
ಕೊಲಂಬೊ(ಜು.27): ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಮೇಲೆ ಕೊರೋನಾ ವೈರಸ್ ತನ್ನ ವಕ್ರದೃಷ್ಟಿ ಬೀರಿದ್ದು ಎರಡನೇ ಪಂದ್ಯವನ್ನು ದಿಢೀರ್ ರದ್ದು ಪಡಿಸಲಾಗಿದೆ. ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಕೃನಾಲ್ ಪಾಂಡ್ಯಗೆ ಕೋವಿಡ್ 19 ದೃಢಪಟ್ಟ ಬೆನ್ನಲ್ಲೇ ಎರಡನೇ ಟಿ20 ಪಂದ್ಯವನ್ನು ರದ್ದು ಪಡಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಮೂಲಗಳ ಪ್ರಕಾರ ಕೃನಾಲ್ ಪಾಂಡ್ಯ ಜತೆ ಎಂಟು ಕ್ರಿಕೆಟಿಗರು ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಇವರ ಪೈಕಿ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದ ಪೃಥ್ವಿ ಶಾ ಹಾಗೂ ಸೂರ್ಯಕುಮಾರ್ ಯಾದವ್ ಕೂಡಾ ಇದ್ದರು ಎನ್ನಲಾಗಿದೆ. ಒಂದು ವೇಳೆ ಪೃಥ್ವಿ ಹಾಗೂ ಸೂರ್ಯಕುಮಾರ್ ಯಾದವ್ ಅವರಿಗೂ ಕೋವಿಡ್ ದೃಢಪಟ್ಟರೆ ಇಂಗ್ಲೆಂಡ್ ಪ್ರವಾಸದಿಂದ ಹೊರಬೀಳುವ ಸಾಧ್ಯತೆಯಿದೆ.
ಭಾರತ ಹಾಗೂ ಲಂಕಾ ನಡುವಿನ ಎರಡನೇ ಟಿ20 ಪಂದ್ಯವು ಇಂದು ಸಂಜೆ 8 ಗಂಟೆಯಿಂದ ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ಆರಂಭವಾಗಬೇಕಿತ್ತು. ಈಗಾಗಲೇ ಮೊದಲ ಟಿ20 ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾಗೆ ಶಾಕ್ ಎದುರಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.