
ಆಕ್ಲೆಂಡ್(ಫೆ.08): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಹಲವು ಕಾರಣಗಳಿಂದ ಮಹತ್ವ ಪಡೆದುಕೊಂಡಿದೆ. ಭಾರತಕ್ಕೆ ಸರಣಿ ಉಳಿಸಿಕೊಳ್ಳಲು ಈ ಪಂದ್ಯ ಗೆಲ್ಲಲೇಬೇಕಿದ್ದರೆ, ಟಿ20 ಸರಣಿ ಸೋತ ನ್ಯೂಜಿಲೆಂಡ್ಗೆ ಸರಣಿ ಗೆಲುವು ನಿರ್ಧರಿಸುವ ಪಂದ್ಯವಾಗಿದೆ. ಈ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ.
ಇದನ್ನೂ ಓದಿ: ಗಪ್ಟಿಲ್, ಟೇಲರ್ ಹೋರಾಟ, ಭಾರತಕ್ಕೆ 274 ರನ್ ಟಾರ್ಗೆಟ್
ನ್ಯೂಜಿಲೆಂಡ್ ನೀಡಿದ 274 ರನ್ ಟಾರ್ಗೆಟ್ ಭಾರತದ ಪಾಲಿಗೆ ಮೌಂಟ್ ಎವರೆಸ್ಟ್ ಬೆಟ್ಟದಷ್ಟು ದೊಡ್ಡದಾಗಿದೆ. ಕಾರಣ ಈ ಈಗಾಗಲೇ 4 ವಿಕೆಟ್ ಪತನಗೊಂಡಿದೆ. ಆರಂಭದಲ್ಲೇ ಮಯಾಂಕ್ ಅಗರ್ವಾಲ್ 3 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರೆ, ಪೃಥ್ವಿ ಶಾ 24 ರನ್ ಸಿಡಿಸಿ ಔಟಾದರು.
ಇದನ್ನೂ ಓದಿ: INDvNZ 2ನೇ ಏಕದಿನ: ದಾಖಲೆ ಬರೆದ ಮಾರ್ಟಿನ್ ಗಪ್ಟಿಲ್!
ನಾಯಕ ವಿರಾಟ್ ಕೊಹ್ಲಿ ಕೇವಲ 15 ರನ್ ಸಿಡಿಸಿ ಔಟಾದರು. ಈ ಮೂಲಕ ಭಾರತ ಹಿನ್ನಡೆ ಅನುಭವಿಸಿತು. ಕೆಎಲ್ ರಾಹುಲ್ ಕೇವಲ 4 ರನ್ ಸಿಡಿಸಿ ನಿರ್ಗಮಿಸಿದರು. 71 ರನ್ಗೆ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ ಗೆಲುವಿಗೆ ಹರಸಾಹಸ ಪಡಬೇಕಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.