ಹುಟ್ಟುಹಬ್ಬದ ದಿನದಂದೇ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಸೋಮವಾರದಿಂದಲೇ ಹರಾಜು ಪ್ರಕ್ರಿಯೆ ಆರಂಭವಾಗಿದೆ. 2019ರ ವಿಶ್ವಕಪ್‌ನಲ್ಲಿ ಬಳಸಿದ ಬ್ಯಾಟ್(ಬ್ಯಾಟ್ ಮೇಲೆ ರಾಹುಲ್ ಹಸ್ತಾಕ್ಷರವಿದೆ), ಟೆಸ್ಟ್, ಏಕದಿನ ಹಾಗೂ ಟಿ20 ಪಂದ್ಯದಲ್ಲಿ ಧರಿಸಿದ್ದ ಜೆರ್ಸಿ ಹಾಗೂ ಬ್ಯಾಟಿಂಗ್ ಗ್ಲೌಸ್, ಹೆಲ್ಮೆಟ್ ಹಾಗೂ ಪ್ಯಾಡ್ಸ್‌ಗಳು ಹರಾಜಿನಲ್ಲಿ ಲಭ್ಯವಿವೆ.

ಹರಾಜಿನಲ್ಲಿ ಭಾಗವಹಿಸಿ ನನ್ನ ಹಾಗೂ ಮಕ್ಕಳ ಮೇಲೆ ಸ್ವಲ್ಪ ಪ್ರೀತಿ ತೋರಿ. ಇಂತಹ ಸಂಕಷ್ಟದ ಸಮಯದಲ್ಲಿ ಎಲ್ಲರೂ ಒಂದಾಗಿ ಕೊರೋನಾ ವಿರುದ್ಧ ಹೋರಾಡೋಣ, ಇನ್ನಷ್ಟು ಬಲಿಷ್ಠರಾಗೋಣ ಎಂದು ರಾಹುಲ್ ಹೇಳಿದ್ದಾರೆ.

ನನ್ನವನಿಗೆ ಹುಟ್ಟು ಹಬ್ಬದ ಶುಭಾಶಯ, ಕೆಎಲ್ ರಾಹುಲ್‌ಗೆ ಅತಿಯಾ ಶೆಟ್ಟಿ ಹಾರೈಕೆ!
 
ಜಾಗತಿಕ ಹೆಮ್ಮಾರಿ ಕೊರೋನಾ ವೈರಸ್‌ಗೆ ವಿಶ್ವದಾದ್ಯಂತ 24 ಲಕ್ಷ ಜನ ತುತ್ತಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಭಾರತದಲ್ಲೂ ಕೋವಿಡ್ 19 ಪೀಡಿತರ ಸಂಖ್ಯೆ 17 ಸಾವಿರದ ಗಡಿ ದಾಟಿದೆ. ಹಲವು ಕ್ರೀಡಾತಾರೆಯಲ್ಲಿ ಈಗಾಗಲೇ ತಮ್ಮ ಕೈಲಾದ ಆರ್ಥಿಕ ಸಹಾಯವನ್ನು ಮಾಡಿದ್ದಾರೆ. ಇದರ ಜತೆಗೆ ಕೊರೋನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಸೂಪರ್‌ಸ್ಟಾರ್ ತಯಾರಾಗುತ್ತಿದ್ದಾನೆ’; ವೈಭವ್ ಸೂರ್ಯವಂಶಿ ಬಗ್ಗೆ ಕೃಷ್ಣಮಾಚಾರಿ ಶ್ರೀಕಾಂತ್ ಭರ್ಜರಿ ಭವಿಷ್ಯ
ಮಹಿಳಾ ಏಷ್ಯಾಕಪ್‌ ಟಿ20: ಇಂದು ಭಾರತ ಎದುರು ಪಾಕಿಸ್ತಾನಕ್ಕೆ ಡು ಆರ್ ಡೈ ಮ್ಯಾಚ್! ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಎಲ್ಲಿ?