ದೆಹಲಿ ಗಲಭೆ; ಜನತೆಯಲ್ಲಿ ಸೆಹ್ವಾಗ್, ಯುವರಾಜ್ ಮನವಿ!

Chethan Kumar   | Asianet News
Published : Feb 26, 2020, 08:32 PM ISTUpdated : Feb 26, 2020, 08:33 PM IST
ದೆಹಲಿ ಗಲಭೆ; ಜನತೆಯಲ್ಲಿ ಸೆಹ್ವಾಗ್, ಯುವರಾಜ್ ಮನವಿ!

ಸಾರಾಂಶ

ಪೌರತ್ವ ಕಾಯ್ದೆ ಪರ ವಿರೋಧ ಹೋರಾಟ ಹಿಂಸಾರೂಪಕ್ಕೆ ತಿರುಗಿ 20 ಮಂದಿ ಸಾವೀಗೀಡಾಗಿದ್ದಾರೆ. ಉಗ್ರ ಸ್ವರೂಪ ಪಡೆದುಕೊಂಡಿರುವ ಹೋರಾಟ ರಾಷ್ಟ್ರ ರಾಜಧಾನಿಯನ್ನೇ ಸ್ಥಬ್ತವಾಗಿಸಿದೆ. ಇದೀಗ ದೆಹಲಿ ಗಲಬೆ ಕುರಿತು ಟೀಂ ಇಂಡಿಯಾ ಕ್ರಿಕೆಟಿಗರು ಪ್ರತಿಕ್ರಿಯಿಸಿದ್ದಾರೆ.  

ದೆಹಲಿ(ಫೆ.26): ರಾಷ್ಟ್ರ ರಾಜಧಾನಿ ದೆಹಲಿ ಹೊತ್ತಿ ಉರಿಯುತ್ತಿದೆ. ಪೌರತ್ವ ಪರ ವಿರೋಧ ಹೋರಾಟದ ಹಿಂಸೆಯಲ್ಲಿ 20 ಮಂದಿ ಸಾವೀಗೀಡಾಗಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಪರಿಸ್ಥಿತಿ ಹತೋಟಿಗೆ ಬರುತ್ತಿಲ್ಲ. ಇದೀಗ ದೆಹಲಿ ಗಲಭೆ ಕುರಿತು ಮಾಜಿ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್ ಹಾಗೂ ಯುವರಾಜ್ ಸಿಂಗ್ ಮನವಿ ಮಾಡಿದ್ದಾರೆ. 

ದೆಹಲಿ ಗಲಭೆ ಕುರಿತು ಪ್ರತಿಕ್ರಿಯಿಸಿರುವ ಯುವರಾಜ್ ಸಿಂಗ್, ದೆಹಲಿ ಪರಿಸ್ಥಿತಿ ಬೆಚ್ಚಿ ಬೀಳಿಸುವಂತಿದೆ. ಈ ಸಂದರ್ಭದಲ್ಲಿ ಎಲ್ಲರು ಶಾಂತಿಯಿಂದಿರಿ ಎಂದು ಮನವಿ ಮಾಡುತ್ತೇನೆ. ಅಧಿಕಾರಿಗಳು ಪೊಲೀಸಲು ಪರಿಸ್ಥಿತಿಯನ್ನು ಹತೋಟಿ ತರಲಿದ್ದಾರೆ. ನಾವೆಲ್ಲ ಮನುಷ್ಯರು. ನಮಗೆ ಪ್ರೀತಿ, ವಿಶ್ವಾಸ, ಗೌರವ ಮುಖ್ಯ ಎಂದು ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ.

 

ದೆಹಲಿಯಲ್ಲಿ ನಡೆಯುತ್ತಿುವ ಗಲಭೆ ದುರದೃಷ್ಟಕರ. ನಾನು ಎಲ್ಲರಲ್ಲಿ ಮನವಿ ಮಾಡುತ್ತೇನೆ. ಎಲ್ಲರೂ ಶಾಂತಿ ಹಾಗೂ ಸಹನೆಯಿಂದಿರಿ. ರಾಷ್ಟ್ರ ರಾಜಧಾನಿಯಲ್ಲಿ ಯಾರೇ ಗಾಯಗೊಂಡರೂ, ಯಾರೇ ಸಾವನ್ನಪ್ಪಿದರೂ ಅದು ಅತೀ ದೊಡ್ಡ ನಷ್ಟ. ಹೀಗಾಗಿ ಎಲ್ಲರೂ ಶಾಂತಿ ಕಾಪಾಡಿ ಎಂದು ವಿರೇಂದ್ರ ಸೆಹ್ವಾಗ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

 

ಹರ್ಭಜನ್ ಸಿಂಗ್ ಕೂಡ ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ