
ಮುಂಬೈ(ಜೂ.14): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಅಭಿಮಾನಿಗಳನ್ನು ಮಾತ್ರವಲ್ಲ, ಬಹುತೇಕ ಎಲ್ಲರನ್ನೂ ಶೋಕ ಸಾಗರದಲ್ಲಿ ಮುಳುಗಿಸಿದೆ. ಸದಾ ಕ್ರೀಯಾಶೀಲವಾಗಿದ್ದ ಸುಶಾಂತ್ ಸಾವನ್ನು ಅರಗಿಸಿಕೊಳ್ಳಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಾಲಿವುಡ್ ಸೆಲೆಬ್ರೆಟಿಗಳು ಸಂತಾಪ ಸೂಚಿಸಿದ್ದಾರೆ. ಕ್ರಿಕೆಟಿಗರ ಜೊತೆ ನಿಕಟ ಸಂಪರ್ಕವಿದ್ದ ಸುಶಾಂತ್ ಸಾವು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಆಘಾತ ತಂದಿದೆ.
ಧೋನಿ ಅನ್ಟೋಲ್ಡ್ ಸ್ಟೋರಿ ಹೇಳಿ ತನ್ನ ಕತೆ ಯಾರಿಗೂ ಹೇಳದೆ ಹೋದ ಸುಶಾಂತ್ !
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಸೇರಿದಂತೆ ಎಲ್ಲಾ ಕ್ರಿಕೆಟಿಗರು ಸುಶಾಂತ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಇಷ್ಟೇ ಇಂತಹ ಘಟನೆಗಳು ಮರುಕಳಿಸದಿರಲಿ. ಭಾರತದ ಯುವ ಶಕ್ತಿಗೆ ಮಾನಸಿಕ ಆರೋಗ್ಯ ಹಾಗೂ ಸಲಹೆಯ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸುಶಾಂತ್ಗೆ ಆತ್ಮಹತ್ಯೆ: ಕ್ರಿಕೆಟ್ ತರಬೇತಿ ನೀಡಿದ ಕಿರಣ್ ಮೋರೆಗೆ ಆಘಾತ!...
ಸಚಿನ್ ತೆಂಡುಲ್ಕರ್
ಯುವ ಹಾಗೂ ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ಸಾವು ಆಘಾತ ತಂದಿದೆ. ಸುಶಾಂತ್ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಸುಶಾಂತ್ ಕುಟುಂಬ ಹಾಗೂ ಆಪ್ತರಿಗೆ ನೋವು ಭರಿಸುವ ಶಕ್ತಿ ನೀಡಲಿ
ವಿರಾಟ್ ಕೊಹ್ಲಿ
ಸುಶಾಂತ್ ಸಿಂಗ್ ರಜಪೂತ್ ಸಾವಿನ ಸುದ್ದಿ ನೋವು ತಂದಿದೆ. ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಭಗವಂತ ಸುಶಾಂತ್ ಕುಟುಂಬ ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ನೀಡಲಿ
ರೋಹಿತ್ ಶರ್ಮಾ
ಸುಶಾಂತ್ ಸಾವಿನಿಂದ ಮನಸ್ಸು ತುಂಬಾ ನೋವಾಗುತ್ತಿದೆ. ಹೆಜ್ಜೆ ಹೆಜ್ಜೆಗೂ ಕಾಡುತ್ತಿದೆ.
ಪಾಕಿಸ್ತಾನ ಕ್ರಿಕೆಟಿಗರಾದ ಶೋಯೆಬ್ ಮಲಿಕ್, ವಹಾಬ್ ರಿಯಾಜ್ ಸೇರಿದಂತೆ ಹಲವರು ಸುಶಾಂತ್ ಸಿಂಗ್ ರಜೂಪೂತ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.