Women's Asia Cup: ಭಾರತಕ್ಕೆ 7ನೇ ಏಷ್ಯಾಕಪ್ ಟ್ರೋಫಿ ಗುರಿ

Published : Oct 15, 2022, 10:42 AM IST
Women's Asia Cup: ಭಾರತಕ್ಕೆ 7ನೇ ಏಷ್ಯಾಕಪ್ ಟ್ರೋಫಿ ಗುರಿ

ಸಾರಾಂಶ

ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಪ್ರಶಸ್ತಿಗಾಗಿ ಭಾರತ-ಲಂಕಾ ಫೈಟ್ ಕಳೆದ ಬಾರಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ಭಾರತ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿರುವ ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡ

ಸೈಲೆಟ್‌(ಅ.15): 2004ರ ಚೊಚ್ಚಲ ಆವೃತ್ತಿಯಿಂದಲೂ ಸತತ 6 ಬಾರಿ ಚಾಂಪಿಯನ್‌ ಆಗಿ, ಕಳೆದ ಬಾರಿ ರನ್ನರ್‌-ಅಪ್‌ ಆಗಿರುವ ಭಾರತ ಮಹಿಳಾ ಕ್ರಿಕೆಟ್‌ ತಂಡ ಏಷ್ಯಾ ಕಪ್‌ ಟಿ20 ಟೂರ್ನಿಯಲ್ಲಿ 7ನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದು, ಶನಿವಾರ ಶ್ರೀಲಂಕಾ ವಿರುದ್ಧ ಫೈನಲ್‌ ಪಂದ್ಯದಲ್ಲಿ ಸೆಣಸಲಿದೆ.

ಏಕದಿನ ಮಾದರಿಯಲ್ಲಿ ನಡೆದಿದ್ದ ಮೊದಲ 4 ಆವೃತ್ತಿಗಳಲ್ಲೂ ಭಾರತ, ಲಂಕಾ ವಿರುದ್ಧವೇ ಗೆದ್ದು ಚಾಂಪಿಯನ್‌ ಆಗಿತ್ತು. ಬಳಿಕ 2 ಬಾರಿ ಪಾಕಿಸ್ತಾನಕ್ಕೆ ಸೋಲುಣಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದ ಭಾರತ, ಕಳೆದ ವರ್ಷ ಫೈನಲ್‌ನಲ್ಲಿ ಬಾಂಗ್ಲಾದೇಶಕ್ಕೆ ಶರಣಾಗಿತ್ತು. ಮತ್ತೊಂದೆಡೆ ಲಂಕಾಕ್ಕೆ ಇದು 5ನೇ ಫೈನಲ್‌ ಆಗಿದ್ದು, ಭಾರತದ ವಿರುದ್ಧ 4 ಬಾರಿ ಸೋಲಿಗೆ ಸೇಡು ತೀರಿಸಿಕೊಂಡು ಚೊಚ್ಚಲ ಪ್ರಶಸ್ತಿ ಗೆಲ್ಲಲು ಎದುರು ನೋಡುತ್ತಿದೆ.

ಭಾರತಕ್ಕೆ ಶರಣಾಗಿದ್ದ ಲಂಕಾ

ಟೂರ್ನಿಯಲ್ಲಿ ಭಾರತ ತನ್ನ ಮೊದಲ ಪಂದ್ಯದಲ್ಲೇ ಶ್ರೀಲಂಕಾ ಸವಾಲನ್ನು ಎದುರಿಸಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿ 6 ವಿಕೆಟ್‌ಗೆ 150 ರನ್‌ ಗಳಿಸಿದ್ದ ಭಾರತ, ಲಂಕಾವನ್ನು 109 ರನ್‌ಗೆ ಆಲೌಟ್‌ ಮಾಡಿ 41 ರನ್‌ ಜಯ ಸಾಧಿಸಿತ್ತು. ಲೀಗ್‌ ಹಂತದಲ್ಲಿ ಆಡಿದ 6 ಪಂದ್ಯಗಳಲ್ಲಿ 5ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಸೆಮಿಫೈನಲ್‌ಗೇರಿದ್ದ ಭಾರತ, ಸೆಮೀಸ್‌ನಲ್ಲಿ ಥಾಯ್ಲೆಂಡ್‌ಗೆ ಸೋಲುಣಿಸಿ ಫೈನಲ್‌ಗೇರಿದರೆ, 3ನೇ ಸ್ಥಾನಿಯಾಗಿ ಸೆಮೀಸ್‌ಗೇರಿ ಸೆಮೀಸ್‌ನಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದು ಶ್ರೀಲಂಕಾ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದೆ.

ಪಂದ್ಯ ಆರಂಭ: ಮಧ್ಯಾಹ್ನ 1ಕ್ಕೆ, 
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

ಆಸ್ಪ್ರೇಲಿಯಾ-ಇಂಗ್ಲೆಂಡ್‌ 3ನೇ ಟಿ20 ಮಳೆಗೆ ಬಲಿ

ಕ್ಯಾನ್ಬೆರ್ರಾ: ಆಸ್ಪ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯ ಮಳೆಗೆ ಆಹುತಿಯಾಗಿದ್ದು, ಮೊದಲೆರಡು ಪಂದ್ಯಗಳನ್ನು ಗೆದ್ದಿದ್ದ ಪ್ರವಾಸಿ ಇಂಗ್ಲೆಂಡ್‌ 2-0 ಅಂತರದಲ್ಲಿ ಸರಣಿ ತನ್ನದಾಗಿಸಿಕೊಂಡಿತು. ಶುಕ್ರವಾರದ ಪಂದ್ಯಕ್ಕೆ ಹಲವು ಬಾರಿ ಮಳೆ ಅಡ್ಡಿಪಡಿಸಿತು. ಹೀಗಾಗಿ ತಲಾ 12 ಓವರ್‌ ಪಂದ್ಯ ನಿಗದಿಪಡಿಸಲಾಯಿತು. ಬಟ್ಲರ್‌(65) ಅರ್ಧಶತಕದ ನೆರವಿನಿಂದ ಇಂಗ್ಲೆಂಡ್‌ 2 ವಿಕೆಟ್‌ಗೆ 112 ರನ್‌ ಗಳಿಸಿತು. ಬಳಿಕ ಆಸೀಸ್‌ 3.5 ಓವರಲ್ಲಿ 3 ವಿಕೆಟ್‌ಗೆ 30 ರನ್‌ ಗಳಿಸಿದ್ದಾಗ ಮತ್ತೆ ಮಳೆ ಸುರಿದ ಕಾರಣ ಪಂದ್ಯ ರದ್ದುಗೊಳಿಸಲಾಯಿತು.

ಟಿ20: ಮೇಘಾಲಯ ವಿರುದ್ಧ ರಾಜ್ಯಕ್ಕೆ ಜಯ

ಮೊಹಾಲಿ: ಮುಷ್ತಾಕ್‌ ಅಲಿ ಟಿ20 ಟೂರ್ನಿಯಲ್ಲಿ ಕಳೆದ ಬಾರಿ ರನ್ನರ್‌-ಅಪ್‌ ಕರ್ನಾಟಕ 2ನೇ ಗೆಲುವು ದಾಖಲಿಸಿದೆ. ಶುಕ್ರವಾರ ಎಲೈಟ್‌ ‘ಸಿ’ ಗುಂಪಿನ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ರಾಜ್ಯ ತಂಡ 9 ವಿಕೆಟ್‌ ಜಯಗಳಿಸಿತು. ಇದರೊಂದಿಗೆ 8 ಅಂಕಗಳೊಂದಿಗೆ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

T20 World Cup ಟೂರ್ನಿಗೂ ಮುನ್ನ ನ್ಯೂಜಿಲೆಂಡ್ ಮಣಿಸಿ ತ್ರಿಕೋನ ಸರಣಿ ಗೆದ್ದ ಪಾಕಿಸ್ತಾನ..!

ಮೊದಲು ಬ್ಯಾಟ್‌ ಮಾಡಿದ ಮೇಘಾಲಯವನ್ನು ವೇಗಿ ವೈಶಾಖ್‌ ಕಾಡಿದರು. ಮೇಘಾಲಯ 20 ಓವರಲ್ಲಿ 8 ವಿಕೆಟ್‌ಗೆ ಕೇವಲ 89 ರನ್‌ ಗಳಿಸಿತು. ವೈಶಾಕ್‌ 4 ಓವರಲ್ಲಿ ಕೇವಲ 5 ರನ್‌ ನೀಡಿ 3 ವಿಕೆಟ್‌ ಪಡೆದರು. ರಾಜ್ಯ ತಂಡ 10.1 ಓವರಲ್ಲಿ ಗುರಿ ತಲುಪಿತು. ಪಡಿಕ್ಕಲ್‌ ಶೂನ್ಯಕ್ಕೆ ನಿರ್ಗಮಿಸಿದ ಬಳಿಕ ನಾಯಕ ಮಯಾಂಕ್‌ ಅಗರ್‌ವಾಲ್‌(47), ಮನೀಶ್‌ ಪಾಂಡೆ(42) ತಂಡವನ್ನು ಗೆಲುವಿನ ದಡ ಸೇರಿಸಿದರು. ಕರ್ನಾಟಕ ತನ್ನ ಮುಂದಿನ ಪಂದ್ಯವನ್ನು ಭಾನುವಾರ ಜಮ್ಮು-ಕಾಶ್ಮೀರ ವಿರುದ್ಧ ಆಡಲಿದೆ.

ಸ್ಕೋರ್‌: 
ಮೇಘಾಲಯ 20 ಓವರಲ್ಲಿ 89/8 (ಸಂಗ್ಮಾ 34, ತಿವಾರಿ 22, ವೈಶಾಕ್‌ 3-5), 
ಕರ್ನಾಟಕ 10.1 ಓವರಲ್ಲಿ 90/1 (ಮಯಾಂಕ್‌ 47*, ಮನೀಶ್‌ 42*, ಅಭಿಷೇಕ್‌ 1-15)

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌
ಕುಲ್ದೀಪ್-ಪ್ರಸಿದ್ದ್ ಮಾರಕ ದಾಳಿ; ಏಕದಿನ ಸರಣಿ ಗೆಲ್ಲಲು ಭಾರತಕ್ಕೆ ಸ್ಪರ್ಧಾತ್ಮಕ ಗುರಿ