
ಮುಂಬೈ(ಮೇ.17): ಲಾಕ್ಡೌನ್ ಸಡಿಲಿಕೆಯಾಗುತ್ತಿರುವ ಕಾರಣ ಹಲವು ಚಟುವಟಿಕೆಗಳು, ಸೇವೆಗಳು ಆರಂಭಗೊಳ್ಳುತ್ತಿದೆ. ಕೆಲ ನಿರ್ಬಂಧ, ನಿಯಮಗಳನ್ನು ಪಾಲಿಸಿ ವ್ಯವಹಾರ ಆರಂಭಿಸಲು ಅನುಮತಿ ನೀಡಲಾಗುತ್ತಿದೆ. ಇತ್ತೀಚೆಗೆ ಬಿಸಿಸಿಐ ಖಜಾಂಜಿ ಅರುಣ್ ಧುಮಾಲ್ ಕೂಡ ಭಾರತ ತಂಡ ಶ್ರೀಲಂಕಾ ಪ್ರವಾಸ ಸಾಧ್ಯತೆ ಹೇಳಿದ್ದರು. ಆದರೆ ಬಿಸಿಸಿಐ ಮೂಲಗಳು ಸದ್ಯದ ಪರಿಸ್ಥಿತಿಯಲ್ಲಿ ಲಂಕಾ ಪ್ರವಾಸ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಲೌಕ್ಡೌನ್ ವೇಳೆ ನೆಟ್ ಪ್ರಾಕ್ಟೀಸ್; ವಿರಾಟ್ಗೆ ಬೌನ್ಸರ್ ಎಸೆದ ಅನುಷ್ಕಾ!
ಟೀಂ ಇಂಡಿಯಾ ನಾಯಕ ವಿರಾಟ್ , ರೋಹಿತ್ ಶರ್ಮಾ ಸೇರಿದಂತೆ ಹಲವು ಕ್ರಿಕೆಟಿಗರು ಮುಂಬೈನಲ್ಲಿದ್ದಾರೆ. ಇತ್ತ ಕೆಲ ಕ್ರಿಕೆಟಿಗರು ಬೆಂಗಳೂರಿನಲ್ಲಿದ್ದಾರೆ. ಮುಂಬೈನಲ್ಲಿ ಕೊರೋನಾ ವೈರಸ್ ವಿಪರೀತವಾಗಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಯಾವ ಕ್ರಿಕೆಟಿಗರು ಎಲ್ಲೂ ಕದಡುವಂತಿಲ್ಲ. ಇಷ್ಟೇ ಅಲ್ಲ ಭಾರತ ಸೇರಿದಂತೆ ಇತರ ದೇಶಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಸದ್ಯ ಯಾವುದೇ ಟೂರ್ನಿ ಅಥವಾ ಪ್ರವಾಸ ಸಾಧ್ಯವಿಲ್ಲ ಎಂದು ಬಿಸಿಸಿಐ ಮೂಲಗಳು ಹೇಳಿವೆ.
ರಾಹುಲ್ ದ್ರಾವಿಡ್ ಬಗ್ಗೆ ಮನ ಬಿಚ್ಚಿ ಮಾತನಾಡಿದ ಎಸ್ ಶ್ರೀಶಾಂತ್
ಕಳೆದ ವಾರ ಶ್ರೀಲಂಕಾ ಕ್ರಿಕೆಟ್ ಮಂಡಳಿ ಭಾರತ ತಂಡದ ಪ್ರವಾಸ ಕುರಿತು ಬಿಸಿಸಿಐಗೆ ಪತ್ರ ಬರೆದಿದೆ. ಇದಕ್ಕೆ ಬಿಸಿಸಿಐ ಕೂಡ ಪ್ರತಿಕ್ರಿಯೆ ನೀಡಿದೆ. ಬಿಸಿಸಿಐ, ಲಂಕಾ ಪ್ರವಾಸ ಮಾಡಲು ಉತ್ಸುಕವಾಗಿದೆ. ಆದರೆ ಸರ್ಕಾರದ ಲಾಕ್ಡೌನ್ ನಿರ್ಬಂಧ ಹಾಗೂ ಆಟಗಾರರಿಗೆ ವೈರಸ್ ಭೀತಿಯಿಂದ ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ಎಲ್ಲದಕ್ಕೂ ಕಾಯಬೇಕಾಗಿದೆ ಎಂದು ಉತ್ತರಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.