ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಕನ್ನಡಿಗ ಸೇರಿ ಐವರು ಪಾದಾರ್ಪಣೆ..!

Suvarna News   | Asianet News
Published : Jul 23, 2021, 02:44 PM ISTUpdated : Jul 23, 2021, 02:56 PM IST
ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಕನ್ನಡಿಗ ಸೇರಿ ಐವರು ಪಾದಾರ್ಪಣೆ..!

ಸಾರಾಂಶ

* ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ * ಭಾರತ ತಂಡದಲ್ಲಿ 6 ಮಹತ್ವದ ಬದಲಾವಣೆ * ಏಕದಿನ ಕ್ರಿಕೆಟ್‌ಗೆ ಭಾರತದ ಐವರು ಕ್ರಿಕೆಟಿಗರು ಪಾದಾರ್ಪಣೆ

ಕೊಲಂಬೊ(ಜು.23): ಭಾರತ ಹಾಗೂ ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಭಾರತ ತಂಡದಲ್ಲಿ 6 ಬದಲಾವಣೆ ಮಾಡಲಾಗಿದ್ದು, ಕನ್ನಡಿಗ ಕೆ. ಗೌತಮ್ ಸೇರಿ ಐದು ಆಟಗಾರರು ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯನ್ನು ಈಗಾಗಲೇ 2-0 ಅಂತರದಲ್ಲಿ ಕೈವಶ ಮಾಡಿಕೊಂಡಿರುವ ಭಾರತ ತಂಡ ಕೆಲ ಪ್ರಯೋಗಕ್ಕೆ ಕೈ ಹಾಕಿದೆ. ಪರಿಣಾಮ ಸಂಜು ಸ್ಯಾಮ್ಸನ್, ನಿತಿಶ್ ರಾಣಾ, ಚೇತನ್ ಸಕಾರಿಯಾ, ಕೃಷ್ಣಪ್ಪ ಗೌತಮ್ ಹಾಗೂ ರಾಹುಲ್ ಚಹಾರ್ ಏಕದಿನ ಕ್ರಿಕೆಟ್‌ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಆರ್‌ಸಿಬಿ ವೇಗಿ ನವದೀಪ್ ಸೈನಿ ಕೂಡಾ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದಾರೆ.

ಲಂಕಾ ಎದುರು ಸರಣಿ ಕ್ಲೀನ್‌ ಸ್ವೀಪ್‌ ಮೇಲೆ ಟೀಂ ಇಂಡಿಯಾ ಕಣ್ಣು

1980ರ ಟೀಂ ಇಂಡಿಯಾದಲ್ಲಿ ಇದೇ ಮೊದಲ ಬಾರಿಗೆ ಏಕದಿನ ತಂಡಕ್ಕೆ ಐವರು ಕ್ರಿಕೆಟಿಗರು ಪಾದಾರ್ಪಣೆ ಮಾಡಿದ್ದಾರೆ. ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಕನಸು ಕಾಣುತ್ತಿದ್ದ ದೇವದತ್ ಪಡಿಕ್ಕಲ್‌ಗೆ ಮತ್ತೊಮ್ಮೆ ನಿರಾಸೆ ಎದುರಾಗಿದೆ. 

ಇನ್ನು ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಸಹಾ ಮೂರು ಬದಲಾವಣೆ ಮಾಡಲಾಗಿದ್ದು, ಅಕಿಲಾ ಧನಂಜಯ, ಇಶಾನ್‌ ಜಯರತ್ನೆ, ರಮೇಶ್ ಮೆಂಡೀಸ್ ತಂಡ ಕೂಡಿಕೊಂಡಿದ್ದಾರೆ.

ತಂಡಗಳು ಹೀಗಿವೆ:

ಭಾರತ:

ಶ್ರೀಲಂಕಾ:

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!
U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!