
ಮೌಂಟ್ ಮೌಂಗನುಯಿ(ಫೆ.10): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 3ನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಆರಂಭಿಕ 2 ಪಂದ್ಯ ಸೋತೂ, ಸರಣಿ ಕೈಚೆಲ್ಲಿರುವ ಟೀಂ ಇಂಡಿಯಾ ಇದೀಗ ಅಂತಿಮ ಪಂದ್ಯ ಗೆದ್ದು ಸೋಲಿನ ಅಂತರ ಕಡಿಮೆ ಮಾಡಿಕೊಳ್ಳೋ ಲೆಕ್ಕಾಚಾರದಲ್ಲಿದೆ.
ಇದನ್ನೂ ಓದಿ: ನಾನು ಔಟಾಗದಿದ್ದರೆ ಫಲಿತಾಂಶ ಬೇರೆಯದ್ದೇ ಆಗುತ್ತಿತ್ತು: ನವದೀಪ್ ಸೈನಿ.
ಆತಿಥೇಯ ನ್ಯೂಜಿಲೆಂಡ್ ಟಿ20 ಕ್ವೀನ್ ಸ್ವೀಪ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾತರಗೊಂಡಿದೆ. ಹೀಗಾಗಿ 3ನೇ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ. ಭಾರತ ತಂಡದಲ್ಲಿ ಬದಲಾವಣೆ ಖಚಿತ. ಕನಿಷ್ಠ 2 ಬದಲಾವಣೆ ಮಾಡಲು ಕೊಹ್ಲಿ ನಿರ್ಧರಿಸಿದ್ದಾರೆ.
ಇದನ್ನೂ ಓದಿ: ಟೀಂ ಇಂಡಿಯಾ ಏಕದಿನ ಸರಣಿ ಸೋತಿದ್ದೆಲ್ಲಿ..?
ಮಧ್ಯಮ ಕ್ರಮಾಂಕದಲ್ಲಿ ಕೇದಾರ್ ಜಾಧವ್ ಬದಲು ಕನ್ನಡಿಗ ಮನೀಶ್ ಪಾಂಡೆಗೆ ಅವಕಾಶ ನೀಡುವ ಸಾಧ್ಯತೆ ಇದೆ. ಇನ್ನು ಶಾರ್ದೂಲ್ ಠಾಕೂರ್ಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಶಮಿ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. ವಿಶ್ರಾಂತಿಯ ಅಗತ್ಯವಿರುವ ಜಸ್ಪ್ರೀತ್ ಬುಮ್ರಾ ಹೊರಗುಳಿದರೂ ಅಚ್ಚರಿಯಿಲ್ಲ.
ಭಾರತ ಸಂಭವನೀಯ ತಂಡ ಇಲ್ಲಿದೆ:
ಪೃಥ್ವಿ ಶಾ, ಮಯಾಂಕ್ ಅಗರ್ವಾಲ್ ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ಯಜುವೇಂದ್ರ ಚಹಾಲ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಜಸ್ಪ್ರೀತ್ ಬುಮ್ರಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.