ವೈಭವ್ ಸೂರ್ಯವಂಶಿ ಶತಕ ಬಾರಿಸಿದ್ರೆ ಬೀದಿಯಲ್ಲಿ ಬೆತ್ತಲಾಗುವೆ: ಪಾಕ್ ಮಾಜಿ ಕ್ರಿಕೆಟಿಗನ ಸವಾಲು!

Published : Jun 25, 2026, 02:43 PM IST
Vaibhav Suryavanshi

ಸಾರಾಂಶ

ಭಾರತದ ಯುವ ಕ್ರಿಕೆಟ್ ಸಂಚಲನ Vaibhav Suryavanshi ಇಂಗ್ಲೆಂಡ್‌ನಲ್ಲಿ ಶತಕ ಬಾರಿಸುವ ಸಾಮರ್ಥ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ Pakistanದ ಮಾಜಿ ಆಟಗಾರ, ವಿಚಿತ್ರ ಸವಾಲು ಹಾಕಿ ಹೊಸ ವಿವಾದ ಸೃಷ್ಟಿಸಿದ್ದಾರೆ.

ಭಾರತದ ಯುವ ಕ್ರಿಕೆಟ್ ಸಂಚಲನ Vaibhav Suryavanshi ವಿರುದ್ಧ ಪಾಕಿಸ್ತಾನದ ಮಾಜಿ ವೇಗಿ Tanvir Ahmed ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ.

ವೈಭವ್ ಸೂರ್ಯವಂಶಿ ಶೀಘ್ರದಲ್ಲೇ ಐರ್ಲೆಂಡ್ ಅಥವಾ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಸಾಧ್ಯತೆಯಿದೆ. ಈ ಕುರಿತು ಮಾತನಾಡಿದ ತನ್ವೀರ್ ಅಹ್ಮದ್, "ಐಪಿಎಲ್ ಅಥವಾ ಏಷ್ಯಾದ ಪಿಚ್‌ಗಳಲ್ಲಿ ರನ್ ಗಳಿಸುವುದು ಸುಲಭ. ಆದರೆ ಇಂಗ್ಲೆಂಡ್‌ನ ಸ್ವಿಂಗ್ ಮತ್ತು ಸೀಮ್ ಇರುವ ಪಿಚ್‌ಗಳಲ್ಲಿ ಬ್ಯಾಟಿಂಗ್ ಮಾಡುವುದು ನಿಜವಾದ ಪರೀಕ್ಷೆ" ಎಂದು ಹೇಳಿದ್ದಾರೆ.

ಇದಕ್ಕೂ ಮೀರಿದ ವಿವಾದಾತ್ಮಕ ಹೇಳಿಕೆಯಲ್ಲಿ, "ವೈಭವ್ ಇಂಗ್ಲೆಂಡ್ ವಿರುದ್ಧ ಶತಕ ಬಾರಿಸಿದರೆ ನಾನು ಲಾಹೋರ್‌ನ ಬೀದಿಗಳಲ್ಲಿ ಬೆತ್ತಲೆಯಾಗಿ ನಡೆಯುತ್ತೇನೆ" ಎಂದು ಸವಾಲು ಹಾಕಿದ್ದಾರೆ.

ಅಷ್ಟೇ ಅಲ್ಲ, ವೈಭವ್ ಅವರ ವಯಸ್ಸಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿರುವ ತನ್ವೀರ್, "ಅವನಿಗೆ 15 ವರ್ಷ ಎನ್ನುವುದು ನಂಬಲು ಸಾಧ್ಯವಿಲ್ಲ. ನನ್ನ ಪ್ರಕಾರ ಅವನಿಗೆ ಕನಿಷ್ಠ 22 ವರ್ಷ ವಯಸ್ಸಿದೆ. ಅವನ ಹಿಪ್ ರೊಟೇಷನ್, ಶಕ್ತಿ ಮತ್ತು ಸಿಕ್ಸರ್ ಹೊಡೆಯುವ ಸಾಮರ್ಥ್ಯ 15 ವರ್ಷದ ಹುಡುಗನಲ್ಲಿ ಕಾಣಿಸುವುದಿಲ್ಲ" ಎಂದು ಆರೋಪಿಸಿದ್ದಾರೆ.

ಇದರ ಜೊತೆಗೆ ವೈಭವ್ ಅವರನ್ನು "ಬ್ಲೈಂಡ್ ಸ್ಲಾಗರ್" ಎಂದು ಟೀಕಿಸಿರುವ ಅವರು, ಸಣ್ಣ ಮೈದಾನಗಳಲ್ಲಿ ಅಡ್ಡಾದಿಡ್ಡಿ ಬ್ಯಾಟ್ ಬೀಸಿ ರನ್ ಗಳಿಸುವ ಆಟಗಾರ ಎಂದು ಕಿಡಿಕಾರಿದ್ದಾರೆ.

ಆದರೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮತ್ತು ಮಾಜಿ ಆಟಗಾರರು ಈ ಹೇಳಿಕೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವೈಭವ್ ತನ್ನ ಪ್ರತಿಭೆಯಿಂದಲೇ ಎಲ್ಲ ಟೀಕೆಗಳಿಗೆ ಬ್ಯಾಟ್‌ನಲ್ಲೇ ಉತ್ತರ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೀಗ ತನ್ವೀರ್ ಅಹ್ಮದ್ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅನೇಕ ಕ್ರಿಕೆಟ್ ಅಭಿಮಾನಿಗಳು ಇದನ್ನು ಅನಗತ್ಯ ವಿವಾದ ಸೃಷ್ಟಿಸುವ ಪ್ರಯತ್ನ ಎಂದು ಟೀಕಿಸುತ್ತಿದ್ದು, ಕೆಲವರು ವೈಭವ್ ಇಂಗ್ಲೆಂಡ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಟೀಕಾಕಾರರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇವಲ 14ನೇ ವಯಸ್ಸಿನಲ್ಲೇ ಅಸಾಧಾರಣ ಬ್ಯಾಟಿಂಗ್ ಕೌಶಲ್ಯದಿಂದ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿ ಈಗಾಗಲೇ ಭಾರತದ ಭವಿಷ್ಯದ ಸೂಪರ್‌ಸ್ಟಾರ್ ಎಂದು ಗುರುತಿಸಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ವಯಸ್ಸು ಮತ್ತು ಸಾಮರ್ಥ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ತನ್ವೀರ್ ಅವರ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊಹ್ಲಿ ಸೇರಿ ದಿಗ್ಗಜರ ಯಾಕೆ ಆಮಂತ್ರಿಸಿಲ್ಲ? ಮದುವೆಯಲ್ಲೇ ಕ್ರಿಕೆಟಿಗ ಆಕಾಶ್ ದೀಪ್ ಉತ್ತರಕ್ಕೆ ಫ್ಯಾನ್ಸ್ ಫಿದಾ
ಐರ್ಲೆಂಡ್ ವಿರುದ್ಧ ಮೈದಾನಕ್ಕಿಳಿದ ಕ್ಷಣವೇ ಇತಿಹಾಸ: 37 ವರ್ಷದ ದಾಖಲೆ ಮುರಿಯಲಿರುವ ವೈಭವ್ ಸೂರ್ಯವಂಶಿ