ವಿಜಯ್‌ ಹಜಾರೆ ಟ್ರೋಫಿ: ಪಡಿಕ್ಕಲ್‌-ಸಮರ್ಥ್‌ ಕೆಚ್ಚೆದೆಯ ಶತಕ, ಕೇರಳಕ್ಕೆ ಕಠಿಣ ಗುರಿ

Suvarna News   | Asianet News
Published : Mar 08, 2021, 01:19 PM IST
ವಿಜಯ್‌ ಹಜಾರೆ ಟ್ರೋಫಿ: ಪಡಿಕ್ಕಲ್‌-ಸಮರ್ಥ್‌ ಕೆಚ್ಚೆದೆಯ ಶತಕ, ಕೇರಳಕ್ಕೆ ಕಠಿಣ ಗುರಿ

ಸಾರಾಂಶ

ದೇವದತ್‌ ಪಡಿಕ್ಕಲ್‌ ಹಾಗೂ ಸಮರ್ಥ್ ಬಾರಿಸಿದ ಆಕರ್ಷಕ ಶತಕದ ನೆರವಿನಿಂದ ವಿಜಯ್ ಹಜಾರೆ ಟೂರ್ನಿಯ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಕರ್ನಾಟಕ 338 ರನ್‌ ಕಲೆಹಾಕಿದ್ದು, ಕೇರಳ ತಂಡಕ್ಕೆ ಕಠಿಣ ಗುರಿ ನೀಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ 

ಡೆಲ್ಲಿ(ಮಾ.08): ಆರಂಭಿಕ ಬ್ಯಾಟ್ಸ್‌ಮನ್‌ ದೇವದತ್ ಪಡಿಕ್ಕಲ್ ಬಾರಿಸಿದ ಸತತ 4ನೇ ಶತಕ ಹಾಗೂ ನಾಯಕ ರವಿಕುಮಾರ್ ಸಮರ್ಥ್‌ ಬಾರಿಸಿದ ವಿಜಯ್ ಹಜಾರೆ ಟೂರ್ನಿಯ ಮೂರನೇ ಶತಕದ ನೆರವಿನಿಂದ ಕ್ವಾರ್ಟರ್‌ ಫೈನಲ್‌ನಲ್ಲಿ ಕೇರಳ ವಿರುದ್ದ ಕರ್ನಾಟಕ ಕೇವಲ 3 ವಿಕೆಟ್ ಕಳೆದುಕೊಂಡು 338 ರನ್‌ ಕಲೆಹಾಕಿದ್ದು, ಕೇರಳಕ್ಕೆ ಕಠಿಣ ಗುರಿ ನೀಡಿದೆ.

ಹೌದು, ಟಾಸ್ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಕರ್ನಾಟಕ ತಂಡ ದಿಟ್ಟ ಆರಂಭವನ್ನೇ ಪಡೆಯಿತು. ಬ್ಯಾಟಿಂಗ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಕರ್ನಾಟಕ ಆರಂಭಿಕ ಜೋಡಿ ಪಡಿಕ್ಕಲ್‌ ಹಾಗೂ ಸಮರ್ಥ್‌ ಮತ್ತೊಂದು ಅದ್ಭುತ ಜತೆಯಾಟ ನಿಭಾಯಿಸಿದರು. ಲಿಸ್ಟ್‌ 'ಎ' ಕ್ರಿಕೆಟ್‌ನಲ್ಲಿ ಸತತ 4 ಶತಕ ಬಾರಿಸಿದ ಭಾರತದ ಮೊದಲ ಹಾಗೂ ಒಟ್ಟಾರೆ ನಾಲ್ಕನೇ ಬ್ಯಾಟ್ಸ್‌ಮನ್ ಎನ್ನುವ ಕೀರ್ತಿಗೆ ಪಡಿಕ್ಕಲ್‌ ಭಾಜನರಾಗಿದ್ದಾರೆ. ಈ ಮೊದಲು ಕುಮಾರ ಸಂಗಕ್ಕರ, ಅಲ್ವಿರೋ ಪೀಟರ್‌ಸನ್‌, ಕುರ್ರಮ್ ಮಂಜೂರ್‌ ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ ಸತತ 4 ಶತಕ ಬಾರಿಸಿದ್ದರು. ಪ್ರಸಕ್ತ ಆವೃತ್ತಿಯ ವಿಜಯ್‌ ಹಜಾರೆ ಟೂರ್ನಿಯಲ್ಲಿ ಪಡಿಕ್ಕಲ್‌ ಕ್ರಮವಾಗಿ 52, 97, 152, 126*, 145* ಹಾಗೂ 101 ರನ್‌ ಬಾರಿಸಿ ಅಬ್ಬರಿಸಿದ್ದಾರೆ. 

ವಿಜಯ್‌ ಹಜಾರೆ ಟ್ರೋಫಿ: ಕರ್ನಾಟಕ ಎದುರು ಟಾಸ್ ಗೆದ್ದ ಕೇರಳ ಬೌಲಿಂಗ್‌ ಆಯ್ಕೆ

ದೇವದತ್ ಪಡಿಕ್ಕಲ್‌ ಹಾಗೂ ಆರ್‌. ಸಮರ್ಥ್ ಕೇರಳ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ್ದಾರೆ. ಮೊದಲ ವಿಕೆಟ್‌ಗೆ ಈ ಜೋಡಿ 42.4 ಓವರ್‌ಗಳಲ್ಲಿ 249 ರನ್‌ಗಳ ಜತೆಯಾಟ ನಿಭಾಯಿಸಿತು. ಪಡಿಕ್ಕಲ್‌ 119 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 101 ರನ್ ಬಾರಿಸಿ ಬಾಸಿಲ್‌ಗೆ ವಿಕೆಟ್‌ ಒಪ್ಪಿಸಿದರು.

ಇನ್ನು ನಾಯಕ ರವಿಕುಮಾರ್ ಕೇವಲ 8 ರನ್‌ ಅಂತರದಲ್ಲಿ ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ದ್ವಿಶತಕ ಬಾರಿಸುವ ಅವಕಾಶವನ್ನು ಕೈಚೆಲ್ಲಿದರು. 158 ಎಸೆತಗಳನ್ನು ಎದುರಿಸಿದ ಸಮರ್ಥ್‌ 22 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 192 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು. ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ ಮನೀಶ್ ಪಾಂಡೆ ಕೇವಲ 20 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್‌ ನೆರವಿನಿಂದ ಅಜೇಯ 34 ರನ್‌ಗಳಿಸಿದರು.


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?