ವಿಜಯ್ ಹಜಾರೆ ಟ್ರೋಫಿ: ಸೋಲಿನ ಬೆನ್ನಲ್ಲೇ ಅಶ್ವಿನ್’ಗೆ ಆಘಾತ..?

Published : Oct 26, 2019, 04:45 PM IST
ವಿಜಯ್ ಹಜಾರೆ ಟ್ರೋಫಿ: ಸೋಲಿನ ಬೆನ್ನಲ್ಲೇ ಅಶ್ವಿನ್’ಗೆ ಆಘಾತ..?

ಸಾರಾಂಶ

ಟೀಂ ಇಂಡಿಯಾ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ವಿಜಯ್ ಹಜಾರೆ ಫೈನಲ್ ಪಂದ್ಯದಲ್ಲಿ ಮಾಡಿದ ಎಡವಟ್ಟು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆಯಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಬೆಂಗಳೂರು[ಅ.26]: ತಮಿಳು​ನಾಡು ತಂಡದ ತಾರಾ ಆಟ​ಗಾರ ಆರ್‌.ಅ​ಶ್ವಿನ್‌ ಶುಕ್ರ​ವಾರ 3ನೇ ಕ್ರಮಾಂಕ​ದಲ್ಲಿ ಕ್ರೀಸ್‌ಗಿಳಿ​ದಿದ್ದು ಅಚ್ಚ​ರಿಗೆ ಕಾರ​ಣ​ವಾ​ಯಿತು. ಆದರೆ ಅಶ್ವಿನ್‌ ಭಾರತ ತಂಡದ ಹೆಲ್ಮೆಟ್‌ ಧರಿಸಿ ಬ್ಯಾಟಿಂಗ್‌ ಮಾಡಿದ್ದು, ಅವ​ರಿಗೆ ಸಮ​ಸ್ಯೆ ಉಂಟು ಮಾಡುವ ಸಾಧ್ಯತೆ ಇದೆ.

ವಿಜಯ್ ಹಜಾರೆ ಟ್ರೋಫಿ; ತಮಿಳುನಾಡು ಮಣಿಸಿ ಕಪ್ ಗೆದ್ದ ಕರ್ನಾಟಕ!

ದೇಶೀಯ ಕ್ರಿಕೆಟ್‌ ನಿಯಮದ ಪ್ರಕಾರ ಬಿಸಿಸಿಐ ಲೋಗೋ ಇರುವ ಹೆಲ್ಮೆಟ್‌ ಧರಿಸುವಂತಿಲ್ಲ. ಒಂದು ವೇಳೆ ಅದೇ ಹೆಲ್ಮೆಟ್‌ ಬಳಸುತ್ತಿದ್ದರೆ, ಲೋಗೋ ಮೇಲೆ ಟೇಪ್‌ ಸುತ್ತಬೇಕು. ಕರ್ನಾಟಕದ ಮಯಾಂಕ್‌, ರಾಹುಲ್‌ ತಮ್ಮ ಹೆಲ್ಮೆಟ್‌ ಮೇಲಿನ ಬಿಸಿ​ಸಿಐ ಲೋಗೋಗೆ ಟೇಪ್‌ ಸುತ್ತಿದ್ದರು.

KPL ಫಿಕ್ಸಿಂಗ್: ಇಬ್ಬರು ಕ್ರಿಕೆಟಿಗರು ಬಂಧನ..!

ವಿಜಯ್ ಹಜಾರೆ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ-ತಮಿಳುನಾಡು ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ತಮಿಳುನಾಡು ತಂಡ 252 ರನ್ ಬಾರಿಸಿ ಆಲೌಟ್ ಆಯಿತು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಅಶ್ವಿನ್ ಕೇವಲ 8 ರನ್ ಗಳಿಸಿ ಕೌಶಿಕ್’ಗೆ ವಿಕೆಟ್ ಒಪ್ಪಿಸಿದರು. ಇನ್ನು ಗುರಿ ಬೆನ್ನತ್ತಿದ ಕರ್ನಾಟಕ 23 ಓವರ್’ಗೆ 1 ವಿಕೆಟ್ ಕಳೆದುಕೊಂಡು 146 ರನ್ ಬಾರಿಸಿತ್ತು. ಈ ವೇಳೆ ಮಂದಬೆಳಕು ಹಾಗೂ ಮಳೆ ಅಡ್ಡಿಪಡಿಸಿದ್ದರಿಂದ ವಿಜೆಡಿ ನಿಯಮದನ್ವಯ ಕರ್ನಾಟಕ ತಂಡವನ್ನು 60 ರನ್’ಗಳಿಂದ ಜಯಶಾಲಿ ಎಂದು ಘೋಷಿಸಲಾಯಿತು. ಇದರೊಂದಿಗೆ ಕರ್ನಾಟಕ 4ನೇ ಬಾರಿಗೆ ವಿಜಯ್ ಹಜಾರೆ ಟ್ರೋಫಿ ಕೈವಶ ಮಾಡಿಕೊಂಡಿತು.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ಲುಕ್‌ನಲ್ಲಿ ವಿರಾಟ್ ಕೊಹ್ಲಿ, ಪಾಸ್ಟೆಲ್ ಹೇರ್‌ಸ್ಟೈಲ್‌ನಲ್ಲಿ ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡ ಕ್ರಿಕೆಟರ್
ಮುಂಬೈನ ಅತ್ಯಂತ ದುಬಾರಿ ಏರಿಯಾದಲ್ಲಿ ಶ್ರೇಯಸ್ ಅಯ್ಯರ್ ಹೊಸ ಮನೆ: ತಿಂಗಳ ಬಾಡಿಗೆ ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ