ವಿಜಯ್‌ ಹಜಾರೆ ಟ್ರೋಫಿ: ಕರ್ನಾಟಕ ಎದುರು ಟಾಸ್ ಗೆದ್ದ ಕೇರಳ ಬೌಲಿಂಗ್‌ ಆಯ್ಕೆ

Suvarna News   | Asianet News
Published : Mar 08, 2021, 09:33 AM IST
ವಿಜಯ್‌ ಹಜಾರೆ ಟ್ರೋಫಿ: ಕರ್ನಾಟಕ ಎದುರು ಟಾಸ್ ಗೆದ್ದ ಕೇರಳ ಬೌಲಿಂಗ್‌ ಆಯ್ಕೆ

ಸಾರಾಂಶ

ವಿಜಯ್ ಹಜಾರೆ ಟೂರ್ನಿಯ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ಎದುರು ಟಾಸ್ ಗೆದ್ದ ಕೇರಳ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಡೆಲ್ಲಿ(ಮಾ.08): ವಿಜಯ್‌ ಹಜಾರೆ ಟೂರ್ನಿಯ ಕ್ವಾರ್ಟರ್‌ ಫೈನಲ್ ಪಂದ್ಯದಲ್ಲಿ ಕರ್ನಾಟಕ ಎದುರು ಟಾಸ್ ಗೆದ್ದ ಕೇರಳ ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಇದೀಗ ಕರ್ನಾಟಕ ಮೊದಲ ಬ್ಯಾಟಿಂಗ್‌ ಮಾಡಲು ಕಣಕ್ಕಿಳಿಯಲಿದೆ.

ಇಲ್ಲಿನ ಪಾಲಮ್‌ ಎ ಸ್ಟೇಡಿಯಂನಲ್ಲಿ ಆರಂಭಗೊಂಡ ಎರಡನೇ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಭಾರತದ ಎರಡು ಬಲಿಷ್ಠ ತಂಡಗಳು ಅಂತಿಮ ನಾಲ್ಕರ ಘಟ್ಟಕ್ಕಾಗಿ ಸೆಣಸಾಡಲಿವೆ. ಕರ್ನಾಟಕ ತಂಡಕ್ಕೆ ಸ್ಟಾರ್ ಆಟಗಾರ ಮನೀಶ್‌ ಪಾಂಡೆ ಹಾಗೂ ಕೃಷ್ಣಪ್ಪ ಗೌತಮ್‌ ತಂಡ ಕೂಡಿಕೊಂಡಿರುವುದು ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಭರ್ಜರಿ ಫಾರ್ಮ್‌ನಲ್ಲಿರುವ ದೇವದತ್ ಪಡಿಕ್ಕಲ್‌, ರವಿಕುಮಾರ್ ಸಮರ್ಥ್ ಹಾಗೂ ಸಿದ್ಧಾರ್ಥ್ ಮೇಲೆ ತಂಡ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟಿದೆ.

ವಿಜಯ್‌ ಹಜಾರೆ ಏಕದಿನ ಟೂರ್ನಿ ಕರ್ನಾಟಕ-ಕೇರಳ ಕ್ವಾರ್ಟರ್‌ ಫೈಟ್‌

ಇನ್ನು ಕೇರಳ ತನ್ನ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿದ್ದು, ಅನುಭವಿ ಆಟಗಾರ ರಾಬಿನ್ ಉತ್ತಪ್ಪ, ಯುವ ಪ್ರತಿಭೆಗಳಾದ ಮೊಹಮ್ಮದ್ ಅಜರುದ್ದೀನ್‌, ವಿಷ್ಣು ವಿನೋದ್‌ರನ್ನು ನೆಚ್ಚಿಕೊಂಡಿದೆ 

ತಂಡಗಳು ಹೀಗಿವೆ

ಕರ್ನಾಟಕ:

ಕೇರಳ:

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!