ವೃದ್ದಿಮಾನ್ ಸಾಹ ಕೋವಿಡ್‌ನಿಂದ ಗುಣಮುಖ; ಇಂಗ್ಲೆಂಡ್ ಪ್ರವಾಸಕ್ಕೆ ಲಭ್ಯ

Suvarna News   | Asianet News
Published : May 18, 2021, 02:18 PM IST
ವೃದ್ದಿಮಾನ್ ಸಾಹ ಕೋವಿಡ್‌ನಿಂದ ಗುಣಮುಖ; ಇಂಗ್ಲೆಂಡ್ ಪ್ರವಾಸಕ್ಕೆ ಲಭ್ಯ

ಸಾರಾಂಶ

* ಕೋವಿಡ್‌ ಸೋಂಕಿನಿಂದ ವೃದ್ದಿಮಾನ್ ಸಾಹಾ ಗುಣಮುಖ * ಐಪಿಎಲ್‌ ವೇಳೆ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಸಾಹಗೆ ಕೋವಿಡ್ ಸೋಂಕು ತಗುಲಿತ್ತು. * ವೃದ್ದಿಮಾನ್‌ ಸಾಹ ಇದೀಗ ಇಂಗ್ಲೆಂಡ್ ಪ್ರವಾಸಕ್ಕೆ ಲಭ್ಯ

ನವದೆಹಲಿ(ಮೇ.18): ಟೀಂ ಇಂಡಿಯಾ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ವೃದ್ದಿಮಾನ್ ಸಾಹ ಕೋವಿಡ್‌ 19 ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಮುಂಬರುವ ಇಂಗ್ಲೆಂಡ್ ವಿರುದ್ದದ ಪ್ರವಾಸಕ್ಕೆ ಲಭ್ಯರಾಗಿದ್ದಾರೆ.

36 ವರ್ಷದ ವೃದ್ದಿಮಾನ್ ಸಾಹ ಇತ್ತೀಚೆಗಷ್ಟೇ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿರುವ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಿದ್ದರು. ಬಯೋ ಬಬಲ್‌ನೊಳಗಿದ್ದ ಸಾಹಗೆ ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಬಳಿಕ ದೆಹಲಿಯಲ್ಲಿಯೇ ಹೋಟೆಲ್‌ನಲ್ಲಿ ಐಸೋಲೇಷನ್‌ಗೆ ಒಳಗಾಗಿ, ಕೋವಿಡ್‌ ಮಣಿಸಿ ಇದೀಗ ಕೋಲ್ಕತದಲ್ಲಿರುವ ತಮ್ಮ ಮನೆಗೆ ವಾಪಾಸಾಗಿದ್ದಾರೆ. 

ದೆಹಲಿಯಲ್ಲಿ ಬರೋಬ್ಬರಿ ಎರಡುವರೆ ವಾರಗಳ ಕಾಲ ಹೋಟೆಲ್‌ ಕ್ವಾರಂಟೈನ್‌ನಲ್ಲಿದ್ದ ವೃದ್ದಿಮಾನ್ ಸಾಹ ನಿನ್ನೆಯಷ್ಟೇ ಮನೆಗೆ ವಾಪಾಸಾಗಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳು ಪಿಟಿಐಗೆ ಖಚಿತಪಡಿಸಿವೆ.

ಐಪಿಎಲ್ 2021: 'ಆಸ್ಟ್ರೇಲಿಯಾ ಆಟಗಾರರನ್ನು ಸುರಕ್ಷಿತವಾಗಿ ಕಳಿಸಿಕೊಟ್ಟಿದ್ದಕ್ಕೆ ಥ್ಯಾಂಕ್ಯೂ'

ಇದೀಗ RT-PCR ಟೆಸ್ಟ್‌ನಲ್ಲಿ ಸಾಹಗೆ ಮತ್ತೊಮ್ಮೆ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದರಷ್ಟೇ ಮುಂಬೈನಲ್ಲಿರುವ ಬಯೋ ಬಬಲ್‌ಗೆ ಪ್ರವೇಶಿಸಲು ಸಾಧ್ಯವಾಗಲಿದೆ. ಬಯೋ ಬಬಲ್‌ನೊಳಗೆ ಕ್ವಾರಂಟೈನ್‌ನಲ್ಲಿದ್ದು, ಬಳಿಕ ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದೆ.  

ಇಂಗ್ಲೆಂಡ್ ಪ್ರವಾಸದ ಮೊದಲಿಗೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾವು ಜೂನ್ 18ರಿಂದ ಆರಂಭವಾಗಲಿರುವ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಸೌಥಾಂಪ್ಟನ್ ಆತಿಥ್ಯವನ್ನು ವಹಿಸಲಿದೆ. ಇದಾದ ಬಳಿಕ ಆಗಸ್ಟ್ 04ರಿಂದ ಇಂಗ್ಲೆಂಡ್ ವಿರುದ್ದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ ಟೀಂ ಇಂಡಿಯಾ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಸಿಬಿ ಕಾಲ್ತುಳಿತದ ದುರ್ಘಟನೆ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡಿ.24ಕ್ಕೆ ಮೊದಲ ಕ್ರಿಕೆಟ್‌ ಪಂದ್ಯ? ಕೊಹ್ಲಿ ಭಾಗಿ
ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?