
ನವದೆಹಲಿ(ಸೆ.18): ಮುಂಬರುವ ಟಿ20 ವಿಶ್ವಕಪ್ ಬಳಿಕ ಭಾರತ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ ಬಳಿಕ ರೋಹಿತ್ ಶರ್ಮಾ ಹೊಸ ನಾಯಕನಾಗಿ ನೇಮಕಗೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಆದರೆ ಉಪನಾಯಕನ ಸ್ಥಾನಕ್ಕೆ ಪ್ರಮುಖವಾಗಿ ಮೂವರು ಆಟಗಾರರ ಹೆಸರು ಕೇಳಿಬರುತ್ತಿದೆ. ಕೆ.ಎಲ್.ರಾಹುಲ್ ಹಾಗೂ ರಿಷಭ್ ಪಂತ್ ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ. ಇಬ್ಬರಿಗೂ ಐಪಿಎಲ್ ತಂಡ ಮುನ್ನಡೆಸಿದ ಅನುಭವವಿದೆ. ಪಿಟಿಐ ವರದಿಯ ಪ್ರಕರ ಟೀಂ ಇಂಡಿಯಾ ಟಿ20 ಉಪನಾಯಕ ಪಟ್ಟಕ್ಕೆ ರಿಷಭ್ ಪಂತ್ ಪ್ರಬಲ ಸ್ಪರ್ಧಿ ಎನಿಸಿದ್ದಾರೆ. ಇನ್ನು 2017ರಲ್ಲಿ ವಿರಾಟ್ ಕೊಹ್ಲಿ ಎಲ್ಲಾ ಮಾದರಿಯ ನಾಯಕರಾಗಿ ಆಯ್ಕೆಯಾದ ಬಳಿಕ ಸೀಮಿತ ಓವರ್ಗಳ ತಂಡದ ಉಪನಾಯಕನಾಗಿ ರೋಹಿತ್ ಶರ್ಮಾ ನೇಮಕವಾಗಿದ್ದರು.
ಯಾರಾಗಲಿದ್ದಾರೆ ಟೀಂ ಇಂಡಿಯಾ ಮುಂದಿನ ಟಿ20 ಕ್ಯಾಪ್ಟನ್..?
ಇದೆಲ್ಲದರ ನಡುವೆ ವೇಗಿ ಜಸ್ಪ್ರೀತ್ ಬುಮ್ರಾ ಹೆಸರು ಸಹ ಪ್ರಸ್ತಾಪವಾಗಿದೆ ಎಂದು ಮೂಲಗಳು ತಿಳಿಸಿವೆ. ಬುಮ್ರಾ ಅಚ್ಚರಿಯ ಆಯ್ಕೆಯಾಗಬಹುದು ಎಂದು ಹೇಳಲಾಗುತ್ತಿದೆ. ಗುಜರಾತ್ ಮೂಲದ ವೇಗಿ ಯಾವುದೇ ಮಾದರಿಯಲ್ಲಿ ತಂಡ ಮುನ್ನಡೆಸಿದ ಅನುಭವ ಹೊಂದಿಲ್ಲ.
ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಟೀಂ ಇಂಡಿಯಾ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ದ ಸರಣಿಯನ್ನಾಡಲಿದ್ದು, ಈ ವೇಳೆ ಟಿ20 ತಂಡದ ನಾಯಕ ಹಾಗೂ ಉಪನಾಯಕರನ್ನು ಆಯ್ಕೆ ಸಮಿತಿ ನೇಮಕ ಮಾಡಲಿದೆ ಎಂದು ವರದಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.