ಬೆಂಗಳೂರು ಕೋವಿಡ್‌ ರೋಗಿಗೆ ಯುಜುವೇಂದ್ರ ಚಹಲ್‌ 2 ಲಕ್ಷ ರೂ ನೆರವು!

Published : May 15, 2021, 11:39 AM IST
ಬೆಂಗಳೂರು ಕೋವಿಡ್‌ ರೋಗಿಗೆ ಯುಜುವೇಂದ್ರ ಚಹಲ್‌ 2 ಲಕ್ಷ ರೂ ನೆರವು!

ಸಾರಾಂಶ

* ಕೋವಿಡ್ ಸೋಂಕಿತ ರೋಗಿಗೆ ನೆರವಾದ ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್ * ಬೆಂಗಳೂರಿನ ರೋಗಿಗೆ 2 ಲಕ್ಷ ರುಪಾಯಿ ದೇಣಿಗೆ ನೀಡಿದ ಆರ್‌ಸಿಬಿ ಸ್ಪಿನ್ನರ್ * ಈ ಹಿಂದೆಯೂ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಿರುವ ಲೆಗ್‌ಸ್ಪಿನ್ನರ್

ನವದೆಹಲಿ(ಮೇ.15): ಬೆಂಗಳೂರಿನ ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಗೆ ಭಾರತೀಯ ಕ್ರಿಕೆಟಿಗ ಯಜುವೇಂದ್ರ ಚಹಲ್‌ 2 ಲಕ್ಷ ರುಪಾಯಿ ನೆರವು ನೀಡಿದ್ದಾರೆ. 

ವೆಂಟಿಲೇಟರ್‌ ಸಹಾಯ ಪಡೆದಿರುವ ಆಕೆಯ ಚಿಕಿತ್ಸೆಗೆ ಅಂದಾಜು 4 ಲಕ್ಷ ರು. ಖರ್ಚಾಗಿದ್ದು, ಅದರಲ್ಲಿ ಅರ್ಧದಷ್ಟು ಮೊತ್ತವನ್ನು ಚಹಲ್‌ ನೀಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಗೆ ನೆರವಾಗಲು ಆಕೆಯ ಪರಿಚಯಸ್ಥರಿಂದ ಆನ್‌ಲೈನ್‌ನಲ್ಲಿ ಕೆಟ್ಟೋ ಸಹಭಾಗಿತ್ವದಲ್ಲಿ ಹಣ ಸಂಗ್ರಹ ನಡೆಸಲಾಗುತ್ತಿದೆ. ಚಹಲ್‌ಗೆ ಸ್ನೇಹಿತರೊಬ್ಬರಿಂದ ಈ ವಿಷಯ ತಿಳಿದಿದ್ದು ಕೆಟ್ಟೋ ಮೂಲಕ 2 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ.

ಒಂದು ವಾರದಲ್ಲಿ 11 ಕೋಟಿ ರೂ ದೇಣಿಗೆ ಸಂಗ್ರಹಿಸಿದ ವಿರುಷ್ಕಾ ಜೋಡಿ..!

ಇತ್ತೀಚೆಗಷ್ಟೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಒಂದು ವಾರದಲ್ಲಿ 7 ಕೋಟಿ ರುಪಾಯಿ ಸಂಗ್ರಹಿಸುವ ಗುರಿಯೊಂದಿಗೆ ತಮ್ಮ ಅಭಿಯಾನ ಆರಂಭಿಸಿದ್ದರು. ಈ ಅಭಿಯಾನಕ್ಕೆ ಯುಜುವೇಂದ್ರ ಚಹಲ್ 95 ಸಾವಿರ ರುಪಾಯಿ ದೇಣಿಗೆ ನೀಡಿದ್ದರು. ವಿರುಷ್ಕಾ ಜೋಡಿಯ ಈ ಅಭಿಯಾನಕ್ಕೆ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದ್ದು, 11 ಕೋಟಿಗೂ ಅಧಿಕ ಮೊತ್ತದ ಹಣ ಹರಿದು ಬಂದಿತ್ತು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IND vs SL 1st Test Day 2 Highlights : ಮಳೆಯ ನಡುವೆಯೂ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ.. ಪಡಿಕ್ಕಲ್ ಇತಿಹಾಸ
Cricket: ಮ್ಯಾಚ್‌ ನಡೆಯುತ್ತಿರುವಾಗಲೇ ದಿಗ್ಗಜ ಆಟಗಾರನ ಅಸಮಾಧಾನ ಸ್ಫೋಟ! ಟೀಮ್‌ಗೆ ನನ್ನ ಮೇಲೆ ನಂಬಿಕೆಯಿಲ್ಲ, ಒಳೊಳಗೆ ತಾರತಮ್ಯ ನಡಿತಿದೆ ಎಂದ ಸ್ಟಾರ್‌ ಪ್ಲೇಯರ್!