
ಹರಾರೆ (ಜು.26) ಸತತ ಸರಣಿ ಸೋಲಿನಿಂದ ಕಂಗೆಟ್ಟಿದ್ದ ಟೀಂ ಇಂಡಿಯಾ ಇದೀಗ ಜಿಂಬಾಬ್ವೆ ವಿರುದ್ದ 3-0 ಅಂತರದಲ್ಲಿ ಸರಣಿ ಕೈವಶ ಮಾಡಿದೆ. 3ನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, ಟೀಂ ಇಂಡಿಯಾದ ಸಂಘಟಿತ ದಾಳಿ ಮೂಲಕ ರನ್ ಗೆಲುವು ದಾಖಲಿಸಿದೆ. ಭಾರತ ನೀಡಿದ 193 ರನ್ ಗುರಿ ಬೆನ್ನಟ್ಟಲು ವಿಫಲವಾದ ಜಿಂಬಾಬ್ವೆ ರನ್ ಸಿಡಿಸಿ ಸೋಲೊಪ್ಪಿಕೊಂಡಿತು.
ಜಿಂಬಾಬ್ವೆ ತಂಡ ಮತ್ತೆ ಬ್ಯಾಟಿಂಗ್ನಲ್ಲಿ ಎಡವಿತು. ಭಾರತ ನೀಡಿದ ಟಾರ್ಗೆಟ್ ಚೇಸ್ ಮಾಡಲು ಸಾಧ್ಯವಾಗಲಿಲ್ಲ. ಆರಂಭಿಕ ಆಘಾತ, ಮಧ್ಯಮ ಕ್ರಮಾಂಕದ ಕುಸಿತದ ನಡುವೆ ರ್ಯಾನ್ ಬರ್ಲ್ ಹೋರಾಟ ನೀಡಿದರು. ಏಕಾಂಗಿ ಹೋರಾಟ ನೀಡಿ ಹಾಫ್ ಸೆಂಚುರಿ ಸಿಡಿಸಿದರು. ಆದರೆ ರ್ಯಾನ್ ಬರ್ಲ್ ಹೋರಾಟಕ್ಕೆ ಯಾರಿಂದಲೂ ಸಾಥ್ ಸಿಗಲಿಲ್ಲ. ಪರಿಣಾಮ 7 ವಿಕೆಟ್ ನಷ್ಟಕ್ಕೆ ರನ್ ಸಿಡಿಸಿ ಸೋಲಿಗೆ ಶರಣಾಯಿತು.
ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ವೈಭವ್ ಸೂರ್ಯವಂಶಿ ಸ್ಫೋಟಕ ಆರಂಭ ನೀಡಿದರು. ಅಭಿಷೇಕ್ ಶರ್ಮಾ ಕೇವಲ 2 ರನ್ ಸಿಡಿಸಿ ನಿರಾಸೆ ಮೂಡಿಸಿದರು. ಆದರೆ ವೈಭವ್ ಸೂರ್ಯವಂಶಿ ಆಟಕ್ಕೆ ಜಿಂಬಾಬ್ವೆ ಬಳಲಿ ಬೆಂಡಾಯಿತು. 49 ಎಸೆತದಲ್ಲಿ 8 ಬೌಂಡರಿ ಹಾಗೂ 4 ಸಿಕ್ಸರ್ ಮೂಲಕ 81 ರನ್ ಸಿಡಿಸಿದರು. ವೈಭವ್ ಸೂರ್ಯವಂಶಿ ನೀಡಿದ ಆರಂಭದಿಂದ ಭಾರತ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿತು.
ಇಶಾನ್ ಕಿಶನ್ 29, ನಾಯಕ ಶ್ರೇಯಸ್ ಅಯ್ಯರ್ 25, ರಿಂಕು ಸಿಂಗ್ 25 ರನ್ ಹಾಗೂ ತಿಲಕ್ ವರ್ಮಾ ಅಜೇಯ 11 ರನ್ ಸಿಡಿಸಿದರು. ಈ ಮೂಲಕ ಭಾರತ 5 ವಿಕೆಟ್ ಕಳೆದುಕೊಂಡು 192 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.