ಹೇರ್ ಡ್ರೈಯರ್, ಇಸ್ತ್ರಿ ಪೆಟ್ಟಿಗೆ..ಬಡ ಬಿಸಿಸಿಐಗೆ ಇಂಥಾ ದುಸ್ಥಿತಿ ಬರಬಾರ್ದಿತ್ತು! ಒಂದೊಂದು ಟ್ರೋಲು...

Published : Jan 05, 2020, 11:30 PM ISTUpdated : Jan 05, 2020, 11:37 PM IST
ಹೇರ್ ಡ್ರೈಯರ್, ಇಸ್ತ್ರಿ ಪೆಟ್ಟಿಗೆ..ಬಡ ಬಿಸಿಸಿಐಗೆ ಇಂಥಾ ದುಸ್ಥಿತಿ ಬರಬಾರ್ದಿತ್ತು! ಒಂದೊಂದು ಟ್ರೋಲು...

ಸಾರಾಂಶ

ಭಾರತ-ಶ್ರೀಲಂಕಾ ನಡುವಿನ ಮೊದಲ ಟಿ-20 ಪಂದ್ಯ ಮಳೆಗೆ ಆಹುತಿ| ಟ್ರೋಲ್ ಆದ ಬಿಸಿಸಿಐ| ಪಿಚ್ ಒಣಗಿಸಲು ಹೇರ್ ಡ್ರೈಯರ್. ಇಸ್ತ್ರಿ ಪೆಟ್ಟಿಗೆ ಸಾಹಸ

ಗುವಾಹಟಿ[ಜ.05]: ಇಂಡೋ-ಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು, ಪಂದ್ಯ ಒಂದೂ ಎಸೆತ ಕಾಣದೇ ರದ್ದಾಗಿದೆ. ವರ್ಷದ ಮೊದಲ ಪಂದ್ಯವೇ ಮಳೆಯಿಂದ ರದ್ದಾಯಿತು.

ಬರ್ಸಾಪುರ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡರು. ಟಾಸ್ ಮುಗಿದ ಬೆನ್ನಲ್ಲೇ ನಿರಂತರ ಮಳೆ ಸುರಿಯಿತು. ಹೀಗಾಗಿ ಪಂದ್ಯವನ್ನು ಕೆಲಕಾಲ ಮುಂದೂಡಲಾಯಿತು. ಪಿಚ್ ಒದ್ದೆಯಾಗಿದ್ದರಿಂದ ಹೇರ್ ಡ್ರೈಯರ್ ಹಾಗೂ ಐರನ್ ಬಾಕ್ಸ್ ಬಳಸಿ ಒಣಗಿಸಲು ಪ್ರಯತ್ನಿಸಲಾಯಿತು. ಅಂಪೈರ್ ಮತ್ತೊಮ್ಮೆ 9.30ರ ವೇಳೆಗೆ ಪಿಚ್ ಪರಿಶೀಲನೆ ನಡೆಸಿದರು. ಆದರೂ ಔಟ್ ಫೀಲ್ಡ್ ಒದ್ದೆಯಾಗಿದ್ದರಿಂದ ರಿಸ್ಕ್ ತೆಗೆದುಕೊಳ್ಳಲು ಮ್ಯಾಚ್ ರೆಫ್ರಿ ಮುಂದಾಗಲಿಲ್ಲ. ಹೀಗಾಗಿ ಪಂದ್ಯ ರದ್ದು ಮಾಡುವ ತೀರ್ಮಾನಕ್ಕೆ ಬರಲಾಯಿತು.

ಹೇರ್ ಡ್ರೈಯರ್ ಹಾಗೂ ಐರನ್ ಬಾಕ್ಸ್ ಬಳಸಿ ಪಿಚ್ ಒಣಗಿಸಲು ಪ್ರಯತ್ನಿಸಿದ್ದು ಈಗ ಟ್ರೋಲ್ ಗೆ ಆಹಾರವಾಗಿದೆ. ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಸಂಸ್ಥೆಗೆ ಇಂಥ ಸ್ಥಿತಿ ಬರಬಾರದಿತ್ತು , ಪೂವರ್ ಬಿಸಿಸಿಐ ಎಂದು ಸೋಶಿಯಲ್ ಮೀಡಿಯಾ ಹೇಳುತ್ತಿದೆ.

ಅದೆಷ್ಟೋ ಮಂದಿ ಸಾವಿರ ಸಾವಿರ ರೂ. ನೀಡಿ ಪಂದ್ಯ ವೀಕ್ಷಣೆಗೆ ಟಿಕೆಟ್ ತೆಗೆದುಕೊಂಡಿದ್ದರು. ಒಂದು ಸಣ್ಣ ತುಂತುರು ಮಳೆಯಿಂದ ಪಂದ್ಯ ರದ್ದಾದರೆ ಹೇಗೆ? ನಮ್ಮ ಬೆಂಗಳೂರು ಅಥವಾ ಕೋಲ್ಕತ್ತಾದಲ್ಲಿ ಆಗಿದ್ದರೆ ಹೀಗಾಗುತ್ತಿರಲಿಲ್ಲ ಬಿಡಿ. ಅದು ಏನೇ ಹೇಳಿ ಅಂತಾರಾಷ್ಟ್ರೀಯ ಪಂದ್ಯವೊಂದಕ್ಕೆ ಇಂಥ ಸ್ಥಿತಿ ಬರಬಾರದಿತ್ತು.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಸೂಪರ್‌ಸ್ಟಾರ್ ತಯಾರಾಗುತ್ತಿದ್ದಾನೆ’; ವೈಭವ್ ಸೂರ್ಯವಂಶಿ ಬಗ್ಗೆ ಕೃಷ್ಣಮಾಚಾರಿ ಶ್ರೀಕಾಂತ್ ಭರ್ಜರಿ ಭವಿಷ್ಯ
ಮಹಿಳಾ ಏಷ್ಯಾಕಪ್‌ ಟಿ20: ಇಂದು ಭಾರತ ಎದುರು ಪಾಕಿಸ್ತಾನಕ್ಕೆ ಡು ಆರ್ ಡೈ ಮ್ಯಾಚ್! ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಎಲ್ಲಿ?