
ಮುಂಬೈ(ಜ.25): ಆಸ್ಟ್ರೇಲಿಯಾ ವಿರುದ್ದ ಐತಿಹಾಸಿಕ ಗೆಲುವಿನ ಬಳಿಕ, ಸರಣಿಯ ಪ್ರಮುಖಾಂಶಗಳ ಬಗ್ಗೆ ಮಾತನಾಡಿರುವ ಭಾರತ ಟೆಸ್ಟ್ ತಂಡದ ಹಂಗಾಮಿ ನಾಯಕ ಅಜಿಂಕ್ಯ ರಹಾನೆ ರೋಚಕ ವಿಚಾರವೊಂದನ್ನು ಬಹಿರಂಗ ವಿಚಾರವೊಂದನ್ನು ಬಹಿರಂಗ ಪಡಿಸಿದ್ದಾರೆ.
ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 36 ರನ್ಗಳಿಗೆ ಆಲೌಟ್ ಆಗಿ ಭಾರೀ ಒತ್ತಡಕ್ಕೊಳಗಿದ್ದ ಬಳಿಕವೂ ಮೆಲ್ಬರ್ನ್ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಸಮಬಲ ಸಾಧಿಸಿತ್ತು. ಆ ಪಂದ್ಯದಲ್ಲಿ ನಾಯಕ ಅಜಿಂಕ್ಯ ರಹಾನೆ ಆಕರ್ಷಕ ಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಮುನ್ನ 1999ರಲ್ಲಿ ಸಚಿನ್ ತೆಂಡುಲ್ಕರ್ ನಾಯಕರಾಗಿದ್ದಾಗ ಮೆಲ್ಬರ್ನ್ನಲ್ಲಿ ಆಸೀಸ್ ವಿರುದ್ದ ಶತಕ ಬಾರಿಸಿದ್ದರು. ಆ ಶತಕದ ವಿಡಿಯೋವನ್ನು ಹಲವು ಬಾರಿ ವೀಕ್ಷಿಸಿ, ಹೇಗೆ ಆಡಬೇಕು ಎಂದು ತಿಳಿದುಕೊಂಡಿದ್ದೆ. ಪಂದ್ಯ ಆರಂಭಗೊಳ್ಳುವ ಹಿಂದಿನ ರಾತ್ರಿ 10 ಬಾರಿ, ಪಂದ್ಯದ ದಿನ ಬೆಳಗ್ಗೆ 6-7 ಬಾರಿ ವಿಡಿಯೋ ವೀಕ್ಷಿಸಿದ್ದೆ ಎಂದು ರಹಾನೆ ಹೇಳಿದ್ದಾರೆ.
ಇದೇ ಕಾರಣಕ್ಕೆ ರಹಾನೆ ಇಷ್ಟ; ಕಾಂಗರೂ ಕೇಕ್ ಕತ್ತರಿಸಲು ನಿರಾಕರಿಸಿದ ಅಜಿಂಕ್ಯ!
ವಿರಾಟ್ ಕೊಹ್ಲಿ, ವೇಗಿಗಳಾದ ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ ಅನುಪಸ್ಥಿತಿಯ ಹೊರತಾಗಿಯೂ ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಕೈವಶ ಮಾಡಿಕೊಂಡಿತ್ತು. ಇದರ ಜತೆಗೆ ಗಾಬಾ ಮೈದಾನದಲ್ಲಿ 32 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡಕ್ಕೆ ಟೀಂ ಇಂಡಿಯಾ ಸೋಲಿನ ಕಹಿಯುಣಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.