ಟೀಂ ಇಂಡಿಯಾಗೆ ಮತ್ತೊಂದು ಶಾಕ್‌: ಟೆಸ್ಟ್‌ ಸರಣಿಯಿಂದ ಹೊರಬಿದ್ದ ರಾಹುಲ್‌

Suvarna News   | Asianet News
Published : Jan 05, 2021, 01:39 PM IST
ಟೀಂ ಇಂಡಿಯಾಗೆ ಮತ್ತೊಂದು ಶಾಕ್‌: ಟೆಸ್ಟ್‌ ಸರಣಿಯಿಂದ ಹೊರಬಿದ್ದ ರಾಹುಲ್‌

ಸಾರಾಂಶ

ಬಾರ್ಡರ್‌-ಗವಾಸ್ಕರ್ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಕೆ.ಎಲ್‌. ರಾಹುಲ್‌ ಆಸ್ಟ್ರೇಲಿಯಾ ವಿರುದ್ದ ಕೊನೆಯ ಎರಡು ಟೆಸ್ಟ್‌ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಮೆಲ್ಬರ್ನ್‌(ಜ.05): ಬಾರ್ಡರ್‌-ಗವಾಸ್ಕರ್ ಟೆಸ್ಟ್‌ ಸರಣಿಯ ಮೂರನೇ ಟೆಸ್ಟ್‌ ಪಂದ್ಯಕ್ಕೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಅಭ್ಯಾಸ ನಡೆಸುತ್ತಿದ್ದ ಕನ್ನಡಿಗ ಕೆ. ಎಲ್ ರಾಹುಲ್‌ ಗಾಯಕ್ಕೆ ತುತ್ತಾಗಿದ್ದು, ಉಳಿದೆರಡು ಟೆಸ್ಟ್‌ ಪಂದ್ಯಗಳಿಂದ ಹೊರಬಿದ್ದಿದ್ದಾರೆ.

ಹೌದು, ಮೂರನೇ ಟೆಸ್ಟ್‌ ಪಂದ್ಯ ಆರಂಭಕ್ಕೆ ಕೇವಲ 2 ದಿನಗಳು ಬಾಕಿ ಇರುವಾಗಲೇ ಮಣಿಕಟ್ಟು ನೋವಿಗೆ ತುತ್ತಾಗಿರುವ ಕನ್ನಡಿಗ ಕೆ.ಎಲ್. ರಾಹುಲ್ ಮುಂಬರುವ ಕೊನೆ ಎರಡು ಟೆಸ್ಟ್‌ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಕೊನೆಯ ಎರಡು ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುರಿತಂತೆ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ರಾಹುಲ್ ತಂಡದಿಂದ ಹೊರಬಿದ್ದಿರುವುದು ಭಾರತಕ್ಕೆ ಕೊಂಚ ಹಿನ್ನಡೆಯಾಗುವ ಸಾಧ್ಯತೆಯಿದೆ.

ಮೆಲ್ಬರ್ನ್‌ ಕ್ರಿಕೆಟ್‌ ಮೈದಾನದಲ್ಲಿ ಶನಿವಾರ ಅಭ್ಯಾಸ ನಡೆಸುವ ವೇಳೆ ಕೆ.ಎಲ್. ರಾಹುಲ್ ಎಡ ಮೊಣಕೈ ನೋವಿಗೆ ತುತ್ತಾಗಿದ್ದು, ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಯ ಉಳಿದೆರಡು ಪಂದ್ಯಗಳಿಂದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ರಾಹುಲ್‌ ಸಂಪೂರ್ಣ ಫಿಟ್‌ ಆಗಲು ಇನ್ನು ಮೂರು ವಾರಗಳ ಅಗತ್ಯವಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಈ ವಿಚಾರ ಖಚಿತಪಡಿಸಿದೆ.

ಗುಡ್‌ ನ್ಯೂಸ್‌: ಟೀಂ ಇಂಡಿಯಾದ ಯಾರಿಗೂ ಕೊರೋನಾ ಸೋಂಕು ಇಲ್ಲ

ಕೆ.ಎಲ್ ರಾಹುಲ್‌ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರೂ ಮೊದಲೆರಡು ಟೆಸ್ಟ್‌ ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದರು. ರಾಹುಲ್ ಇದುವರೆಗೂ 36 ಟೆಸ್ಟ್‌ ಪಂದ್ಯಗಳನ್ನಾಡಿದ್ದು34.58ರ ಸರಾಸರಿಯಲ್ಲಿ 5 ಶತಕ ಹಾಗೂ 11 ಅರ್ಧಶತಕಗಳ ನೆರವಿನಿಂದ 2006 ರನ್ ಬಾರಿಸಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ತಲಾ ಒಂದೊಂದು ಪಂದ್ಯವನ್ನು ಜಯಿಸಿದ್ದು, ಇನ್ನೆರಡು ಪಂದ್ಯಗಳು ಸಾಕಷ್ಟು ಕುತೂಹಲ ಮೂಡುವಂತೆ ಮಾಡಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?