
ದೆಹಲಿ(ಮಾ.08): ಹಾಲಿ ಚಾಂಪಿಯನ್ ಕರ್ನಾಟಕ ವಿಜಯ್ ಹಜಾರೆ ಏಕದಿನ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ನಲ್ಲಿ ಸೋಮವಾರ ಕೇರಳ ವಿರುದ್ಧ ಸೆಣಸಲಿದೆ. ಗುಂಪು ಹಂತದ ಮೊದಲ ಪಂದ್ಯದಲ್ಲಿ ಸೋತಿದ್ದ ರಾಜ್ಯ ತಂಡ, ಆ ನಂತರ 4 ಪಂದ್ಯಗಳಲ್ಲಿ ಜಯಭೇರಿ ಬಾರಿಸಿ ‘ಸಿ’ ಗುಂಪಿನಲ್ಲಿ ಅಗ್ರಸ್ಥಾನ ಪಡೆದಿತ್ತು. ಗುಂಪು ಹಂತದಲ್ಲಿ ಕೇರಳ ವಿರುದ್ಧವೂ ಕರ್ನಾಟಕ ಭರ್ಜರಿ ಗೆಲುವು ಪಡೆದಿತ್ತು.
ದೇವದತ್ ಪಡಿಕ್ಕಲ್ (572 ರನ್), ನಾಯಕ ಆರ್.ಸಮರ್ಥ್ (413) ಹಾಗೂ ಕೆ.ವಿ.ಸಿದ್ಧಾಥ್ (241) ಅಬ್ಬರಿಸಿದ್ದು, ಮಧ್ಯಮ ಕ್ರಮಾಂಕಕ್ಕೆ ಹೆಚ್ಚು ಅವಕಾಶವೇ ಸಿಕ್ಕಿಲ್ಲ. ಗುಂಪು ಹಂತದ 5 ಪಂದ್ಯಗಳಲ್ಲಿ ರಾಜ್ಯ ಗಳಿಸಿದ ಒಟ್ಟು 1453 ರನ್ ಪೈಕಿ ಈ ಮೂವರೇ 1226 ರನ್ ಕಲೆಹಾಕಿದ್ದಾರೆ. ಕರ್ನಾಟಕ ತಂಡಕ್ಕೆ ಮನೀಶ್ ಪಾಂಡೆ ಹಾಗೂ ಕೆ.ಗೌತಮ್ ಸೇರ್ಪಡೆಗೊಂಡಿದ್ದು ತಂಡದ ಬ್ಯಾಟಿಂಗ್ ಬಲ ಹೆಚ್ಚಿಸಲಿದ್ದಾರೆ.
ವಿಜಯ್ ಹಜಾರೆ ಟೂರ್ನಿ: ಕ್ವಾರ್ಟರ್ನಲ್ಲಿ ಕರ್ನಾಟಕ-ಕೇರಳ ಕಾದಾಟ
ಹಿಂದಿನ ಪಂದ್ಯದಲ್ಲಿ ಗಾಯಗೊಂಡಿದ್ದ ಅಭಿಮನ್ಯು ಮಿಥುನ್ ಆಡಿಸುವ ಬಗ್ಗೆ ಟಾಸ್ಗೂ ಮುನ್ನ ನಿರ್ಧರಿಸುವುದಾಗಿ ತಂಡದ ಆಡಳಿತ ತಿಳಿಸಿದೆ. ಕೇರಳ ತನ್ನ ತಾರಾ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅನುಪಸ್ಥಿತಿಯಲ್ಲಿ ಆಡಲಿದೆ. ರಾಬಿನ್ ಉತ್ತಪ್ಪ ಮೇಲೆ ಹೆಚ್ಚು ನಿರೀಕ್ಷೆ ಇದೆ.
ಪಂದ್ಯ ಆರಂಭ: ಬೆಳಗ್ಗೆ 9ಕ್ಕೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.