
ತಿರುಚಿನಾಪಳ್ಳಿ(ಅ.30): ಭಾರತದಲ್ಲಿ ಕೊಳವೆ ಬಾವಿ ದುರ್ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿದೆ. ಪ್ರತಿವರ್ಷ ಮುಗ್ದ ಕಂದಮ್ಮಗಳು ಅಸಡ್ಡೆಗೆ ಬಲಿಯಾಗುತ್ತಿವೆ. ಇದೀಗ ತಮಿಳುನಾಡಿ ತಿರುಚಿನಾಪಳ್ಳಿಯಲ್ಲಿ ಕೊಳವೆ ಬಾವಿಗೆ ಬಿದ್ದ ಸುಜಿತ್ ವಿಲ್ಸನ್ ಕೊನೆಯುಸಿರೆಳೆದ ಘಟನೆಗೆ ದೇಶವೇ ಕಂಬನಿ ಮಿಡಿದಿದೆ. ಸತತ 80 ಗಂಟೆಗಳ ಕಾರ್ಯಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಈ ಘಟನೆ ಮರುಕಳಿಸದಿರಲಿ ಎಂದು ಟೀಂ ಇಂಡಿಯಾ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ: ಫಲಿಸಲಿಲ್ಲ ಪ್ರಾರ್ಥನೆ- ಪ್ರಯತ್ನ; ಕೊಳವೆಬಾವಿಯಲ್ಲೇ ಕೊನೆಯುಸಿರೆಳೆದ ಕಂದ
90 ಅಡಿಯಲ್ಲಿ ಸಿಲುಕಿಕೊಂಡ ಸುಜಿತ್ ಮೃತ ದೇಹವನ್ನು ಹೊರಕ್ಕೆ ತೆಗೆದಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಕೋಟ್ಯಾಂಟರ ಭಾರತೀಯರು ದುಖದಲ್ಲಿ ಮುಳುಗಿದರು. ಪ್ರತಿ ಭಾರಿ ಇಂತಹ ಘಟನೆಗಳು ನಡೆದಾಗ ಒಂದಿಷ್ಟು ಚರ್ಚೆ ಹೊರತುಪಡಿಸಿದರೆ, ಯಾವ ಕ್ರಾಂತಿ ಕಾರಿ ಬದಲಾವಣೆಗಳೂ ನಡೆಯುವುದಿಲ್ಲ. ಆದರೆ ಸುಜಿತ್ ಘಟನೆ ಇನ್ನೆಂದು ಮರುಕಳಿಸದಿರಲಿ ಎಂದು ಕ್ರಿಕಟಿಗರು ಸಾಮಾಜಿಕ ಜಾಲತಾಣದಲ್ಲಿ ನೋವು ತೋಡಿಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.