
ಮುಂಬೈ(ಜೂ.15): ಕೊರೋನಾ ಭೀತಿಯಿಂದಾಗಿ ಲಾಕ್ಡೌನ್ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಕ್ರೀಡಾಚಟುವಟಿಕೆಗಳು ಸ್ತಬ್ಧವಾಗಿದ್ದು, ಕ್ರಿಕೆಟ್ ಆಟಗಾರರು ಮನೆಯಲ್ಲಿಯೇ ಟೈಮ್ ಪಾಸ್ ಮಾಡುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಕೆಲವು ಆಟಗಾರರು ಅಭಿಮಾನಿಗಳೊಂದಿಗೆ ಚಾಟಿಂಗ್ ನಡೆಸುವ ಮೂಲಕ ಸಂಪರ್ಕ ಕಾಯ್ದುಕೊಂಡಿದ್ದಾರೆ. ಸೀಮಿತ ಓವರ್ಗಳ ತಂಡದ ಉಪನಾಯಕ ರೋಹಿತ್ ಶರ್ಮಾ ಅಭಿಮಾನಿಗಳು ಕೇಳಿದ ಟ್ರಿಕ್ಕಿ ಪ್ರಶ್ನೆಗಳಿಗೆ ಡಿಫೆರೆಂಟ್ ಆಗಿ ಉತ್ತರಿಸಿದ್ದಾರೆ. ಅಭಿಮಾನಿಯೊಬ್ಬ ಹಿಟ್ಮ್ಯಾನ್ಗೆ ಮುಂಬೈಕರ್ ಸಚಿನ್ ತೆಂಡುಲ್ಕರ್ ಹಾಗೂ ಡೆಲ್ಲಿ ಡ್ಯಾಷರ್ ವಿರೇಂದ್ರ ಸೆಹ್ವಾಗ್ ಇಬ್ಬರಲ್ಲಿ ಯಾರು ಬೆಸ್ಟ್ ಎಂದು ಪ್ರಶ್ನಿಸಿದ್ದಾರೆ.
ಈ ಇಬ್ಬರು ಆಟಗಾರರು ತಮ್ಮದೇ ಆದ ಸ್ಪೋಟಕ ಬ್ಯಾಟಿಂಗ್ ಶೈಲಿಯ ಮೂಲಕ ಮಿಂಚಿದ್ದಾರೆ. ಟೀಂ ಇಂಡಿಯಾ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದು ಎಂತಹ ಎದುರಾಳಿ ಬೌಲಿಂಗ್ ಪಡೆಯಿದ್ದರೂ ಅದನ್ನು ಧ್ವಂಸ ಮಾಡಿದ್ದಾರೆ. ಈ ಇಬ್ಬರು ಆರಂಭಿಕರು ಜಗತ್ತಿನಾದ್ಯಂತ ತಮ್ಮದೇ ಆದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಅಭಿಮಾನಿಗಳ ಈ ವಿವಾದಾತ್ಮಕ ಪ್ರಶ್ನೆಗೆ ರೋಹಿತ್ ಚಾಣಾಕ್ಷವಾದ ಉತ್ತರ ನೀಡಿದ್ದಾರೆ. ನನ್ನನ್ನು ಸಾಯಿಸಬೇಕು ಅಂತಾ ಇದ್ದೀರಾ ಎಂದು ಅಭಿಮಾನಿಗೆ ಮರು ಪ್ರಶ್ನೆ ಹಾಕಿದ್ದಾರೆ.
ಭಾರತ ಕ್ರಿಕೆಟ್ ತಂಡದ ಉಪನಾಯಕ ರೋಹಿತ್ ಶರ್ಮಾ, ಈ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹಾಗೂ ಐಸಿಸಿ ಟಿ20 ವಿಶ್ವಕಪ್ ಎರಡೂ ನಡೆಯಲಿ ಎಂದಿದ್ದಾರೆ.
ನಾಯಕನಾಗಿ ವಿರಾಟ್ ಕೊಹ್ಲಿ ಸಾಧನೆ ಶೂನ್ಯ; ಗೌತಮ್ ಗಂಭೀರ್!
ಇನ್ಸ್ಟಾಗ್ರಾಂನಲ್ಲಿ ಸಂವಾದ ನಡೆಸಿದ ರೋಹಿತ್, ಅಭಿಮಾನಿಯೊಬ್ಬ ‘ಈ ವರ್ಷ ಯಾವ ಟೂರ್ನಿ ಆಡಲು ಬಯಸುತ್ತೀರಾ’ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರೋಹಿತ್, ‘ಎರಡೂ ಟೂರ್ನಿಗಳಿಗೆ ಆದ್ಯತೆ ನೀಡಲಿದ್ದೇನೆ’ ಎಂದರು. ಅಕ್ಟೋಬರ್-ನವೆಂಬರ್ನಲ್ಲಿ ನಡೆಯಬೇಕಿರುವ ವಿಶ್ವಕಪ್ ಬಗ್ಗೆ ಮುಂದಿನ ತಿಂಗಳು ನಿರ್ಧಾರ ಕೈಗೊಳ್ಳುವುದಾಗಿ ಐಸಿಸಿ ತಿಳಿಸಿದೆ.
#NewsIn100Seconds ಈ ಕ್ಷಣದ ಪ್ರಮುಖ ಹೆಡ್ಲೈನ್ಸ್"
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.