
ಕೋಲ್ಕತಾ(ಮಾ.31): ಟೀಂ ಇಂಡಿಯಾ ವೇಗಿ ಅಶೋಕ್ ದಿಂಡಾ ಕ್ರಿಕೆಟ್ ಕರಿಯರ್ ಹಲವು ಏಳು ಬೀಳುಗಳನ್ನು ಕಂಡಿದೆ. ದೇಶಿ ಕ್ರಿಕೆಟ್ನಲ್ಲಿ ಮಿಂಚಿದ ದಿಂಡಾ ಫೆಭ್ರವರಿ 2, 2021ರಲ್ಲಿ ವಿದಾಯ ಘೋಷಿಸಿದ್ದಾರೆ. ವಿದಾಯ ಹೇಳಿದ ಬೆನ್ನಲ್ಲೇ ದಿಂಡಾ, ಬಿಜೆಪಿ ಸೇರಿಕೊಂಡು ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಗೆ ಸ್ಪರ್ಧಿಸುತ್ತಿರುವ ದಿಂಡಾಗೆ ಇದೀಗ Y+ ಭದ್ರತೆ ನೀಡಲಾಗಿದೆ.
ಟೀಂ ಇಂಡಿಯಾ ವೇಗಿ ಅಶೋಕ್ ದಿಂಡಾ ಕ್ರಿಕೆಟ್ಗೆ ಗುಡ್ಬೈ
ಪಶ್ಚಿಮ ಬಂಗಾಳದ ಮೊಯ್ನಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಿಂಡಾ ಭರ್ಜರಿ ಪ್ರಚಾರ ನಡೆಸಿದ್ದಾರೆ. ಆದರೆ ಇದೇ ವೇಳೆ ದಿಂಡಾ ಮೇಲೆ ಮಾರಕ ದಾಳಿ ನಡೆಸಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪೂರ್ವ ಮಿಡ್ನಾಪೂರ್ನಲ್ಲಿ ದಿಂಡಾ ಮೇಲೆ 50ಕ್ಕೂ ಹೆಚ್ಚು ಮಂದಿ ದಾಳಿ ನಡೆಸಿದ್ದಾರೆ.
ಮಾರ್ಚ್ 30 ರಂದು ದಿಂಡಾ ಪ್ರಯಾಣಿಸುತ್ತಿದ್ದ ಕಾರಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಬಡಿಗೆ, ಕೋಲುಗಳಿಂದ ಕಾರಿನ ಮೇಲೆ ದಾಳಿ ಮಾಡಿದ ಪರಿಣಾಮ ದಿಂಡಾ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. ಇದು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ದಾಳಿ. ಮೊಯ್ನಾ ಕ್ಷೇತ್ರದಲ್ಲಿ ಟಿಎಂಸಿ ಸೋಲು ಖಚಿತವಾಗುತ್ತಿದ್ದಂತೆ ಇದೀಗ ಎದುರಾಳಿಗಳನ್ನೇ ಮುಗಿಸಲು ಟಿಎಂಸಿ ಯತ್ನಿಸುತ್ತಿದೆ ಎಂದು 37 ವರ್ಷದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಆರೋಪಿಸಿದ್ದಾರೆ.
ಮಾರಕ ದಾಳಿ ಬಳಿಕ ಅಶೋಕ್ ದಿಂಡಾಗೆ Y+ ಸೆಕ್ಯೂರಿಟಿ ನೀಡಲಾಗಿದೆ. CRPF ಭದ್ರತೆ ಜವಾಬ್ದಾರಿ ವಹಿಸಿದೆ. CRPF ಕಮಾಂಡರ್, ನಾಲ್ವರು ಪೊಲೀಸ್ ಪೇದೆ ಹಾಗೂ ಇಬ್ಬರು ಪರ್ಸನಲ್ ಸೆಕ್ಯೂರಿಟಿ ಆಫೀಸರ್ ನೇಮಕ ಮಾಡಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.