
ರಾಜ್ಕೋಟ್(ನ.07): ಮಹಾ ಚಂಡಮಾರುತ ಭೀತಿ ನಡುವೆಯೇ ಭಾರತ ಹಾಗೂ ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿರುವ ಭಾರತ, ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ಹಾಗೂ ಬಾಂಗ್ಲಾದೇಶ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಇದನ್ನೂ ಓದಿ: 2ನೇ ಟಿ20 ಪಂದ್ಯದ ಹವಾಮಾನ ವರದಿ; ರೋಹಿತ್ ಸೈನ್ಯಕ್ಕೆ ಸೈಕ್ಲೋನ್ ಭೀತಿ!
ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಾಂಗ್ಲಾ ವಿರುದ್ಧದ ಟಿ20 ಪಂದ್ಯದಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ ಸರಣಿಯಲ್ಲಿ 0-1 ಅಂತರದ ಹಿನ್ನಡೆ ಅನುಭವಿಸಿದೆ. ಇತ್ತ ಬಾಂಗ್ಲಾದೇಶ 2ನೇ ಪಂದ್ಯ ಗೆದ್ದು ಸರಣಿ ಗೆಲ್ಲೋ ಪ್ಲಾನ್ನಲ್ಲಿದೆ. ಈ ಮೂಲಕ ಹೊಸ ಇತಿಹಾಸ ರಚಿಸಲು ಮುಂದಾಗಿದೆ.
ನಾಯಕ ರೋಹಿತ್ ಶರ್ಮಾ ಪಾಲಿಗೆ ಇದು 100 ಟಿ20 ಪಂದ್ಯವಾಗಿದೆ. ಟಿ20ಯಲ್ಲಿ ಶತಕ ಪಂದ್ಯ ಆಡಿದ ಮೊದಲ ಭಾರತೀಯ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಶ್ವದ 2ನೇ ಕ್ರಿಕೆಟಿಗ ಎಂಬ ದಾಖಲೆಗೂ ಪಾತ್ರರಾಗಿದ್ದಾರೆ. ಪಾಕಿಸ್ತಾನದ ಶೋಯೆಬ್ ಮಲಿಕ್ 111 ಟಿ20 ಪಂದ್ಯ ಆಡಿ ಮೊದಲ ಸ್ಥಾನದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.