ಆಸೀಸ್‌ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ..!

Suvarna News   | Asianet News
Published : Jan 16, 2020, 11:42 AM IST
ಆಸೀಸ್‌ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ..!

ಸಾರಾಂಶ

ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಕಾಣುವ ಮೂಲಕ ಹಿನ್ನಡೆ ಅನುಭವಿಸಿದೆ. ಇದರ ಬೆನ್ನಲ್ಲೇ ಎರಡನೇ ಪಂದ್ಯ ಆರಂಭಕ್ಕೂ ಮುನ್ನ ಭಾರತದ ಪಾಲಿಗೆ ಮತ್ತೊಂದು ಕಹಿ ಸುದ್ದಿ ಹೊರ ಬಿದ್ದಿದೆ. ಏನದು..? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್...  

ಮುಂಬೈ(ಜ.16): ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳ ಹೀನಾಯ ಸೋಲು ಕಂಡಿತ್ತು. ಇದರ ಬೆನ್ನಲ್ಲೇ ವಿರಾಟ್ ಪಡೆಗೆ ಮತ್ತೊಂದು ಆಘಾರ ಎದುರಾಗಿದ್ದು, ರಾಜ್‌ಕೋಟ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ತಂಡದ ಪ್ರಮುಖ ಆಟಗಾರ ಹೊರಬಿದ್ದಿದ್ದಾರೆ. 

ಇಂಡೋ-ಆಸೀಸ್ ಮೊದಲ ಪಂದ್ಯದಲ್ಲಿ ವಿರಾಟ್ ಪಡೆ ಎಡವಿದ್ದೆಲ್ಲಿ..?

ಬ್ಯಾಟಿಂಗ್‌ ಮಾಡುವ ವೇಳೆ ಚೆಂಡು ತಲೆಗೆ ಅಪ್ಪಳಿಸಿ ಸುಪ್ತಾವಸ್ಥೆಗೆ ತಲುಪಿದ್ದ ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌, ಜ.17ರಂದು ರಾಜ್‌ಕೋಟ್‌ನಲ್ಲಿ ಆಸ್ಪ್ರೇಲಿಯಾ ವಿರುದ್ಧ ನಡೆಯಲಿರುವ 2ನೇ ಏಕದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ತಂಡದೊಂದಿಗೆ ರಾಜ್‌ಕೋಟ್‌ಗೆ ಪ್ರಯಾಣಿಸಲಿಲ್ಲ. ಅವರು ಬೆಂಗಳೂರಿಗೆ ಆಗಮಿಸಲಿದ್ದು, ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ)ನಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ರಿಷಭ್‌ ಪಂತ್‌ ಸುಪ್ತಾವಸ್ಥೆಗೆ ಸಂಬಂಧಿಸಿದಂತೆ ಐಸಿಸಿ ನೂತನ ನಿಯಮಗಳನ್ನು ಹೊರತಂದ ಬಳಿಕ, ಪಂದ್ಯದಿಂದ ಹೊರಬಿದ್ದ ಭಾರತದ ಮೊದಲ ಆಟಗಾರ ಎನಿಸಿದ್ದಾರೆ. 

ರೋಹಿತ್, ಕೊಹ್ಲಿ ಪಾಲಾದ ICC ಪ್ರತಿಷ್ಠಿತ ಪ್ರಶಸ್ತಿಗಳು

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರಿಷಭ್ ಪಂತ್ 28 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. 44ನೇ ಓವರ್‌ನಲ್ಲಿ ಪ್ಯಾಟ್ ಕಮಿನ್ಸ್ ಎಸೆದ ಬೌಲರ್ ಪಂತ್ ಬ್ಯಾಟ್ ಸವರಿ ಹೆಲ್ಮೆಟ್‌ಗೆ ಬಡಿದು ಚೆಂಡು ಆಸ್ಟನ್ ಟರ್ನರ್ ಕೈಸೇರಿತ್ತು. ಇನ್ನು ಪಂತ್ ವಿಕೆಟ್ ಕೀಪಿಂಗ್ ಮಾಡಲು ಮೈದಾನಕ್ಕೆ ಇಳಿದಿರಲಿಲ್ಲ. ಪಂತ್ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ವಿಕೆಟ್ ಕೀಪಿಂಗ್ ಮಾತ್ರ ನಿಭಾಯಿಸಿದ್ದರು. ಎರಡನೇ ಏಕದಿನ ಪಂದ್ಯದಲ್ಲೂ ರಾಹುಲ್ ವಿಕೆಟ್ ಕೀಪಿಂಗ್ ಪಾತ್ರ ನಿರ್ವಹಿಸುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಜ.19ರಂದು ನಡೆಯಲಿರುವ 3ನೇ ಏಕದಿನ ಪಂದ್ಯಕ್ಕೆ ಅವರ ಲಭ್ಯತೆ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ