
ಬೆಂಗಳೂರು: ಟೀಂ ಇಂಡಿಯಾ ಮಾಜಿ ನಾಯಕ, ರನ್ ಮಷೀನ್ ವಿರಾಟ್ ಕೊಹ್ಲಿ ಇಂದು ದಿಗ್ಗಜ ಕ್ರಿಕೆಟಿಗನಾಗಿ ಬೆಳೆದು ನಿಂತಿದ್ದಾರೆ. ಅಂಡರ್-19 ವಿಶ್ವಕಪ್ ಗೆದ್ದು ಆ ಬಳಿಕ ಟೀಂ ಇಂಡಿಯಾಗೆ ಎಂಟ್ರಿಕೊಟ್ಟಿದ್ದ ವಿರಾಟ್ ಕೊಹ್ಲಿಗೆ ಆಗಿನ ದಿಗ್ಗಜ ಕ್ರಿಕೆಟಿಗರು ಬ್ರೈನ್ವಾಷ್ ಮಾಡುವ ಮೂಲಕ ಪ್ರಾಂಕ್ ಮಾಡಿ ಮಜಾ ತೆಗೆದುಕೊಂಡಿದ್ದರು ಎನ್ನುವ ವಿಚಾರವನ್ನು ಸ್ವತಃ ವಿರಾಟ್ ಕೊಹ್ಲಿ, ಸಂದರ್ಶನವೊಂದರಲ್ಲಿ ಇಂಟ್ರೆಸ್ಟಿಂಗ್ ಸಂಗತಿ ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ 2008ರ ಆಗಸ್ಟ್ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಆಗ ಭಾರತ ಕ್ರಿಕೆಟ್ ತಂಡದಲ್ಲಿ ಯುವರಾಜ್ ಸಿಂಗ್, ಹರ್ಭಜನ್ ಸಿಂಗ್, ಮುನಾಫ್ ಪಟೇಲ್, ಇರ್ಫಾನ್ ಪಠಾಣ್, ವಿರೇಂದ್ರ ಸೆಹ್ವಾಗ್, ಸಚಿನ್ ತೆಂಡೂಲ್ಕರ್ ಅವರಂತಹ ದಿಗ್ಗಜ ಆಟಗಾರರಿದ್ದರು. ಟೀಂ ಇಂಡಿಯಾಗೆ ಕೊಹ್ಲಿ ಎಂಟ್ರಿಕೊಟ್ಟಾಗ ಕೊಂಚ ನರ್ವಸ್ ಆಗಿದ್ದರಂತೆ. ಇದನ್ನೇ ಬಂಡವಾಳ ಮಾಡಿಕೊಂಡ ಯುವರಾಜ್ ಸಿಂಗ್, ಮುನಾಫ್ ಪಟೇಲ್, ಇರ್ಫಾನ್ ಪಠಾಣ್, ಕೊಹ್ಲಿಯನ್ನು ಫ್ರಾಂಕ್ ಮಾಡಿದ್ದರಂತೆ.
ವಿರಾಟ್ ಕೊಹ್ಲಿ, ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್ ಸೇರಿಕೊಂಡಾಗ ಯುವಿ ಹಾಗೂ ಇರ್ಫಾನ್ ಸೇರಿಕೊಂಡು, ಭಾರತ ತಂಡದ ಡ್ರೆಸ್ಸಿಂಗ್ ರೂಮ್ಗೆ ಯಾರೇ ಎಂಟ್ರಿಕೊಟ್ಟರೂ, ಮೊದಲಿಗೆ ಸಚಿನ್ ತೆಂಡೂಲ್ಕರ್ ಕಾಲಿಗೆ ಬೀಳಬೇಕು. ಅದು ಇಲ್ಲಿಯವರೆಗೂ ನಡೆದುಕೊಂಡು ಬಂದ ಸಂಪ್ರದಾಯ. ಒಂದು ವೇಳೆ ನೀನು ಹಾಗೆ ಮಾಡದೇ ಹೋದರೇ ನಿಮ್ಮ ಕ್ರಿಕೆಟ್ ವೃತ್ತಿಬದುಕು ತೊಂದರೆಗೆ ಸಿಲುಕಬಹುದು ಎಂದು ಬ್ರೈನ್ವಾಷ್ ಮಾಡಿದ್ದರು ಎಂದು ಆ ದಿನಗಳನ್ನು ಕೊಹ್ಲಿ ಮೆಲುಕು ಹಾಕಿದ್ದಾರೆ.
🚨 Virat Kohli: "Yuvraj Singh, Irfan & Munaf completely brainwashed me."🚨
Host: "What did Yuvraj and Irfan do to you in the dressing room?"
Virat Kohli: They told me that if I didn't, my career could be in trouble. They warned me something really bad would happen if I refused.… pic.twitter.com/mVcWVp1zqq— Mahi Patel (@Mahi_Patel_07) August 17, 2026
ಇನ್ನು ಸಚಿನ್ ತೆಂಡೂಲ್ಕರ್ ಅವರನ್ನು ಡ್ರೆಸ್ಸಿಂಗ್ ರೂಮ್ನಲ್ಲಿ ಮೊದಲ ಸಲ ನೋಡುತ್ತಿದ್ದಂತೆಯೇ ವಿರಾಟ್ ಕೊಹ್ಲಿ, ನೇರವಾಗಿ ಹೋಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆಯಲು ಮುಂದಾದರಂತೆ. ಆಗ ಸಚಿನ್, ಕೊಹ್ಲಿಯನ್ನು ತಡೆದು ಹೀಗ್ಯಾಕೆ ಮಾಡುತ್ತೀರಾ? ಇದು ಅವರು ಮಾಡುತ್ತಿರುವ ತಮಾಷೆ ಎಂದು ಹೇಳಿದಾಗಲೇ ಇದೊಂದು ಫ್ರಾಂಕ್ ಎಂದು ಕೊಹ್ಲಿಗೆ ಅರ್ಥವಾಯಿತಂತೆ. ಈ ಫ್ರಾಂಕ್ ಹಿಂದಿನ ನಿಜವಾದ ಮಾಸ್ಟರ್ ಮೈಂಡ್ ಮುನಾಫ್ ಪಟೇಲ್ ಆಗಿದ್ರು ಎಂದು ಕೊಹ್ಲಿ ಹೇಳಿದ್ದಾರೆ.
ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಇಂದಿಗೆ 18 ವರ್ಷಗಳಾಗಿವೆ. ಕೊಹ್ಲಿ ಆಗಸ್ಟ್ 18, 2008ರಲ್ಲಿ ಶ್ರೀಲಂಕಾ ವಿರುದ್ದ ದಂಬುಲ್ಲಾದಲ್ಲಿ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಸದ್ಯ ವಿರಾಟ್ ಕೊಹ್ಲಿ ಟೆಸ್ಟ್ ಹಾಗೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದು, ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಮುಂದುವರೆಯುತ್ತಿದ್ದಾರೆ. ಕೊಹ್ಲಿ ಇದೀಗ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೇಲೆ ಕಣ್ಣಿಟ್ಟಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.