ಮಂಗಳೂರು: ಕಿಟಕಿ ಮುರಿದು ಹಾಸ್ಟೆಲ್‌ನಿಂದ ಮೂವರು ವಿದ್ಯಾರ್ಥಿನಿಯರು ಪರಾರಿ

Published : Sep 21, 2022, 01:57 PM ISTUpdated : Sep 21, 2022, 01:59 PM IST
ಮಂಗಳೂರು: ಕಿಟಕಿ ಮುರಿದು ಹಾಸ್ಟೆಲ್‌ನಿಂದ ಮೂವರು ವಿದ್ಯಾರ್ಥಿನಿಯರು ಪರಾರಿ

ಸಾರಾಂಶ

ಹಾಸ್ಟೆಲ್‌ನ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿಯಾಗಿದ್ದಾರೆ. ಹಾಸ್ಟೆಲ್‌ನಿಂದ ಹೋಗುವ ಮುನ್ನ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ.

ಮಂಗಳೂರು, (ಸೆಪ್ಟೆಂಬರ್.21): ಮಂಗಳೂರಿನ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಹಾಸ್ಟೆಲ್‌ನ ಕಿಟಕಿಯನ್ನು ಮುರಿದು ಮೂವರು ವಿದ್ಯಾರ್ಥಿನಿಯರು  ಪರಾರಿಯಾಗಿದ್ದಾರೆ.

ಮುಂಜಾನೆ 3 ಗಂಟೆ ವೇಳೆಗೆ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಹೋಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಯಶಸ್ವಿನಿ, ದಕ್ಷತಾ, ಸಿಂಚನಾ ಪರಾರಿಯಾದ ವಿದ್ಯಾರ್ಥಿನಿಯರು.

ಚಿತ್ರದುರ್ಗ ಮುರುಘಾ ಮಠ ಹಾಸ್ಟೆಲ್‌ನ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ, ಪ್ರಕರಣ ದಾಖಲು

ಯಶಸ್ವಿನಿ, ದಕ್ಷತಾ ಬೆಂಗಳೂರು ನಿವಾಸಿ, ಸಿಂಚನಾ ಚಿತ್ರದುರ್ಗ ಮೂಲದ ವಿದ್ಯಾರ್ಥಿನಿಯಾಗಿದ್ದು, ಇವರು ಮಂಗಳೂರಿನ ಪ್ರತಿಷ್ಠಿತ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದರು.

ಇನ್ನು ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ಹೋಗುವ ಮುನ್ನ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದ್ದು, ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಅಂತಾ ನೋಟ್‌ನಲ್ಲಿ ಬರೆದಿದ್ದಾರೆ.

ಇನ್ನು ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊಹ್ಲಿ ಹೊಸ ವರ್ಷದ ಪೋಸ್ಟ್‌ಗೆ 80 ಲಕ್ಷ ಲೈಕ್ಸ್; ವಿರುಷ್ಕಾ ಜೋಡಿ ನೋಡಿ ದೃಷ್ಠಿ ಆಗೋದು ಗ್ಯಾರಂಟಿ ಎಂದ ಫ್ಯಾನ್ಸ್
ಮುಗಿಲು ಮುಟ್ಟಿದ ಕೊಹ್ಲಿ-ರೋಹಿತ್ ಕ್ರೇಜ್‌; ಭಾರತ-ಕಿವೀಸ್ ಮೊದಲ ಒನ್‌ಡೇ ಮ್ಯಾಚ್ ಟಿಕೆಟ್ 8 ನಿಮಿಷದಲ್ಲಿ ಸೋಲ್ಡೌಟ್