ಆಸೀಸ್ ಎದುರಿನ ಕೊನೆಯ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬೆಂಕಿ-ಬಿರುಗಾಳಿ ಎಂಟ್ರಿ..!

Published : Sep 26, 2023, 04:01 PM IST
ಆಸೀಸ್ ಎದುರಿನ ಕೊನೆಯ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬೆಂಕಿ-ಬಿರುಗಾಳಿ ಎಂಟ್ರಿ..!

ಸಾರಾಂಶ

ಆಸ್ಟ್ರೇಲಿಯಾ ಎದುರಿನ ಮೂರನೇ ಏಕದಿನ ಪಂದ್ಯದಿಂದ ಶಾರ್ದೂಲ್ ಠಾಕೂರ್ ಹಾಗೂ ಶುಭ್‌ಮನ್ ಗಿಲ್‌ಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ರೋಹಿತ್ ಶರ್ಮಾ ಜತೆ ಇಶಾನ್ ಕಿಶನ್ ಇನಿಂಗ್ಸ್‌ ಆರಂಭಿಸುವುದು ಬಹುತೇಕ ಖಚಿತ ಎನಿಸಿದೆ. ಇನ್ನು ಬುಮ್ರಾ-ಸಿರಾಜ್ ಹಾಗೂ ಶಮಿ ತ್ರಿವಳಿ ವೇಗಿಗಳಾಗಿ ಕಣಕ್ಕಿಳಿದರೂ ಅಚ್ಚರಿಯಿಲ್ಲ.  

ರಾಜ್‌ಕೋಟ್(ಸೆ.26): ಭಾರತ ಕ್ರಿಕೆಟ್ ತಂಡವು ಮುಂಬರುವ ಐಸಿಸಿ ಏಕದಿನ ವಿಶ್ವಕಪ್‌ನತ್ತ ಚಿತ್ತ ನೆಟ್ಟಿದೆ. ಹೀಗಿರುವಾಗಲೇ ವಿಶ್ವಕಪ್‌ಗೂ ಮುನ್ನ ಕೊನೆಯ ಅಂತಾಷ್ಟ್ರೀಯ ಪಂದ್ಯವನ್ನಾಡಲು ರೆಡಿಯಾಗಿದೆ. ಸೆಪ್ಟೆಂಬರ್ 27ರಂದು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ಭಾರತ ತಂಡದ ಪಾಲಿಗೆ ಈ ಪಂದ್ಯ ಔಪಚಾರಿಕ ಪಂದ್ಯವೆನಿಸಿದೆಯಾದರೂ, ಈ ಪಂದ್ಯಕ್ಕೆ ಟೀಂ ಇಂಡಿಯಾಗೆ ಬೆಂಕಿ ಬಿರುಗಾಳಿಯ ಎಂಟ್ರಿಯಾಗಿದೆ.

ಹೌದು, ಆಸ್ಟ್ರೇಲಿಯಾ ಎದುರಿನ ಮೊದಲೆರಡು ಪಂದ್ಯಗಳಿಗೆ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮಾ, ರನ್ ಮಷೀನ್ ವಿರಾಟ್ ಕೊಹ್ಲಿ ಹಾಗೂ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಂಡಿದ್ದಾರೆ. ಇದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಇನ್ನು ಇದೇ ವೇಳೆ ಕೊನೆಯ ಪಂದ್ಯವನ್ನು ಗೆದ್ದು ಅಪರೂಪದ ದಾಖಲೆ ಬರೆಯಲು ಟೀಂ ಇಂಡಿಯಾ ಎದುರು ನೋಡುತ್ತಿದೆ.

'ನಾವು ಭಾರತಕ್ಕೆ ಯುದ್ದ ಮಾಡಲು ಹೋಗುತ್ತಿಲ್ಲ' : ಇಂಡೋ-ಪಾಕ್ ವಿಶ್ವಕಪ್‌ ಬಗ್ಗೆ ತುಟಿಬಿಚ್ಚಿದ ಪಾಕ್ ವೇಗಿ ಹ್ಯಾರಿಸ್ ರೌಫ್

5 ಬಾರಿಯ ವಿಶ್ವಕಪ್ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ಎದುರು ಟೀಂ ಇಂಡಿಯಾ ಇದುವರೆಗೂ ಒಮ್ಮೆಯೂ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಸರಣಿ ಕ್ಲೀನ್‌ ಸ್ವೀಪ್ ಮಾಡಿಲ್ಲ. ಇನ್ನು ಆಸ್ಟ್ರೇಲಿಯಾಗೆ ಕೂಡಾ ತವರಿನಲ್ಲಾಗಲಿ ಅಥವಾ ತವರಿನಲ್ಲಾಚೆಯಾಗಲಿ ಭಾರತದ ಎದುರು ಏಕದಿನ ಸರಣಿಯನ್ನು ವೈಟ್‌ವಾಷ್‌ ಮಾಡಲು ಸಾಧ್ಯವಾಗಿಲ್ಲ. ಆದರೆ ಇದೀಗ ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎದುರು ಏಕದಿನ ಸರಣಿ ವೈಟ್‌ವಾಷ್ ಮಾಡುವ ಸುವರ್ಣಾವಕಾಶ ಬಂದೊದಿಗಿದೆ. ಹೀಗಾಗಬೇಕಿದ್ದರೇ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಕೊನೆಯ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. 

ಒಂದು ವೇಳೆ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಭಾರತ ತಂಡವು ಗೆಲುವು ಸಾಧಿಸಿದರೆ, ರೋಹಿತ್ ಶರ್ಮಾ ಪಡೆಯ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಲಿದೆ. ಯಾಕೆಂದರೆ ಅಕ್ಟೋಬರ್ 08ರಂದು ಭಾರತ ಕ್ರಿಕೆಟ್‌ ತಂಡವು ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲೇ ಮತ್ತೊಮ್ಮೆ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯವನ್ನು ವಹಿಸಲಿದೆ.

ಟೀಂ ಇಂಡಿಯಾಗೆ ಹೊಸ ಅಸ್ತ್ರ ಸೇರ್ಪಡೆ, ಉಳಿದ ತಂಡಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ: ಎಬಿ ಡಿ ವಿಲಿಯರ್ಸ್ ಅಚ್ಚರಿಯ ಮಾತು

ಆಸ್ಟ್ರೇಲಿಯಾ ಎದುರಿನ ಮೂರನೇ ಏಕದಿನ ಪಂದ್ಯದಿಂದ ಶಾರ್ದೂಲ್ ಠಾಕೂರ್ ಹಾಗೂ ಶುಭ್‌ಮನ್ ಗಿಲ್‌ಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ರೋಹಿತ್ ಶರ್ಮಾ ಜತೆ ಇಶಾನ್ ಕಿಶನ್ ಇನಿಂಗ್ಸ್‌ ಆರಂಭಿಸುವುದು ಬಹುತೇಕ ಖಚಿತ ಎನಿಸಿದೆ. ಇನ್ನು ಬುಮ್ರಾ-ಸಿರಾಜ್ ಹಾಗೂ ಶಮಿ ತ್ರಿವಳಿ ವೇಗಿಗಳಾಗಿ ಕಣಕ್ಕಿಳಿದರೂ ಅಚ್ಚರಿಯಿಲ್ಲ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!
ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ