ಕೇವಲ 60 ನಿಮಿಷದಲ್ಲಿ ರಾಜ್ಯದ ಕ್ರಿಕೆಟಿಗ ಕೆ ಸಿ ಕಾರಿಯಪ್ಪಗೆ ವೀಸಾ ಮಂಜೂರು..!

Published : Apr 02, 2024, 05:17 PM ISTUpdated : Apr 02, 2024, 05:27 PM IST
ಕೇವಲ 60 ನಿಮಿಷದಲ್ಲಿ ರಾಜ್ಯದ ಕ್ರಿಕೆಟಿಗ ಕೆ ಸಿ ಕಾರಿಯಪ್ಪಗೆ ವೀಸಾ ಮಂಜೂರು..!

ಸಾರಾಂಶ

ಕಳೆದ ಡಿಸೆಂಬರ್ ತಿಂಗಳ ಕೊನೆಯಲ್ಲಿ ಯುವತಿಯಬ್ಬಳು ಕಾರಿಯಪ್ಪ ಮೇಲೆ, ಮದುವೆಯಾಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು, ಈಗ ಮೋಸ ಮಾಡಿದ್ದಾರೆ ಎಂದು ಬೆಂಗಳೂರಿನ ಆರ್‌ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಯುತ್ತಿತ್ತು. ಇದೆಲ್ಲದರ ನಡುವೆ ಕೆ ಸಿ ಕಾರಿಯಪ್ಪ ತಾವು ವಿದೇಶಿ ಪ್ರಯಾಣಕ್ಕೆ ಪೋಲಿಸರಿಂದ ಕ್ಲಿಯರೆನ್ಸ್ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು(ಏ.02): ಕರ್ನಾಟಕದ ಪ್ರತಿಭಾನ್ವಿತ ಕ್ರಿಕೆಟಿಗ ಕೆ ಸಿ ಕಾರಿಯಪ್ಪ ಅವರ ಮೇಲೆ ಯುವತಿಯೊಬ್ಬಳು ಪ್ರೀತಿಸಿ ವಂಚಿಸಿದ ಆರೋಪ ಮಾಡಿದ್ದರು. ಈ ಸಂಬಂಧ ಕೇಸ್ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಹೀಗಾಗಿ ಕೆ ಸಿ ಕಾರಿಯಪ್ಪಗೆ ವಿದೇಶಿ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿತ್ತು. ಈ ವಿಚಾರದಲ್ಲಿ ಕಾರಿಯಪ್ಪಗೆ ಕೊನೆಗೂ ರಿಲೀಫ್ ಸಿಕ್ಕಿದೆ.

ಹೌದು, ಕಳೆದ ಡಿಸೆಂಬರ್ ತಿಂಗಳ ಕೊನೆಯಲ್ಲಿ ಯುವತಿಯಬ್ಬಳು ಕಾರಿಯಪ್ಪ ಮೇಲೆ, ಮದುವೆಯಾಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು, ಈಗ ಮೋಸ ಮಾಡಿದ್ದಾರೆ ಎಂದು ಬೆಂಗಳೂರಿನ ಆರ್‌ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಯುತ್ತಿತ್ತು. ಇದೆಲ್ಲದರ ನಡುವೆ ಕೆ ಸಿ ಕಾರಿಯಪ್ಪ ತಾವು ವಿದೇಶಿ ಪ್ರಯಾಣಕ್ಕೆ ಪೋಲಿಸರಿಂದ ಕ್ಲಿಯರೆನ್ಸ್ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು.

ಪೊಲೀಸ್ ಠಾಣೆ ಮೆಟ್ಟಿಲೇರಿದ ಕ್ರಿಕೆಟಿಗ ಕೆ ಸಿ ಕಾರಿಯಪ್ಪ ಲವ್‌ಸ್ಟೋರಿ; ಮಾಜಿ ಪ್ರೇಯಸಿಯಿಂದ ಗಂಭೀರ ಆರೋಪ

ತಾವು ಕ್ರಿಕೆಟ್ ಆಡಲು ಇಂಗ್ಲೆಂಡ್‌ಗೆ ಪ್ರಯಾಣಿಸಬೇಕಿದೆ. ಆದರೆ ಪೊಲೀಸ್ ಕ್ಲಿಯರೆನ್ಸ್ ಸಿಗದೇ ತಮಗೆ ಅಡ್ಡಿಯಾಗುತ್ತಿದೆ ಎಂದು ಕಾರಿಯಪ್ಪ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆ ಕೈಗೆತ್ತಿಕೊಂಡಿತು. ವಿಚಾರಣೆ ನಡೆಸಿದ ಬಳಿಕ ಪೋಲಿಸ್ ಕ್ಲಿಯರೆನ್ಸ್ ನೀಡಿದ 60 ನಿಮಿಷಗಳಲ್ಲಿ ವೀಸಾ ಒದಗಿಸಲಾಗುವುದು ಎಂದು ಕೇಂದ್ರ ಸರ್ಕಾರದ ಪರ ಡಿಎಸ್‌ಜಿಐ ಎಚ್ ಶಾಂತಿಭೂಷಣ್ ಭರವಸೆ ನೀಡಿದ್ದರು. ಕೆ ಸಿ ಕಾರಿಯಪ್ಪ ಅವರ ಅರ್ಜಿ ಪ್ರಕರಣವನ್ನು ಇತ್ಯರ್ಥಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. 

ಪೋಲಿಸ್ ಕ್ಲಿಯರೆನ್ಸ್ ಸಿಕ್ಕಿದ 60 ನಿಮಿಷಗಳಲ್ಲೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಕಾರಿಯಪ್ಪಗೆ ವೀಸಾ ಒದಗಿಸಿಕೊಟ್ಟಿತು. ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿ ಹಾಗೂ ಡಿಎಸ್ ಜಿಐ ಕ್ರಮಕ್ಕೆ ಹೈಕೋರ್ಟ್ ಮೆಚ್ಚುಗೆ ಹೈಕೋರ್ಟ್ ಪೀಠ ಮೆಚ್ಚುಗೆ ವ್ಯಕ್ತಪಡಿಸಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Ind vs SA: ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್! ಗಿಲ್ ಔಟ್, ಯಾರಿಗೆ ಸಿಗತ್ತೆ ಚಾನ್ಸ್?
ಸಿಗಲ್ಲ ಅಂತ ಗೊತ್ತಿದ್ರೂ ಕ್ಯಾಮರೋನ್‌ ಗ್ರೀನ್‌ಗೆ ಮುಂಬೈ ಬಿಡ್‌ ಮಾಡಿದ್ದೇಕೆ? ಇಂಟ್ರೆಸ್ಟಿಂಗ್ ಮಾಹಿತಿ ಹಂಚಿಕೊಂಡ ಆಕಾಶ್ ಅಂಬಾನಿ!