
ಚೆನ್ನೈ(ಡಿ.15): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಇಂದಿನಿಂದ(ಡಿ.15) ಆರಂಭಗೊಳ್ಳುತ್ತಿದೆ. ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದಿರುವ ಕೊಹ್ಲಿ ಸೈನ್ಯ ಇದೀಗ ಏಕಕದಿನ ಸರಣಿಯಲ್ಲಿ ಗೆಲುವಿಗೆ ಹೊಂಚು ಹಾಕಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ಬ್ಯಾಟಿಂಗ್ ಮಾಡುವುದು ನಮ್ಮ ನಿರ್ಧಾರವಾಗಿತ್ತು. ವಿಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿದಾಗ ನಮ್ಮ ಪ್ಲಾನ್ ಪ್ರಕಾರವೇ ಇದೆ. ಇದು ಸಂತಸ ತಂದಿದೆ. ಮಯಾಂಕ್ ಅಗರ್ವಾಲ್, ಮನೀಶ್ ಪಾಂಡೆ, ಶಾರ್ಧೂಲ್ ಠಾಕೂರ್, ಯಜುವೇಂದ್ರ ಚಹಾಲ್ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ ಎಂದರು.
ಉಭಯ ತಂಡಗಳ ವಿವರ ಇಲ್ಲಿದೆ:
ಭಾರತ
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಕೇದಾರ್ ಜಾದವ್, ಶಿವಂ ದುಬೆ, ರವೀಂದ್ರ ಜಡೇಜಾ, ದೀಪಕ್ ಚಹಾರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ
ಇದನ್ನೂ ಓದಿ: ಸತತ 10ನೇ ಸರಣಿ ಜಯಕ್ಕೆ ಪಣ: ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಭೀತಿ!
ಭಾರತ ಹಾಗೂ ವೆಸ್ಟ್ ಇಂಡೀಸ್ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಇಂದು ನಡೆಯುತ್ತಿರುವ ಮೊದಲ ಪಂದ್ಯದ ಬಳಿಕ, ಉಭಯ ತಂಡಗಳು ವಿಶಾಖಪಟ್ಟಣಂಗೆ ತೆರಳಲಿದೆ. ಡಿಸೆಂಬರ್ 18 ರಂದು 2ನೇ ಏಕದಿನ ಪಂದ್ಯ ನಡೆಯಲಿದೆ. ಡಿಸೆಂಬರ್ 22 ರಂದು 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಕಟಕ್ನ ಬಾರಬತಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.