
ನವದೆಹಲಿ(ಜೂ.17): ಮುಂಬರುವ ದಿನಗಳಲ್ಲೂ ಕೋವಿಡ್ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಒಂದೇ ಸಮಯದಲ್ಲಿ 2 ಸರಣಿಗಳನ್ನು ಆಯೋಜಿಸುವ ಯೋಜನೆಯನ್ನು ಮುಂದುವರಿಸಲಾಗುತ್ತದೆ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ತಿಳಿಸಿದ್ದಾರೆ.
ಭಾರತ ಟೆಸ್ಟ್ ತಂಡ ಇಂಗ್ಲೆಂಡ್ನಲ್ಲಿರುವಾಗ, ಮತ್ತೊಂದು ತಂಡ ಶ್ರೀಲಂಕಾ ಪ್ರವಾಸಕ್ಕೆ ತೆರಳಿ ಏಕದಿನ ಹಾಗೂ ಟಿ20 ಸರಣಿಗಳನ್ನು ಆಡಲಿದೆ. ‘ಎಲ್ಲಾ ಮೂರು ಮಾದರಿಗಳಲ್ಲಿ ಆಡುವ ಆಟಗಾರರಿಗೆ ಬಯೋ ಬಬಲ್, ಕ್ವಾರಂಟೈನ್ನಿಂದ ತಕ್ಕಮಟ್ಟಿಗೆ ವಿನಾಯಿತಿ ಸಿಗುವಂತೆ ಮಾಡುವ ಉದ್ದೇಶ ಈ ಯೋಜನೆಯದ್ದಾಗಿದೆ. ಅಲ್ಲದೇ ಹೀಗೆ ಮಾಡುವುದರಿಂದ ಹೆಚ್ಚು ದ್ವಿಪಕ್ಷೀಯ ಸರಣಿಗಳನ್ನು ನಡೆಸಲು ಸಾಧ್ಯ’ ಎಂದು ಧುಮಾಲ್ ಹೇಳಿದ್ದಾರೆ.
ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಭಾರತ, ಕಿವೀಸ್ ಸಿದ್ದತೆ ಹೇಗಿದೆ?
ಒಂದು ಕಡೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿದ್ದರೆ, ಮತ್ತೊಂದೆಡೆ ಶಿಖರ್ ಧವನ್ ನೇತೃತ್ವದ ಭಾರತದ ಮತ್ತೊಂದು ತಂಡ ಸೀಮಿತ ಓವರ್ಗಳ ಸರಣಿಯನ್ನಾಡಲು ಲಂಕಾ ಪ್ರವಾಸಕ್ಕೆ ತೆರಳಿದೆ. ಎರಡು ತಂಡಗಳು ಸಾಕಷ್ಟು ಬಲಿಷ್ಠವಾಗಿದ್ದು, ಉತ್ತಮ ಬೆಂಚ್ ಸ್ಟ್ರೆಂಥ್ ಹೊಂದಿವೆ. ಎರಡು ತಂಡಗಳು ಮುಂಬರುವ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದರೆ, ಮುಂದಿನ ದಿನಗಳಲ್ಲಿ ಏಕಕಾಲದಲ್ಲಿ ಎರಡು ತಂಡಗಳು ದ್ವಿಪಕ್ಷೀಯ ಸರಣಿ ಆಡಿಸಬಹುದಾಗಿದೆ ಎಂದು ಧುಮಾಲ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.