
ಬೆಂಗಳೂರು: ಶೋಭನಾ ಆಶಾ ಮಾರಕ ದಾಳಿಯಿಂದಾಗಿ 2ನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯುಪಿಎಲ್)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಗೆಲುವಿನ ಆರಂಭ ಪಡೆದಿದೆ. ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ 2 ರನ್ ರೋಚಕ ಗೆಲುವು ಲಭಿಸಿತು.
ಮೊದಲು ಬ್ಯಾಟ್ ಮಾಡಿದ ಬೆಂಗಳೂರು ರಿಚಾ ಘೋಷ್ ಹಾಗೂ ಶಬ್ಬಿನೇನಿ ಮೇಘನಾ ಅರ್ಧಶತಕಗಳ ನೆರವಿನಿಂದ 20 ಓವರಲ್ಲಿ 6 ವಿಕೆಟ್ಗೆ 157 ರನ್ ಕಲೆಹಾಕಿತು. ನಾಯಕಿ ಸ್ಮೃತಿ ಮಂಧನಾ(13), ಸೋಫಿ ಡಿವೈನ್(01), ಎಲೈಸ್ ಪೆರ್ರಿ(08) ನಿರೀಕ್ಷೆ ಉಳಿಸಿಕೊಳ್ಳಲು ವಿಫಲರಾದರು. ಆದರೆ ಮೇಘನಾ 53 ಹಾಗೂ ರಿಚಾ 37 ಎಸೆತಗಳಲ್ಲಿ 62 ರನ್ ಸಿಡಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು.
ಗುರಿ ಬೆನ್ನತ್ತಿದ ಯುಪಿ ವಾರಿಯರ್ಸ್ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಕೊನೆ ಎಸೆತದಲ್ಲಿ 5 ರನ್ ಬೇಕಿದ್ದಾಗ ಆರ್ಸಿಬಿ ಗೆಲುವನ್ನು ತನ್ನತ್ತ ಒಲಿಸಿಕೊಂಡಿತು. ಗ್ರೇಸ್ ಹ್ಯಾರಿಸ್ 38, ಶ್ವೇತಾ ಶೆರಾವತ್ 31 ರನ್ ಗಳಿಸಿದರು. ಶೋಭಾ 22 ರನ್ಗೆ 5 ವಿಕೆಟ್ ಕಿತ್ತರು.
ಮಹಿಳಾ IPL ಒಪನಿಂಗ್ ಸೆರಮನಿಯಲ್ಲಿ ಕೆಲಸ ಮಾಡಿದ ಕ್ಯಾಮೆರಾಮೆನ್ ಹೃದಯಾಘಾತದಿಂದ ಸಾವು!
ಟರ್ನಿಂಗ್ ಪಾಯಿಂಟ್: ಒಂದು ಹಂತದವರೆಗೂ ಪಂದ್ಯ ಯುಪಿ ವಾರಿಯರ್ಸ್ ಹಿಡಿತದಲ್ಲಿತ್ತು. ಆದರೆ ಸ್ಟ್ರಾಟರ್ಜಿಕ್ ಟೈಮ್ ಔಟ್ ಬಳಿಕ ಬೌಲಿಂಗ್ ಮಾಡಿದ ಶೋಭನಾ ಆಶಾ ಒಂದೇ ಓವರ್ನಲ್ಲಿ 3 ವಿಕೆಟ್ ಕಬಳಿಸಿ ಪಂದ್ಯ ಆರ್ಸಿಬಿ ಪರ ವಾಲುವಂತೆ ಮಾಡಿದರು. ಹೀಗಿದ್ದೂ ಪಂದ್ಯ ಕೊನೆಯ ಎಸೆತದವರೆಗೂ ರೋಚಕತೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಯಿತು.
ಇಂದಿನ ಪಂದ್ಯ: ಗುಜರಾತ್-ಮುಂಬೈ ಇಂಡಿಯನ್ಸ್
ಡಬ್ಲ್ಯುಪಿಎಲ್ಗೆ ಗುಜರಾತ್ ಜೈಂಟ್ಸ್ ಸಜ್ಜು
ಬೆಂಗಳೂರು: ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯುಪಿಎಲ್)ನ 2ನೇ ಆವೃತ್ತಿಗೆ ಗುಜರಾಜ್ ಜೈಂಟ್ಸ್ ಸಜ್ಜಾಗಿದ್ದು, ಕಳೆದ ಆವೃತ್ತಿಯ ಕಳಪೆ ಆಟವನ್ನು ಮರೆತು ಈ ಬಾರಿ ಸುಧಾರಿತ ಪ್ರದರ್ಶನ ನೀಡುವ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲಿದೆ.
'ನಂಗೂ ಭಯ ಆಗುತ್ತೆ..!': ಗರ್ಲ್ ಫ್ಯಾನ್ಗೆ ಯಶಸ್ವಿ ಜೈಸ್ವಾಲ್ ಹೀಗಂದಿದ್ದೇಕೆ..? ವಿಡಿಯೋ ವೈರಲ್
ಗುಜರಾತ್ ಭಾನುವಾರ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ತಂಡದ ಸಿದ್ಧತೆ ಬಗ್ಗೆ ಶನಿವಾರ ಕೋಚ್ ಮೈಕೆಲ್ ಕ್ಲಿಂಗರ್, ಸಲಹೆಗಾರ್ತಿ ಮಿಥಾಲಿ ರಾಜ್, ನಾಯಕಿ ಬೆಥ್ ಮೂನಿ, ಉಪನಾಯಕಿ ಸ್ನೇಹ್ ರಾಣಾ ಮುಕ್ತವಾಗಿ ಮಾತನಾಡಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.