
ಸಿಡ್ನಿ(ಡಿ.09): ಭಾರತ-ಆಸ್ಟ್ರೇಲಿಯಾ ನಡುವೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 12 ರನ್ಗಳ ರೋಚಕ ಸೋಲು ಕಂಡಿದೆ. ಈ ಆಘಾತದಿಂದ ಹೊರಬರುವ ಮುನ್ನವೇ ಐಸಿಸಿ ವಿರಾಟ್ ಪಡೆಗೆ ಮತ್ತೊಂದು ಶಾಕ್ ನೀಡಿದೆ.
ಹೌದು, ಮೂರನೇ ಟಿ20 ಪಂದ್ಯದಲ್ಲಿ ಮಂದಗತಿಯಲ್ಲಿ ಬೌಲಿಂಗ್ ಮಾಡಿದ ತಪ್ಪಿಗಾಗಿ ಟೀಂ ಇಂಡಿಯಾ ಆಟಗಾರರಿಗೆ ಐಸಿಸಿ ಪಂದ್ಯದ ಸಂಭಾವನೆಯ 20% ದಂಡ ವಿಧಿಸಿದೆ. ಟೀಂ ಇಂಡಿಯಾ ಬೌಲರ್ಗಳು 20 ಓವರ್ ಬೌಲಿಂಗ್ ಮಾಡಲು ನಿಗದಿತ ಸಮಯಕ್ಕಿಂತ ಒಂದು ಓವರ್ ಸಮಯ ಹೆಚ್ಚಿಗೆ ಕೊಂಡಿದ್ದರಿಂದ ಮ್ಯಾಚ್ ರೆಫ್ರಿ ಟೀಂ ಇಂಡಿಯಾ ಆಟಗಾರರಿಗೆ ದಂಡ ವಿಧಿಸಿದ್ದಾರೆ.
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಪ್ರತಿ ಓವರ್ ಕೂಡಾ ನಿಗದಿತ ಸಮಯಕ್ಕಿಂತ ಹೆಚ್ಚಿಗೆ ಸಮಯ ತೆಗೆದುಕೊಂಡಿದ್ದು, ಐಸಿಸಿ ಆರ್ಟಿಕಲ್ 2.22 ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯಾಗಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಐಸಿಸಿ ವಿಧಿಸಿದ ದಂಡದ ಮೊತ್ತವನ್ನು ಪಾವತಿಸುವುದಾಗಿ ತಿಳಿಸಿದ್ದಾರೆ ಎಂದು ಐಸಿಸಿ ಮೂಲಗಳು ತಿಳಿಸಿವೆ.
ಸರಣಿ ಶ್ರೇಷ್ಠ ಟ್ರೋಫಿಯನ್ನು ನಟರಾಜನ್ಗೆ ಕೊಟ್ಟ ಹಾರ್ದಿಕ್ ಪಾಂಡ್ಯ..!
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಟೀಂ ಇಂಡಿಯಾ 12 ರನ್ಗಳಿಂದ ಶರಣಾಗಿದೆ. ಈ ಸೋಲಿನ ಹೊರತಾಗಿಯೂ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟಿ20 ಸರಣಿಯನ್ನು ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.