ವಿರಾಟ್ ಅತ್ಯಾಪ್ತ ಗೆಳೆಯ ಅಕಾಲಿಕ ನಿಧನ; ಅಂಡರ್-19 ಸಹ ಆಟಗಾರನಿಗೆ ಸಂತಾಪ ಸೂಚಿಸಿದ ಕೊಹ್ಲಿ!

Published : May 07, 2026, 02:51 PM IST
Amanpreet Singh Gill and Virat Kohli

ಸಾರಾಂಶ

ರಾಟ್ ಕೊಹ್ಲಿ ಅವರ ಅಂಡರ್-19 ತಂಡದ ಸಹ ಆಟಗಾರ, ಪಂಜಾಬ್ ಮಾಜಿ ಕ್ರಿಕೆಟಿಗ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಇವರ ನಿಧನಕ್ಕೆ ವಿರಾಟ್ ಕೊಹ್ಲಿ ಮತ್ತು ಯುವರಾಜ್ ಸಿಂಗ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪಂಜಾಬ್‌ನ ಮಾಜಿ ಕ್ರಿಕೆಟಿಗ ಹಾಗೂ ವಿರಾಟ್ ಕೊಹ್ಲಿಯ ಅಂಡರ್-19 ತಂಡದ ಸಹ ಆಟಗಾರರಾಗಿದ್ದ ಅಮನ್‌ಪ್ರೀತ್ ಸಿಂಗ್ ಗಿಲ್ (36) ಬುಧವಾರ ನಿಧನರಾಗಿದ್ದಾರೆ. ಅವರ ಈ ಅಕಾಲಿಕ ಸಾವು ಇಡೀ ಕ್ರಿಕೆಟ್ ಜಗತ್ತನ್ನೇ ದುಃಖದಲ್ಲಿ ಮುಳುಗಿಸಿದೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪಂಜಾಬ್ ಪರ 6 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದ ಅಮನ್‌ಪ್ರೀತ್, 11 ವಿಕೆಟ್‌ಗಳನ್ನು ಪಡೆದಿದ್ದರು. ಐಪಿಎಲ್‌ನ ಮೊದಲ ಸೀಸನ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಭಾಗವಾಗಿದ್ದರು. ನಂತರ ಪಂಜಾಬ್‌ನ ಹಿರಿಯರ ಆಯ್ಕೆ ಸಮಿತಿಯಲ್ಲೂ ಅವರು ಸೇವೆ ಸಲ್ಲಿಸಿದ್ದರು.

ತನ್ನ ಸಹ ಆಟಗಾರನ ಸಾವಿಗೆ ವಿರಾಟ್ ಕೊಹ್ಲಿ ಎಕ್ಸ್ (ಹಿಂದಿನ ಟ್ವಿಟರ್) ಮೂಲಕ ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. 'ಅಮನ್‌ಪ್ರೀತ್ ಗಿಲ್ ಅವರ ಸಾವಿನ ಸುದ್ದಿ ಕೇಳಿ ಆಘಾತ ಮತ್ತು ದುಃಖವಾಯಿತು. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ದೇವರು ಶಕ್ತಿ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ,' ಎಂದು ಕೊಹ್ಲಿ ಬರೆದುಕೊಂಡಿದ್ದಾರೆ.

 

ಯುವರಾಜ್ ಸಿಂಗ್ ಮತ್ತು ಪಂಜಾಬ್ ಕಿಂಗ್ಸ್ ಸಂತಾಪ

ಭಾರತದ ದಿಗ್ಗಜ ಆಟಗಾರ ಯುವರಾಜ್ ಸಿಂಗ್ ಮತ್ತು ಪಂಜಾಬ್ ಕಿಂಗ್ಸ್ ತಂಡ ಕೂಡ ಅಮನ್‌ಪ್ರೀತ್‌ಗೆ ಶ್ರದ್ಧಾಂಜಲಿ ಸಲ್ಲಿಸಿವೆ. "ನಮ್ಮ ಆರಂಭದ ದಿನಗಳಲ್ಲಿ ನಾವು ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿದ್ದೆವು. ಆಟವನ್ನು ಪ್ರೀತಿಸುತ್ತಿದ್ದ ಆತ, ಶಾಂತ ಸ್ವಭಾವದ ಮತ್ತು ಕಠಿಣ ಪರಿಶ್ರಮದ ಕ್ರಿಕೆಟಿಗನಾಗಿದ್ದ," ಎಂದು ಯುವರಾಜ್ ನೆನಪಿಸಿಕೊಂಡಿದ್ದಾರೆ.

 

ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ಆಟಗಾರನ ಸಾವಿಗೆ ಪಂಜಾಬ್ ಕಿಂಗ್ಸ್ ತಂಡವು ತನ್ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸಂತಾಪ ಸೂಚಿಸಿದೆ.

ಕ್ರಿಕೆಟ್ ವೃತ್ತಿಜೀವನ

2007ರಲ್ಲಿ ಭಾರತದ ಪರ 5 ಯೂತ್ ಏಕದಿನ ಮತ್ತು ಒಂದು ಯೂತ್ ಟೆಸ್ಟ್ ಪಂದ್ಯದಲ್ಲಿ ಅಮನ್‌ಪ್ರೀತ್ ಆಡಿದ್ದರು. ತನ್ನ ಏಕೈಕ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾದ ಆಟಗಾರ ತಿಸಾರ ಪೆರೆರಾ ಅವರ ವಿಕೆಟ್ ಪಡೆದಿದ್ದರು. 2008ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದ ಅಂಡರ್-19 ತಂಡಕ್ಕೆ ಅವರು ಆಯ್ಕೆಯಾಗಿರಲಿಲ್ಲ. ಆದರೆ, ಆ ಬ್ಯಾಚ್‌ನ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Virat Kohli: ವಿರಾಟ್‌ ಕೊಹ್ಲಿಗೆ ಬೌಲಿಂಗ್‌ ಮಾಡಿದ ಉತ್ತರ ಕನ್ನಡದ ಸಿದ್ದಾಪುರ ಹುಡುಗ; ವಿಶೇಷ ವಿಷಯ ಬಿಚ್ಚಿಟ್ರು!
IPL 2026 Final: ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌! ಮೇ 31ರ ಫೈನಲ್‌ ಮ್ಯಾಚ್ ಎಲ್ಲಿ?