ಪತ್ನಿ ಜೊತೆ ತಿರುಪತಿ ವೆಂಕಟರಮಣ ಸ್ವಾಮಿಯ ದರ್ಶನ ಪಡೆದ ಗಂಭೀರ್‌!

Published : Sep 28, 2023, 01:22 PM IST
ಪತ್ನಿ ಜೊತೆ ತಿರುಪತಿ ವೆಂಕಟರಮಣ ಸ್ವಾಮಿಯ ದರ್ಶನ ಪಡೆದ ಗಂಭೀರ್‌!

ಸಾರಾಂಶ

ಟೀಮ್‌ ಇಂಡಿಯಾ ಮಾಜಿ ಆಟಗಾರ ಹಾಗೂ ಬಿಜೆಪಿ ಸಂಸದ ಗೌತಮ್‌ ಗಂಭೀರ್‌, ಇತ್ತೀಚೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ವೆಂಕಟರಮಣ ಸ್ವಾಮಿಯ ಶುಭ ಮುಂಜಾನೆಯ ಪೂಜೆಯಲ್ಲಿ ಅವರು ಪತ್ನಿಯೊಂದಿಗೆ ಭಾಗವಹಿಸಿದ್ದರು.

ಹೈದರಾಬಾದ್‌ (ಸೆ.28): ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್ ಇತ್ತೀಚೆಗೆ ತಿರುಮಲಕ್ಕೆ ಭೇಟಿ ನೀಡಿದ್ದರು. ತಿರುಮಲ ದೇವರ ದರ್ಶನ ಪಡೆದು ಬೆಳಗಿನ ಸೇವೆಯಲ್ಲಿ ಅವರು ಪತ್ನಿ ಸಮೇತ ಪಾಲ್ಗೊಂಡಿದ್ದರು. ದರ್ಶನದ ನಂತರ ದೇವಸ್ಥಾನದ ರಂಗನಾಯಕರ ಮಂಟಪದಲ್ಲಿ ವೈದಿಕರು ಗೌತಮ್‌ ಗಂಭೀರ್‌ ಹಾಗೂ ಅವರ ಪತ್ನಿ ನತಾಶಾ ಜೈನ್‌ಗೆ ವೇದಾಶೀರ್ವಾದ ಮಾಡಿದರು. ಈ ವೇಳೆ ದೇಗುಲದ ಅಧಿಕಾರಿಗಳು ಸ್ಮರಣಿಕೆ ನೀಡಿದ್ದಲ್ಲದ,ೆ ತೀರ್ಥ ಪ್ರಸಾದ ನೀಡಿ ದಂಪತಿಗಳನ್ನು ಗೌರವಿಸಿದರು. ಹಲವು ಕ್ರಿಕೆಟ್ ಅಭಿಮಾನಿಗಳು ಗಂಭೀರ್ ಜೊತೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ್ದು, ಶ್ರೀವಾರಿಯ ಅದ್ಬುತ ದರ್ಶನಕ್ಕೆ ಗಂಭೀರ್‌ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.

ಮುಂಬರುವ  ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತಕ್ಕೆ ಗೆಲ್ಲುವ ಉತ್ತಮ ಅವಕಾಶವಿದೆ ಎಂದು ಗಂಭೀರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. 1.4 ಶತಕೋಟಿ ಭಾರತೀಯರ ಪ್ರಾರ್ಥನೆಯೊಂದಿಗೆ ಭಾರತ ವಿಶ್ವಕಪ್‌ನಲ್ಲಿ ವಿಜಯಶಾಲಿ ತಂಡವಾಗಿ ಹೊರಹೊಮ್ಮಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಭಾರತ ಹಲವು ಬಾರಿ ವಿಶ್ವಕಪ್‌ ಗೆಲ್ಲುವ ಅವಕಾಶಗಳನ್ನು ಕಳೆದುಕೊಂಡಿದೆ. ಅದಕ್ಕೆ, ಕಾರಣ ಇಡೀ ತಂಡ ಏಕಕಾಲದಲ್ಲಿ ಉತ್ತಮ ಆಟವಾಡಬೇಕು. ವಿಶ್ವಕಪ್‌ನಂಥ ಟೂರ್ನಿಗಳಲ್ಲಿ ಕೇವಲ ವೈಯಕ್ತಿಕ ನಿರ್ವಹಣೆಯಿಂದ ಯಶಸ್ಸು ಸಾಧ್ಯವಿಲ್ಲ ಎಂದು ಗಂಭೀರ್‌ ಹೇಳಿದ್ದಾರೆ.

ಮುಂದಿನ ತಿಂಗಳು ಭಾರತದಲ್ಲಿ ಏಕದಿನ ವಿಶ್ವಕಪ್ ಆರಂಭವಾಗಲಿದ್ದು, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಮೊದಲ ಪಂದ್ಯ ನಡೆಯಲಿದೆ. ಸದ್ಯ ಟೀಂ ಇಂಡಿಯಾ ಏಕದಿನ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದೆ.

Karnataka Election Results 2023: ಗಂಭೀರ್‌ ರೀತಿ ಶಟ್‌ಅಪ್‌ ಎಂದ ರಾಹುಲ್‌, ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌!

ಏಕದಿನ ವಿಶ್ವಕಪ್‌ ವೇಳೆ ನೇರಪ್ರಸಾರ ವಾಹಿನಿಯ ಅಧಿಕೃತ ವಿಶ್ಲೇಷಕರಾಗಿ ಗೌತಮ್‌ ಗಂಭೀರ್‌ ಕೆಲಸ ಮಾಡಲಿದ್ದಾರೆ. ಅಧಿಕೃತ ನೇರಪ್ರಸಾರ ವಾಹಿನಿಯಲ್ಲಿ ಈಗಾಗಲೇ ವಿಶ್ವಕಪ್‌ ಸಂಬಂಧಿತ ಕಾರ್ಯಕ್ರಮಗಳಲ್ಲಿ ಗಂಭೀರ್‌ ಕಾಣಿಸಿಕೊಂಡಿದ್ದು, ವಿಶ್ವಕಪ್‌ನಲ್ಲಿ ಭಾಗವಹಿಸಿರುವ ತಂಡಗಳ ಬಲ-ದೌರ್ಬಲ್ಯಗಳನ್ನು ವಿವರಿಸುವ ಕೆಲಸ ಮಾಡುತ್ತಿದ್ದಾರೆ.

ಲಕ್ನೋನಲ್ಲಿ ವಿರಾಟ್‌ ಕೊಹ್ಲಿ-ಗೌತಮ್‌ ಗಂಭೀರ್‌ ಬೈದಾಡಿಕೊಂಡಿದ್ದೇನು..? ಎಳೆಎಳೆಯಾಗಿ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ!

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?