
ಸಿಡ್ನಿ(ನ.23): ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಟೆಸ್ಟ್ ಪಂದ್ಯದ ಬಳಿಕ ತವರಿಗೆ ಮರಳುತ್ತಿರುವುದು ಒಳ್ಳೆಯ ನಿರ್ಧಾರ ಎಂದು ಭಾರತ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
ಡಿಸೆಂಬರ್ 17ರಿಂದ ಆರಂಭವಾಗಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಅಡಿಲೇಡ್ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ. ಆ ಬಳಿಕ ತವರಿಗೆ ವಾಪಾಸಾಗಲಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಇನ್ನುಳಿದ 3 ಟೆಸ್ಟ್ ಪಂದ್ಯಗಳಿಂದ ವಂಚಿತರಾಗಲಿದ್ದಾರೆ. ಬಿಸಿಸಿಐ ನಾಯಕ ವಿರಾಟ್ ಕೊಹ್ಲಿಗೆ ಪಿತೃತ್ವದ ರಜೆ ನೀಡಿದೆ.
ವಿರಾಟ್ ಕೊಹ್ಲಿ ಸರಿಯಾದ ನಿರ್ಧಾರವನ್ನೇ ತಗೆದುಕೊಂಡಿದ್ದಾರೆ ಎಂದು ನನಗನಿಸುತ್ತಿದೆ. ಅಂತಹ ಕ್ಷಣಗಳು ಜೀವನದಲ್ಲಿ ಮತ್ತೆ ಮತ್ತೆ ಬರುವುದಿಲ್ಲ. ಇದೊಂದು ಒಳ್ಳೆಯ ಅವಕಾಶ. ವಿರಾಟ್ಗೆ ತಾವು ತೆಗೆದುಕೊಂಡ ತೀರ್ಮಾನದಿಂದ ಅವರಿಗೆ ಖುಷಿಯಾಗಿರಬಹುದು ಎಂದು ಎಬಿಸಿ ಸ್ಪೋರ್ಟ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ ಎಂದು ಇಎಸ್ಪಿಎನ್ ಕ್ರಿಕ್ಇನ್ಫೋ ವರದಿ ಮಾಡಿದೆ.
ರೋಹಿತ್-ಇಶಾಂತ್ ಆಸೀಸ್ ಪ್ರವಾಸ ಯಾವಾಗ? ಕೋಚ್ ರವಿಶಾಸ್ತ್ರಿ ಕೊಟ್ರು ಸುಳಿವು
ಭಾರತ-ಆಸ್ಟ್ರೇಲಿಯಾ ನಡುವಿನ ಸೀಮಿತ ಓವರ್ಗಳ ಸರಣಿ ನವೆಂಬರ್ 27ರಿಂದ ಆರಂಭವಾಗಲಿದೆ. ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಆ ಬಳಿಕ 3 ಪಂದ್ಯಗಳ ಟಿ20 ಸರಣಿ ಜರುಗಲಿದೆ. ಕೊನೆಯಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.