
ಫ್ಲೋರಿಡಾ(ಆ.07): ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಮಹತ್ವದ 4 ಬದಲಾವಣೆಯೊಂದಿಗೆ ಕಣಕ್ಕಿಳಿದ ಟೀಂ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಶ್ರೇಯಸ್ ಅಯ್ಯರ್ ಹಾಫ್ ಸೆಂಚುರಿ, ದೀಪಕ್ ಹೂಡ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 188 ರನ್ ಸಿಡಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಇಶಾನ್ ಕಿಶನ್ ಕೇವಲ 11 ರನ್ ಸಿಡಿಸಿ ಔಟಾದರು. ಆದರೆ ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಹೂಡ ಜೊತೆಯಾಟದಿಂದ ಟೀಂ ಇಂಡಿಯಾ ಚೇತರಿಸಿಕೊಂಡಿತು. ದೀಪಕ್ ಹೂಡ 25 ಎಸೆತದಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನರೆವಿನಿಂದ 38 ರನ್ ಸಿಡಿಸಿ ಔಟಾದರು. 114 ರನ್ಗೆ ಭಾರತ 2ನೇ ವಿಕೆಟ್ ಕಳೆದುಕೊಂಡಿತು. ಆದರೆ ಶ್ರೇಯಸ್ ಅಯ್ಯರ್ ಹೋರಾಟ ಮುಂದುವರಿಸಿದರು. ಅಯ್ಯರ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು.
ಶ್ರೇಯಸ್ ಅಯ್ಯರ್ 40 ಎಸೆತದಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 64 ರನ್ ಸಿಡಿಸಿ ಔಟಾದರು. ಸಂಜು ಸ್ಯಾಮ್ಸನ್ 15 ರನ್ ಸಿಡಿಸಿ ಔಟಾದರು. ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಜೊತೆಯಾಟ ಟೀಂ ಇಂಡಿಯಾಗೆ ನೆರವಾಯಿತು. ಆದರೆ ಕಾರ್ತಿಕ್ 12 ರನ್ ಸಿಡಿಸಿ ಔಟಾದರು. ಹಾರ್ದಿಕ್ ಪಾಂಡ್ಯ 16 ಎಸೆತದಲ್ಲಿ 28 ರನ್ ಸಿಡಿಸಿ ಔಟಾದರು. ಅಕ್ಸರ್ ಪಟೇಲ್ 9 ರನ್ ಸಿಡಿಸಿ ನಿರ್ಗಮಿಸಿದರು. ಭಾರತ ಒಟ್ಟು 7 ವಿಕೆಟ್ ಕಳೆದುಕೊಂಡು 188ರನ್ ಸಿಡಿಸಿತು.
ಭಾರತ ಹಾಗೂ ವೆಸ್ಟ್ ಇಂಡೀಸ್ ಟಿ20 ಸರಣಿ
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯನ್ನು ಈಗಾಗಲೇ ಟೀಂ ಇಂಡಿಯಾ ಗೆದ್ದುಕೊಂಡಿದೆ. ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 68 ರನ್ ಗೆಲುವು ಸಾಧಿಸಿತ್ತು. ಈ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿತ್ತು. ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮುಗ್ಗರಿಸಿತು. ವಿಂಡೀಸ್ 5 ವಿಕೆಟ್ ಗೆಲುವು ದಾಖಲಿಸಿ ಸರಣಿಯನ್ನು 1-1 ಅಂತರದಲ್ಲಿ ಸಮಬಲಗೊಳಿಸಿತು. ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಕಮ್ಬ್ಯಾಕ್ ಮಾಡಿತು. 7 ವಿಕೆಟ್ ಗೆಲುವು ದಾಖಲಿಸಿದ ಟೀಂ ಇಂಡಿಯಾ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಸಾಧಿಸಿತು. ಮಹತ್ವದ 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 59 ರನ್ ಗೆಲುವು ದಾಖಲಿಸಿತು. ಈ ಮೂಲಕ 3-1 ಅಂತರದಲ್ಲಿ ಸರಣಿ ಕೈವಶ ಮಾಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.