ವಿಜಯ್ ಹಜಾರೆ ಟ್ರೋಫಿ: ದೇವದತ್ ಪಡಿಕ್ಕಲ್ ಆಕರ್ಷಕ ಶತಕ, ಕರ್ನಾಟಕ ರೋಚಕವಾಗಿ ಸೆಮೀಸ್‌ಗೆ ಲಗ್ಗೆ

Published : Jan 12, 2025, 08:53 AM IST
ವಿಜಯ್ ಹಜಾರೆ ಟ್ರೋಫಿ: ದೇವದತ್ ಪಡಿಕ್ಕಲ್ ಆಕರ್ಷಕ ಶತಕ, ಕರ್ನಾಟಕ ರೋಚಕವಾಗಿ ಸೆಮೀಸ್‌ಗೆ ಲಗ್ಗೆ

ಸಾರಾಂಶ

ದೇವದತ್ತ ಪಡಿಕ್ಕಲ್ ಶತಕ (102) ಮತ್ತು ಪ್ರಸಿದ್ಧ್ ಕೃಷ್ಣ ಕೊನೆಯ ಓವರ್‌ಗಳ ಮಾರಕ ಬೌಲಿಂಗ್ ನೆರವಿನಿಂದ ಕರ್ನಾಟಕ ಬರೋಡಾವನ್ನು 5 ರನ್‌ಗಳಿಂದ ಸೋಲಿಸಿ ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ತಲುಪಿದೆ. ಬರೋಡಾ ಶಾಶ್ವತ್ ರಾವತ್ (404) ಶತಕ ಬಾರಿಸಿದರೂ ಸೋಲಿನಿಂದ ಪಾರಾಗಲಿಲ್ಲ. ಕರ್ನಾಟಕ ಜನವರಿ 15 ರಂದು ಗುಜರಾತ್ ಅಥವಾ ಹರ್ಯಾಣವನ್ನು ಎದುರಿಸಲಿದೆ.

ವಡೋದರಾ: ದೇವ್‌ದತ್ ಪಡಿಕ್ಕಲ್ ಹೋರಾಟದ ಶತಕ ಹಾಗೂ ಡೆತ್ ಓವರ್‌ನಲ್ಲಿ ಪ್ರಸಿದ್ ಕೃಷ್ಣ ಮ್ಯಾಜಿಕ್ ನೆರವಿನಿಂದ ವಿಜಯ್ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿಯಲ್ಲಿ ಕರ್ನಾಟಕ ಸೆಮಿಫೈನಲ್ ಪ್ರವೇಶಿಸಿದೆ. ಸತತ 3ನೇ ಬಾರಿ ಸೆಮೀಸ್‌ಗೇರಿರುವ ತಂಡ 5 ವರ್ಷ ಬಳಿಕ ಪ್ರಶಸ್ತಿ ಗೆಲ್ಲುವ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.

ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಕರ್ನಾಟಕ ತಂಡ ಬರೋಡಾ ವಿರುದ್ಧ 5 ರನ್ ರೋಚಕ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ರಾಜ್ಯ 8 ವಿಕೆಟ್‌ಗೆ 281 ರನ್ ಗಳಿಸಿತು. ಆಸ್ಟ್ರೇಲಿಯಾ ಸರಣಿಯಿಂದ ಮರಳಿದ್ದ ದೇವ್‌ದತ್ 99 ಎಸೆತಗಳಲ್ಲಿ 102 ರನ್ ಸಿಡಿಸಿ ತಂಡವನ್ನು ಕಾಪಾಡಿದರು. ಅನೀಶ್ ಕೆ.ವಿ. 52, ಸ್ಮರಣ್ 28, ಕೆ.ಎಲ್.ಶ್ರೀಜಿತ್ 28 ರನ್ ಕೊಡುಗೆ ನೀಡಿದರು. ನಾಯಕ ಮಯಾಂಕ್ ಅಗರ್‌ವಾಲ್ (06) ಈ ಪಂದ್ಯದಲ್ಲಿ ವಿಫಲರಾದರು. ರಾಜ್ ಲಿಂಬಾನಿ, ಆತಿತ್ ಸೇಲ್ ತಲಾ 2 ವಿಕೆಟ್ ಕಿತ್ತರು.

RCB ತಂಡದಲ್ಲಿದ್ದಾನೆ ಡೇಂಜರಸ್ ಬ್ಯಾಟರ್; 30 ಪಂದ್ಯ 9 ಶತಕ, 11 ಅರ್ಧಶತಕ! ಈತನೇ ಈ ಸಲ ಇಂಪ್ಯಾಕ್ಟ್ ಆಟಗಾರ?

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಬರೋಡಾ ಒಂದು ಹಂತ ದಲ್ಲಿ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದರೆ ಕೊನೆಯಲ್ಲಿ ಕರ್ನಾಟಕ ಮೇಲುಗೈ ಸಾಧಿಸಿತು. ಬರೋಡಾ 49.5 ಓವರಲ್ಲಿ 276ಕ್ಕೆ ಆಲೌಟಾಯಿತು. ತಂಡ ಒಂದು ಹಂತದಲ್ಲಿ 2 ವಿಕೆಟ್‌ಗೆ 185 ರನ್ ಗಳಿಸಿತ್ತು. ಆದರೆ ಕೊನೆಯಲ್ಲಿ ಮುಗ್ಗರಿಸಿ 91 ರನ್‌ಗೆ ಕೊನೆ 8 ವಿಕೆಟ್ ಕಳೆದುಕೊಂಡಿತು. ತಂಡಕ್ಕೆ ಕೊನೆ 4 ಓವರಲ್ಲಿ 38 ರನ್ ಬೇಕಿತ್ತು. 47ನೇ ಓವರ್‌ನಲ್ಲಿ ಶಾಶ್ವತ್ ಸೇರಿ ಇಬ್ಬರನ್ನು ಪ್ರಸಿದ್ ಔಟ್ ಮಾಡಿ ಪಂದ್ಯ ಕರ್ನಾಟಕ ಪರ ವಾಲುವಂತೆ ಮಾಡಿದರು. ಕೊನೆ ಓವರ್‌ಗೆ 13 ರನ್ ಬೇಕಿದ್ದಾಗ ಬರೋಡಾ ಗೆಲ್ಲಲಿಲ್ಲ. ಶಾಶ್ವತ್ ರಾವತ್ 104, ಆತಿತ್ 56 ರನ್ ಸಿಡಿಸಿದರೂ ತಂಡವನ್ನು ಗೆಲ್ಲಿಸಲು ವಿಫಲರಾದರು. 

ಜ.15, 16ಕ್ಕೆ ಸೆಮೀಸ್

ಟೂರ್ನಿಯ ಸೆಮಿಫೈನಲ್ ಜ.15, 16ಕ್ಕೆ ನಡೆಯಲಿವೆ. ಕರ್ನಾಟಕಕ್ಕೆ ಜ.15ರಂದು ಗುಜರಾತ್ ಅಥವಾ ಹರ್ಯಾಣ ಸವಾಲು ಎದುರಾಗಲಿದೆ. ಜ.16ಕ್ಕೆ ಮಹಾರಾಷ್ಟ್ರ ತಂಡ ವಿದರ್ಭ ಅಥವಾ ರಾಜಸ್ಥಾನ ವಿರುದ್ಧ ಆಡಲಿದೆ.  

ಚಾಂಪಿಯನ್ಸ್ ಟ್ರೋಫಿಗೂ ಮುನ್ನವೇ ಬಾಂಗ್ಲಾದೇಶಕ್ಕೆ ಬಿಗ್ ಶಾಕ್ ; ಸ್ಟಾರ್ ಕ್ರಿಕೆಟಿಗ ದಿಢೀರ್ ನಿವೃತ್ತಿ!

ಮಹಾರಾಷ್ಟ್ರ ಸೆಮಿಗೆ
ಶನಿವಾರ ನಡೆದ ಮತ್ತೊಂದು ಕ್ವಾರ್ಟ‌ರ್‌ನಲ್ಲಿ ಪಂಜಾಬ್ ವಿರುದ್ಧ ಮಹಾರಾಷ್ಟ್ರ 70 ರನ್ ಗೆಲುವು ಸಾಧಿಸಿ, ಸೆಮಿಫೈನಲ್‌ಗೇರಿತು. ಪಂಜಾಬ್ 6 ವಿಕೆಟ್‌ಗೆ 275 ರನ್ ಗಳಿಸಿದರೆ, ಪಂಜಾಬ್ 44.4 ಓವರಲ್ಲಿ 205ಕ್ಕೆ ಆಲೌಟಾಯಿತು.

ಸ್ಕೋರ್: 
ಕರ್ನಾಟಕ 50 ಓವರಲ್ಲಿ 281/8 (ದೇವದತ್ 102, ಅನೀಶ್ 52, ಆತಿತ್ 3-41, ರಾಜ್ 3-47),
ಬರೋಡಾ 49.5 ಓವರಲ್ಲಿ 276/10 (ಶಾಶ್ವತ್ 104, ಆತಿತ್ 56, ಕೌಶಿಕ್ 2-39, ಪ್ರಸಿದ್ಧ 2-60, ಅಭಿಲಾಶ್ 2-70) 

ಪಂದ್ಯಶ್ರೇಷ್ಠ: ದೇವದತ್‌ ಪಡಿಕ್ಕಲ್
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ