
ಅಹಮದಾಬಾದ್(ಡಿ.25): ಭಾರತ ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿಗೆ ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.
ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿರುವುದರ ಆಧಾರದ ಮೇಲೆ ಸುನಿಲ್ ಜೋಶಿ ಬದಲು ಚೇತನ್ ಶರ್ಮಾ ಅವರಿಗೆ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಹುದ್ದೆ ದೊರೆತಿದೆ. ಇದೇ ವೇಳೆ ಐವರು ಸದಸ್ಯರ ಆಯ್ಕೆ ಸಮಿತಿಗೆ ಮಾಜಿ ವೇಗಿಗಳಾದ ಅಭಯ್ ಕುರುವಿಲ್ಲಾ ಹಾಗೂ ದೇಬಾಶಿಶ್ ಮೊಹಂತಿ ಸಹ ಸೇರ್ಪಡೆಯಾಗಿದ್ದಾರೆ.
2022ರ ಐಪಿಎಲ್ಗೆ 10 ತಂಡಗಳು ಎಂಟ್ರಿ
ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯ ಒಂದಷ್ಟು ಹೈಲೈಟ್ಸ್
ಆರ್ಥಿಕ ನೆರವು: ಕೋವಿಡ್-19 ಹಿನ್ನೆಲೆಯಲ್ಲಿ ಈ ವರ್ಷ ದೇಸಿ ಋುತು ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ ನೂರಾರು ದೇಸಿ ಕ್ರಿಕೆಟಿಗರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸೂಕ್ತ ಪರಿಹಾರ ಒದಗಿಸುವುದಾಗಿ ಬಿಸಿಸಿಐ ತಿಳಿಸಿದೆ.
900 ಕೋಟಿ ನಷ್ಟ ಭೀತಿ:
2021ರಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ತೆರಿಗೆ ವಿನಾಯಿತಿ ಕೊಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಒಂದೊಮ್ಮೆ ಕೇಂದ್ರ ಸರ್ಕಾರ ತೆರಿಗೆ ವಿನಾಯಿತಿ ನೀಡದಿದ್ದರೆ, 900 ಕೋಟಿ ರು. (123 ಮಿಲಿಯನ್ ಡಾಲರ್) ಆದಾಯ ಖೋತ ಆಗಲಿದೆ ಎಂದು ಬಿಸಿಸಿಐ ಆತಂಕ ವ್ಯಕ್ತಪಡಿಸಿದೆ.
ಐಸಿಸಿ ಗಳಿಕೆಯಲ್ಲಿ ಪ್ರತಿ ವರ್ಷ ಬಿಸಿಸಿಐಗೆ ಪಾಲು ಸಿಗಲಿದೆ. ಅಂದರೆ ಅಂದಾಜು 2,866 ಕೋಟಿ ರು. (390 ಮಿಲಿಯನ್ ಡಾಲರ್) ಸಿಗಲಿದ್ದು, ತೆರಿಗೆ ವಿನಾಯಿತಿ ಕೊಡಿಸದಿದ್ದರೆ, ಇದರಲ್ಲಿ 900 ಕೋಟಿ ಕಡಿತಗೊಳಿಸುವುದಾಗಿ ಐಸಿಸಿ ತಿಳಿಸಿದೆ ಎಂದು ಬಿಸಿಸಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.