
ಪೋಚೆಫ್ಸ್ಟ್ರೋಮ್(ಫೆ.09): ಭಾರತ-ಬಾಂಗ್ಲಾದೇಶ ನಡುವಿನ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ.
ಇಲ್ಲಿನ ಸೆನ್ವೆಸ್ ಪಾರ್ಕ್ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತದ ಕಿರಿಯರ ತಂಡವು ದಾಖಲೆಯ 5ನೇ ಪ್ರಶಸ್ತಿಯ ಮೇಲೆ ಚಿತ್ತ ನೆಟ್ಟಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸೆಮಿಫೈನಲ್ನಲ್ಲಿ ಪಾಕಿಸ್ತಾನ ವಿರುದ್ಧ ಆಡಿದ ತಂಡವೇ ಫೈನಲ್ನಲ್ಲಿ ಕಣಕ್ಕಿಳಿಯುತ್ತಿದೆ. ಇನ್ನು ಬಾಂಗ್ಲಾದೇಶ ತಂಡದ ಪರ ಒಂದು ಬದಲಾವಣೆ ಮಾಡಲಾಗಿದ್ದು, ಮುರಾದ್ ಬದಲಿಗೆ ಅವಿಶೇಕ್ ತಂಡ ಕೂಡಿಕೊಂಡಿದ್ದಾರೆ.
ಅಂಡರ್ 19 ವಿಶ್ವಕಪ್: 5ನೇ ವಿಶ್ವಕಪ್ ಗೆಲ್ಲಲು ಯಂಗೀಸ್ತಾನ್ ರೆಡಿ
ಭಾರತ ಪರ ಯಶಸ್ವಿ ಜೈಸ್ವಾಲ್, ಕಾರ್ತಿಕ್ ತ್ಯಾಗಿ ಸೇರಿದಂತೆ ಹಲವರು ಮಿಂಚಿನ ಪ್ರದರ್ಶನ ಮೂಲಕ ಗಮನ ಸೆಳೆದಿದ್ದಾರೆ. ಭಾರತ ತಂಡ ಒಂದು ಸೋಲು ಕಾಣದೆ ಫೈನಲ್ ಪ್ರವೇಶಿಸಿದೆ.
ಭಾರತದ ಕಿರಿಯರ ತಂಡಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಉಮೇಶ್ ಯಾದವ್ ಸೇರಿದಂತೆ ಹಲವು ಕ್ರಿಕೆಟಿಗರು ಶುಭ ಕೋರಿದ್ದಾರೆ.
ತಂಡಗಳು ಹೀಗಿವೆ:
ಭಾರತ:
ಬಾಂಗ್ಲಾದೇಶ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.