
ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿರಾಟ್ ಕೊಹ್ಲಿ 9 ಇನ್ನಿಂಗ್ಸ್ಗಳಲ್ಲಿ 8ನೇ ಬಾರಿಗೆ ಆಫ್ ಸ್ಟಂಪ್ನಿಂದ ಹೊರ ಹೋಗುತ್ತಿದ್ದ ಚೆಂಡನ್ನು ಕೆಣಕಿ ವಿಕೆಟ್ ಕಳೆದುಕೊಂಡಿದ್ದಾರೆ. ಶನಿವಾರ 5ನೇ ಟೆಸ್ಟ್ನ 2ನೇ ಇನ್ನಿಂಗ್ಸ್ನಲ್ಲಿ ಕೊಹ್ಲಿ, ಬೋಲೆಂಡ್ರ ಎಸೆತದಲ್ಲಿ ಸ್ಲಿಪ್ನಲ್ಲಿದ್ದ ಫೀಲ್ಡರ್ಗೆ ಕ್ಯಾಚ್ ನೀಡಿದರು. ತಮ್ಮ ಶಾಟ್ ಆಯ್ಕೆ ಬಗ್ಗೆ ಸಿಟ್ಟು ವ್ಯಕ್ತಪಡಿಸಿದ ಕೊಹ್ಲಿ ಚೀರುತ್ತ, ಬ್ಯಾಟ್ನಿಂದ ತಮ್ಮ ಕಾಲಿಗೆ ಹೊಡೆದುಕೊಂಡು ಹೊರನಡೆದರು.
ಕೊಹ್ಲಿ ಪದೇ ಪದೇ ಇದೇ ತಪ್ಪು ಮಾಡುತ್ತಿರುವುದಕ್ಕೆ ಮಾಜಿ ಕ್ರಿಕೆಟಿಗರು, ಸಾಮಾಜಿಕ ತಾಣಗಳಲ್ಲಿ ಅಭಿಮಾನಿಗಳಿಂದ ಭಾರೀ ಟೀಕೆ ವ್ಯಕ್ತವಾಗಿದೆ.
ಕೊಹ್ಲಿಯನ್ನು ಔಟ್ ಮಾಡಲು ಸರಳ ಯೋಜನೆ: ಬೋಲೆಂಡ್!
ವಿರಾಟ್ ಕೊಹ್ಲಿಯನ್ನು ಔಟ್ ಮಾಡಲು ನಾವು ಸರಳ ಯೋಜನೆ ರೂಪಿಸಿದ್ದು, ಅದು ಪ್ರತಿ ಬಾರಿಯೂ ಕೈಹಿಡಿಯುತ್ತಿದೆ ಎಂದು ಆಸ್ಟ್ರೇಲಿಯಾದ ವೇಗಿ ಸ್ಕಾಟ್ ಬೋಲೆಂಡ್ ಹೇಳಿದ್ದಾರೆ. ಅವರ ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ದಿಗ್ಗಜ ಆಟಗಾರನ ವಿರುದ್ಧ ರೂಪಿಸಿರುವ ರಣತಂತ್ರವನ್ನು ಬಹಿರಂಗಪಡಿಸುವ ಧೈರ್ಯವನ್ನು ಮೆಚ್ಚಬೇಕು ಎಂದು ಹಲವರು ಅಭಿಪ್ರಾಯಿಸಿದ್ದಾರೆ.
ದಶಕದ ಬಳಿಕ ಬಾರ್ಡರ್-ಗವಾಸ್ಕರ್ ಸರಣಿ ಸೋತ ಭಾರತ: WTC ಫೈನಲ್ನಿಂದಲೂ ಔಟ್
‘ಕೊಹ್ಲಿ ತಮ್ಮ ಇನ್ನಿಂಗ್ಸ್ನ ಆರಂಭದಲ್ಲಿ ಆಫ್ ಸ್ಟಂಪ್ನಿಂದ ಹೊರ ಹೋಗುವ ಚೆಂಡನ್ನು ಆಡುವುದಿಲ್ಲ. ಆದರೆ ಕ್ರೀಸ್ನಲ್ಲಿ ಕೆಲ ಸಮಯ ಕಳೆದ ಬಳಿಕ, ಅವರು ಆಫ್ ಸ್ಟಂಪ್ನಿಂದ ಆಚೆ ಬೀಳುವ ಎಸೆತಗಳನ್ನು ಹೊಡೆಯಲು ಯತ್ನಿಸುತ್ತಾರೆ. ನಾವು ಅದರ ಲಾಭ ಪಡೆಯುತ್ತಿದ್ದೇವೆ’ ಎಂದು ಬೋಲೆಂಡ್ ಹೇಳಿದ್ದಾರೆ.
ಇಂಗ್ಲೆಂಡ್ ಏಕದಿನಕ್ಕೆ ಕೊಹ್ಲಿ ರೋಹಿತ್, ಬೂಮ್ರಾ ಗೈರು?
ನವದೆಹಲಿ: ಮುಂಬರುವ ಫೆಬ್ರವರಿ 6ರಿಂದ ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಿಂದ ಭಾರತದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಹಾಗೂ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ರೋಹಿತ್ ಶರ್ಮಾ ತಲೆದಂಡವಾದ್ರೆ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಈತನೇ ಟೀಂ ಇಂಡಿಯಾ ಕ್ಯಾಪ್ಟನ್!
ಸದ್ಯ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಜ.7ರಂದು ಕೊನೆಗೊಳ್ಳಲಿದೆ. ಬಳಿಕ ಫೆ.19ರಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭಗೊಳ್ಳಲಿದೆ. ಆದರೆ ಕಾರ್ಯದೊತ್ತಡ ತಗ್ಗಿಸಿ, ಚಾಂಪಿಯನ್ಸ್ ಟ್ರೋಫಿಗೆ ಸಿದ್ಧಗೊಳಿಸುವ ನಿಟ್ಟಿನಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸುತ್ತಿದೆ ಎಂದು ಗೊತ್ತಾಗಿದೆ.
ಚಾಂಪಿಯನ್ಸ್ ಟ್ರೋಫಿ ಬಳಿಕ ಐಪಿಎಲ್ ಆರಂಭಗೊಳ್ಳಲಿರುವ ಕಾರಣ ಆಟಗಾರರಿಗೆ ವಿಶ್ರಾಂತಿ ಸಿಗುವುದಿಲ್ಲ. ಹೀಗಾಗಿ ಇಂಗ್ಲೆಂಡ್ ಸರಣಿಯಲ್ಲಿ ಅವರನ್ನು ಆಡಿಸದೆ, ಯುವ ಕ್ರಿಕೆಟಿಗರಿಗೆ ಮಣೆ ಹಾಕುವ ಸಾಧ್ಯತೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.