
ಬೆಂಗಳೂರು: 2025ರ ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯುಪಿಎಲ್) ಆಟಗಾರ್ತಿಯರ ಮಿನಿ ಹರಾಜು ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ. ಕೇವಲ 19 ಸ್ಥಾನಗಳಿಗೆ ಹರಾಜು ನಡೆಯಲಿದ್ದು, 91 ಭಾರತೀಯರು ಸೇರಿ ಒಟ್ಟು 120 ಮಂದಿ ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ.
ಕಳೆದ ಬಾರಿ ತಂಡದಲ್ಲಿದ್ದ ಬಹುತೇಕ ಆಟಗಾರ್ತಿಯರನ್ನು ಇತ್ತೀಚೆಗೆ 5 ಫ್ರಾಂಚೈಸಿಗಳು ತನ್ನಲ್ಲೇ ಉಳಿಸಿಕೊಂಡಿದ್ದವು. ಕೆಲವೇ ಕೆಲ ಆಟಗಾರ್ತಿಯರನ್ನು ತಂಡದಿಂದ ಕೈಬಿಡಲಾಗಿದ್ದು, ಆ ಸ್ಥಾನಗಳನ್ನು ಹರಾಜಿನಲ್ಲಿ ಭರ್ತಿ ಮಾಡಲಿದೆ. ಹಾಲಿ ಚಾಂಪಿಯನ್ ಆರ್ಸಿಬಿ ₹3.25 ಕೋಟಿ ಹಣ ಹೊಂದಿದ್ದು, ಹರಾಜಿನಲ್ಲಿ ನಾಲ್ವರು ಆಟಗಾರ್ತಿಯರನ್ನು ಖರೀದಿಸಬೇಕಿದೆ. ಡೆಲ್ಲಿಯ 13 ವರ್ಷದ ಅನ್ಶು ನಾಗರ್ ಹರಾಜಿನಲ್ಲಿ ಪಾಲ್ಗೊಳ್ಳಲಿರುವ ಅತಿ ಕಿರಿಯ ಆಟಗಾರ್ತಿ.
ವಿಶ್ವ ಅಥ್ಲೆಟಿಕ್ ಮ್ಯೂಸಿಯಂ ಸೇರಿದ ಚೋಪ್ರಾರ ಪ್ಯಾರಿಸ್ ಒಲಿಂಪಿಕ್ಸ್ ಜೆರ್ಸಿ
ರಾಜ್ಯದ ನಾಲ್ವರು
ಹರಾಜಿನಲ್ಲಿ ಈ ಬಾರಿ ಕರ್ನಾಟಕದ ನಾಲ್ವರು ಪಾಲ್ಗೊಳ್ಳಲಿದ್ದಾರೆ. ಶುಭಾ ಸತೀಶ್, ಪ್ರತ್ಯುಷಾ ಸಿ., ಪ್ರತ್ಯೂಷಾ ಕುಮಾರ್ ಹಾಗೂ ನಿಕಿ ಪ್ರಸಾದ್ ಹರಾಜಿನಲ್ಲಿ ಅದೃಷ್ಠ ಪರೀಕ್ಷೆಗಿಳಿಯಲಿದ್ದಾರೆ.
ಹರಾಜು ಆರಂಭ: ಮಧ್ಯಾಹ್ನ 3 ಗಂಟೆಗೆ,
ನೇರಪ್ರಸಾರ: ಜಿಯೋ ಸಿನಿಮಾ, ಸ್ಪೋರ್ಟ್ಸ್ 18, ಸ್ಟಾರ್ಸ್ಪೋರ್ಟ್ಸ್.
ರಾಷ್ಟ್ರೀಯ ವನಿತಾ ಏಕದಿನ: ರಾಜ್ಯಕ್ಕೆ ಮೊದಲ ಸೋಲು
ಲಾಹ್ಲಿ(ಹರ್ಯಾಣ): ಈ ಬಾರಿ ರಾಷ್ಟ್ರೀಯ ಮಹಿಳಾ ಏಕದಿನ ಟೂರ್ನಿಯಲ್ಲಿ ಕರ್ನಾಟಕ ತಂಡ ಮೊದಲ ಸೋಲನುಭವಿಸಿದೆ. ಆರಂಭಿಕ ನಾಲ್ಕೂ ಪಂದ್ಯಗಳಲ್ಲಿ ಗೆದ್ದಿದ್ದ ರಾಜ್ಯ ತಂಡ, ಶನಿವಾರ ಬೆಂಗಾಲ್ ವಿರುದ್ಧ 7 ವಿಕೆಟ್ಗಳಿಂದ ಪರಾಭವಗೊಂಡಿತು. ಮೊದಲು ಬ್ಯಾಟ್ ಮಾಡಿದ ಕರ್ನಾಟಕ 43.3 ಓವರ್ಗಳಲ್ಲಿ 138 ರನ್ಗೆ ಆಲೌಟಾಯಿತು. ಕೆ.ಪ್ರತ್ಯೂಷಾ (39) ಹೊರತುಪಡಿಸಿ ಇತರರು ಕೈಕೊಟ್ಟರು.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಮೈಲುಗಲ್ಲು: ಆಸೀಸ್ ಎದುರು ಅಪರೂಪದ ದಾಖಲೆ ನಿರ್ಮಾಣ!
ಸಿ.ಪ್ರತ್ಯುಷಾ 23, ಅದಿತಿ ರಾಜೇಶ್ 23, ಶುಭಾ ಸತೀಶ್ 20 ರನ್ ಬಾರಿಸಿದರು. ಸುಲಭ ಗುರಿ ಬೆನ್ನತ್ತಿದ ಬೆಂಗಾಲ್ 34.5 ಓವರ್ಗಳಲ್ಲಿ 3 ವಿಕೆಟ್ ನಷ್ಟದಲ್ಲಿ ಗೆಲುವು ತನ್ನದಾಗಿಸಿಕೊಂಡಿತು. ಧರಾ ಗುಜ್ಜರ್ ಔಟಾಗದೆ 62 ರನ್ ಸಿಡಿಸಿದರು. ಕರ್ನಾಟಕ ‘ಇ’ ಗುಂಪಿನಲ್ಲಿ 5 ಪಂದ್ಯಗಳಲ್ಲಿ 16 ಅಂಕದೊಂದಿಗೆ 2ನೇ ಸ್ಥಾನದಲ್ಲಿದೆ. ಡಿ.16ಕ್ಕೆ ತ್ರಿಪುರಾ ವಿರುದ್ಧ ಸೆಣಸಾಡಲಿದೆ.
ಭಾರತ 8 ವಿಂಡೀಸ್ ಮಹಿಳಾ ಟಿ20 ಸರಣಿ ಇಂದಿನಿಂದ ಆರಂಭ
ಮುಂಬೈ: ಆಸ್ಟ್ರೇಲಿಯಾದಲ್ಲಿ 4 ದಿನಗಳ ಹಿಂದಷ್ಟೇ ಮುಕ್ತಾಯ ಗೊಂಡ ಏಕದಿನ ಸರಣಿಯಲ್ಲಿ ವೈಟ್ಾಶ್ ಮುಖಭಂಗಕ್ಕೆ ಒಳಗಾದ ಭಾರತ ಮಹಿಳಾ ತಂಡ, ಭಾನುವಾರದಿಂದ ವೆಸ್ ಇಂಡೀಸ್ ವಿರುದ್ಧ ತವರಿನಲ್ಲಿ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಎಲ್ಲಾ ಪಂದ್ಯಗಳಿಗೂ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.
ಭಾರತ ತಂಡ 2019ರಿಂದ ಈ ವರೆಗೂ ವಿಂಡೀಸ್ ವಿರುದ್ಧ 8 ಟಿ20 ಪಂದ್ಯಗಳನ್ನಾಡಿದ್ದು, ಎಲ್ಲದರಲ್ಲೂ ಗೆಲುವು ಸಾಧಿಸಿದೆ. ಆದರೆ ಕಳೆದ ಟಿ20 ವಿಶ್ವಕಪ್ನ ಕಳಪೆ ಪ್ರದರ್ಶನ, ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಸೋಲು ಆತ್ಮವಿಶ್ವಾಸ ಕುಗ್ಗಿಸಿದೆ. ಪ್ರಮುಖವಾಗಿ ಬ್ಯಾಟರ್ಗಳು ಲಯ ಕಂಡುಕೊಳ್ಳಲು ಪರದಾಡುತ್ತಿದ್ದಾರೆ.
ವಿಶ್ವ ಅಥ್ಲೆಟಿಕ್ ಮ್ಯೂಸಿಯಂ ಸೇರಿದ ಚೋಪ್ರಾರ ಪ್ಯಾರಿಸ್ ಒಲಿಂಪಿಕ್ಸ್ ಜೆರ್ಸಿ
ಹರ್ಮನ್ ಪ್ರೀತ್ ಕೌರ್ ಬ್ಯಾಟಿಂಗ್ ಜೊತೆ ನಾಯಕತ್ವದಲ್ಲೂ ವಿಫಲರಾಗುತ್ತಿದ್ದು, ಅವರ ಮೇಲೆ ಭಾರಿ ಒತ್ತಡವಿದೆ. ವಿಂಡೀಸ್ ತಂಡ ಹೇಲಿ ಮ್ಯಾಥ್ಯೂಸ್ ನಾಯಕತ್ವದಲ್ಲಿ ಆಡಲಿದೆ.
• ಪಂದ್ಯ ಆರಂಭ: ಸಂಜೆ 7 ಗಂಟೆಗೆ
• ನೇರಪ್ರಸಾರ: ಸ್ಪೋರ್ಟ್ಸ್ 18 ಚಾನೆಲ್, ಜಿಯೋ ಸಿನಿಮಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.