
ನವದೆಹಲಿ(ಮೇ.09): ಖಾಲಿ ಕ್ರೀಡಾಂಗಣಗಳಲ್ಲಿ ಕ್ರಿಕೆಟ್ ನಡೆಸುವ ಚಿಂತನೆಯನ್ನು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬೆಂಬಲಿಸಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕ್ರಿಕೆಟ್ ಚಟುವಟಿಕೆ ಸ್ಥಗಿತಗೊಂಡಿದ್ದು, ಪರಿಸ್ಥಿತಿ ಸುಧಾರಿಸಿದ ಬಳಿಕ ಪಂದ್ಯಗಳನ್ನು ನಡೆಸುವ ಬಗ್ಗೆ ಚರ್ಚೆ ನಡೆಯುತ್ತಿದೆ.
‘ ಅಭಿಮಾನಿಗಳಿಲ್ಲದೆ ಅಡುವುದು ಕಷ್ಟ. ಕ್ರಿಕೆಟ್ ತನ್ನ ಜಾದೂ ಕಳೆದುಕೊಳ್ಳಲಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅದೇ ಸೂಕ್ತ’ ಎಂದು ಕೊಹ್ಲಿ ಹೇಳಿದ್ದಾರೆ. ಟಿ20 ವಿಶ್ವಕಪ್ ಆಯೋಜನೆಗೆ ಹಸಿರು ನಿಶಾನೆ ದೊರೆಯಬೇಕಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲ ತಿಂಗಳಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆರಂಭಿಸಬೇಕಾದ ಅನಿವಾರ್ಯತೆ ಎಲ್ಲಾ ತಂಡಗಳಿಗೂ ಇದೆ. ಹೀಗಾಗಿ, ಖಾಲಿ ಕ್ರೀಡಾಂಗಣಗಳಲ್ಲಿ ಪಂದ್ಯ ನಡೆಸಲು ಬಹುತೇಕ ಎಲ್ಲಾ ರಾಷ್ಟ್ರಗಳ ಕ್ರಿಕೆಟಿಗರು ಒಲವು ತೋರಿದ್ದಾರೆ.
ಧೋನಿ, ಕೊಹ್ಲಿಗಿಂತ ಸೌರವ್ ಗಂಗೂಲಿ ನಾಯಕತ್ವವೇ ಬೆಸ್ಟ್; ನೆಹ್ರಾ ಹೇಳಿದ್ರು ಕಾರಣ!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೊರೋನಾ ಸಂಕಷ್ಟಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಇದರ ಜೊತೆಗೆ ಅಭಿಮಾನಿಗಳಲ್ಲಿ ಕೊರೋನಾ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಲೇ ಬಂದಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲೇ ಮನೆಯಲ್ಲೇ ಇರಿ ಎಂದು ಜನರಲ್ಲಿ ಕೈಮುಗಿದು ಕೇಳಿಕೊಂಡಿದ್ದಾರೆ.
ಜಗತ್ತಿನಾದ್ಯಂತ ಕೊರೋನಾದಿಂದಾಗಿ ಜನಜೀವನ ಮಾತ್ರವಲ್ಲದೇ ಕ್ರೀಡಾ ಚಟುವಟಿಕೆಗಳು ಸ್ತಬ್ಧವಾಗಿವೆ. ಈ ವರ್ಷದ ಜುಲೈನಲ್ಲಿ ನಡೆಯಬೇಕಿದ್ದ ಬಹುನಿರೀಕ್ಷಿತ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ ಈಗಾಗಲೇ ಒಂದು ವರ್ಷ ಮುಂದೂಡಲ್ಪಟ್ಟಿದೆ. ಇನ್ನು ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಯಾದ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡಾ ಒಂದು ವರ್ಷಕ್ಕೆ ಮುಂದೂಡಲ್ಪಟ್ಟಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.